Homeದಲಿತ್ ಫೈಲ್ಸ್ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತ ವ್ಯಕ್ತಿಯು ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ದಿವಾಕರ್ ಗೆಲ್ತಂಡಾ ಗ್ರಾಮದ ನಿವಾಸಿ ಚಂದ್ರಸೇನ್ ಅವರಿಗೆ ಟ್ರ್ಯಾಕ್ಟರ್ ಖರೀದಿಸಲು ₹4.5 ಲಕ್ಷ ಸಾಲ ನೀಡಿದ್ದರು. ವಾಪಸ್ ಕೇಳಿದಾಗ, ಚಂದ್ರಸೇನ್, ಅವರ ಮಗ ಪಪ್ಪು, ಗೋಧನ್ ಲಾಲ್ ಮತ್ತು ಇತರರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಅವರನ್ನು ಥಳಿಸಿ, ಜಾತಿ ಆಧಾರಿತ ನಿಂದನೆ ಮಾಡಿ, ಬಲವಂತವಾಗಿ ತಲೆ ಬೋಳಿಸಿದ್ದಾರೆ. ಮೀಸೆ ಮತ್ತು ಹುಬ್ಬುಗಳನ್ನು ಕತ್ತರಿಸಿ, ಗ್ರಾಮಸ್ಥರ ಮುಂದೆ ಅವರ ಮುಖಕ್ಕೆ ಕೆಸರು ಬಳಿದು ಅವಮಾನಿಸಿದ್ದಾರೆ ಎಂದು ಹೇಳಲಾಗಿದೆ.

ದೂರಿನ ನಂತರ, ನವಾಬ್‌ಗಂಜ್ ಪೊಲೀಸರು ಬಿಎನ್‌ಎಸ್ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚಂದ್ರಸೇನ್ ಮತ್ತು ಗೋಧನ್ ಲಾಲ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಮೂರನೇ ಆರೋಪಿಯನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ.

ಕಳೆದ ಮೂರು ತಿಂಗಳಿನಿಂದ ಗೆಲಾ ತಾಂಡಾ ಗ್ರಾಮದಲ್ಲಿರುವ ಚಂದ್ರಸೇನ್ ಅವರ ಮನೆಯಲ್ಲಿ ಬಾಡಿಗೆದಾರನಾಗಿ ವಾಸಿಸುತ್ತಿದ್ದೆ ಎಂದು ಪಪ್ಪು ಪೊಲೀಸರಿಗೆ ತಿಳಿಸಿದ್ದು, “ಕೆಲವು ತಿಂಗಳ ಹಿಂದೆ, ಚಂದ್ರಸೇನ್ ಟ್ರ್ಯಾಕ್ಟರ್ ಖರೀದಿಸುವ ಹೆಸರಿನಲ್ಲಿ ನನ್ನಿಂದ ನಾಲ್ಕೂವರೆ ಲಕ್ಷ ರೂಪಾಯಿಗಳನ್ನು ಪಡೆದಿದ್ದ” ಎಂದು ಹೇಳಿದ್ದಾರೆ.

“ನಾನು ಚಂದ್ರಸೇನ್ ಅವರನ್ನು ಹಣ ಮರಳಿಸುವಂತೆ ಕೇಳಿದಾಗ, ಅವರ ಮಗ ಪಪ್ಪು, ಗೋಧನ್ ಮತ್ತು ಇತರ ನಾಲ್ಕೈದು ಜನರು ನನ್ನನ್ನು ಹೊಡೆದರು. ಅವರು ನನ್ನ ಮೇಲೆ ಜಾತಿ ನಿಂದನೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದರು. ನಂತರ ಅವರು ರೇಜರ್‌ನಿಂದ ನನ್ನ ಮೀಸೆ ಮತ್ತು ಹುಬ್ಬು ಮತ್ತು.ತಲೆ ಬೋಳಿಸಿದರು. ಈ ಘಟನೆ ನನ್ನನ್ನು ಮಾನಸಿಕವಾಗಿ ಅಸ್ಥಿರಗೊಳಿಸಿದೆ. ನಾನು ಅದೇ ದಿನ ನನ್ನ ಬ್ಯಾಗ್‌ನೊಂದಿಗೆ ಬಹೇರಿಗೆ ಹಿಂತಿರುಗಿದೆ” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ "ಸಂಪೂರ್ಣ ಯುದ್ಧ" ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. "ಇರಾನ್‌ನಲ್ಲಿ ಹೊಸ ನಾಯಕತ್ವವನ್ನು...

ಬೆಂಗಳೂರು: ವಿವೇಕನಗರದಲ್ಲಿ ಕಾಲೇಜು ಬಸ್‌ಗೆ ಸಿಲುಕಿ ತಾಯಿ ಮತ್ತು 8 ವರ್ಷದ ಮಗ ಸಾವು: ವಾಹನ ಬಿಟ್ಟು ಪರಾರಿಯಾದ ಚಾಲಕ 

ಬೆಂಗಳೂರಿನ ಮಧ್ಯಭಾಗ ವಿವೇಕನಗರ ಮುಖ್ಯರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ಖಾಸಗಿ ಕಾಲೇಜು ಬಸ್ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆ ಮತ್ತು ಅವರ ಎಂಟು ವರ್ಷದ ಮಗ...