Homeಅಂತರಾಷ್ಟ್ರೀಯಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

- Advertisement -
- Advertisement -

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ ಸಾಧಿಸಿವೆ ಎಂದು ವರದಿಯಾಗಿದೆ.

ಭಾನುವಾರ (ಜ.18) ಎರಡೂ ಪಕ್ಷಗಳು ದೇಶವನ್ನು ಮತ್ತೆ ಒಗ್ಗೂಡಿಸುವ ಗುರಿಯನ್ನು ಹೊಂದಿರುವ ತಕ್ಷಣದ ಕದನ ವಿರಾಮವನ್ನು ಘೋಷಿಸಿವೆ ಎಂದು ವರದಿ ಹೇಳಿದೆ.

ಕದನ ವಿರಾಮಕ್ಕೂ ಮುನ್ನ, ಸಿರಿಯಾ ಸೇನೆಯು ತನ್ನ ಮಿಲಿಟರಿ ವಾಯುನೆಲೆ ಮತ್ತು ತಬ್ಕಾ ಅಣೆಕಟ್ಟು (ಸಿರಿಯಾದ ಅತಿದೊಡ್ಡ) ಒಳಗೊಂಡ ಆಯಕಟ್ಟಿನ ಪಟ್ಟಣವಾದ ತಬ್ಕಾವನ್ನು ವಶಪಡಿಸಿಕೊಂಡಿದೆ. ದೇಶದ ಅತಿದೊಡ್ಡ ಅಲ್-ಒಮರ್ ತೈಲ ಕ್ಷೇತ್ರ ಕೂಡ ಸೇನೆಯ ವಶವಾಗಿದೆ.

ಎಸ್‌ಡಿಎಫ್ ಗುಂಪುಗಳನ್ನು ಯೂಫ್ರಟಿಸ್ ನದಿಯ ಪೂರ್ವಕ್ಕೆ ಹಿಮ್ಮೆಟ್ಟಿಸಿದ ಸರ್ಕಾರಿ ಪಡೆಗಳು, ರಕ್ಕಾ ಮತ್ತು ಅಲೆಪ್ಪೊದ ಪೂರ್ವಕ್ಕೆ ಡೀರ್ ಹಫರ್ ಹಾಗೂ ಮಸ್ಕಾನಾ ಸೇರಿದಂತೆ ಹಲವು ಪಟ್ಟಣಗಳಿಗೆ ಪ್ರವೇಶಿಸಿವೆ.

ಅಧ್ಯಕ್ಷ ಅಹ್ಮದ್ ಅಲ್-ಶರಾ ಮತ್ತು ಎಸ್‌ಡಿಎಫ್‌ ನಾಯಕ ಮಜ್ಲೌಮ್ ಅಬ್ದಿ ಅವರು 14 ಅಂಶಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಎಲ್ಲಾ ಎಸ್‌ಡಿಎಫ್‌ ಪಡೆಗಳು ಯೂಫ್ರಟಿಸ್ ನದಿಯ ಪೂರ್ವಕ್ಕೆ ಹಿಂದೆ ಸರಿಯಬೇಕು ಎಂಬುವುದು ಒಪ್ಪಂದದ ಪ್ರಮುಖ ಅಂಶವಾಗಿದೆ.

ದೀರ್ ಎಜ್-ಜೋರ್, ರಖ್ಖಾ ಮತ್ತು ಹಸಾಕಾ ಪ್ರಾಂತ್ಯಗಳ ಸಂಪೂರ್ಣ ಆಡಳಿತವನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು. ಎಸ್‌ಡಿಎಫ್‌ ಸಂಘಟನೆಯನ್ನು ವಿಸರ್ಜಿಸಿ, ಅದರ ಹೋರಾಟಗಾರರನ್ನು ಸಿರಿಯನ್ ರಾಷ್ಟ್ರೀಯ ಸೈನ್ಯಕ್ಕೆ ಸೇರಿಸಿಕೊಳ್ಳಲಾಗುವುದು ಎಂಬುವುದು ಒಪ್ಪಂದಲ್ಲಿದೆ.

ಈ ಬೆಳವಣಿಗೆಯ ಭಾಗವಾಗಿ, ಸಿರಿಯಾ ಸರ್ಕಾರವು ಕುರ್ದಿಶ್ ಭಾಷೆಯನ್ನು ರಾಷ್ಟ್ರೀಯ ಭಾಷೆಯೆಂದು ಅಧಿಕೃತವಾಗಿ ಗುರುತಿಸಿದೆ ಮತ್ತು ಕುರ್ದಿಶ್ ಸಿರಿಯನ್ನರಿಗೆ ನಾಗರಿಕತ್ವವನ್ನು ಮರುಸ್ಥಾಪಿಸಿದೆ ಎಂದು ವರದಿಯಾಗಿದೆ.

ಈ ಒಪ್ಪಂದವು 2024ರಲ್ಲಿ ಅಸ್ಸಾದ್ ಆಡಳಿತದ ಪತನದ ನಂತರ ಸಿರಿಯಾವನ್ನು ಪುನರ್ ಏಕೀಕರಣಗೊಳಿಸುವತ್ತ ಮಹತ್ವದ ಹೆಜ್ಜೆಯೆಂದು ಪರಿಗಣಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...