Homeಮುಖಪುಟಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

- Advertisement -
- Advertisement -

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ರದ್ದುಗೊಳಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೋಕ್ ಕುಮಾರ್ ಅವರ ವಿಭಾಗೀಯ ಪೀಠವು, ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ.

“ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ (ಅಂದರೆ, ಯಾವುದೇ ಹಣದ ಮೊತ್ತವು ಪೂರ್ಣ ಪರಿಹಾರವಾಗಲಾರದು, ಇದು ಬಹಳ ಗಂಭೀರ/ತಪ್ಪು ಕ್ರಮ). ಆದರೂ ಕೂಡ, ಸಾಂಕೇತಿಕವಾಗಿ ಆದಾರಿಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ ಪಾವತಿಸಬೇಕು” ಎಂದು ನ್ಯಾಯಾಲಯ ಆದೇಶಿಸಿರುವುದಾಗಿ ವರದಿ ಉಲ್ಲೇಖಿಸಿದೆ.

“ಎರಡೂ ರಿಟ್ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಮಾರ್ಚ್ 31,2016 ರಂದು ಅರ್ಜಿದಾರರಿಗೆ ನೀಡಲಾದ ನೋಟಿಸ್‌ಗಳು ಮತ್ತು ಅದರ ಪರಿಣಾಮವಾಗಿ ಬಂದ ಯಾವುದೇ ಆದೇಶ ಅಥವಾ ಕಾರ್ಯವಿಧಾನಗಳನ್ನು ರದ್ದುಗೊಳಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಮೊತ್ತದ ದಂಡವು ಸಾಕಾಗುವುದಿಲ್ಲ. ಆದರೂ, ಪ್ರಕರಣವನ್ನು ಸಂಪೂರ್ಣವಾಗಿ ದಂಡವಿಲ್ಲದೆ ಬಿಡಲಾಗದು. ಹಾಗಾಗಿ, ಸಾಂಕೇತಿಕವಾಗಿ ಆದಾಯ ತೆರಿಗೆ ಇಲಾಖೆಯು ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ತಲಾ 1 ಲಕ್ಷ ರೂಪಾಯಿ (ಒಟ್ಟು 2 ಲಕ್ಷ ರೂ.) ಪಾವತಿಸಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದಲ್ಲದೆ, ನೋಟಿಸ್‌ಗಳಿಗೆ ಅನುಸಾರವಾಗಿ ಪ್ರಾರಂಭಿಸಲಾದ ಎಲ್ಲಾ ನಂತರದ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗಿದೆ ಎಂದಿದೆ ಎಂದು ಬಾರ್‌ & ಬೆಂಚ್ ತಿಳಿಸಿದೆ.

ಈ ನೋಟಿಸ್‌ಗಳು ಮುಖ್ಯವಾಗಿ ಆರ್‌ಆರ್‌ಪಿಆರ್‌ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದ ಆರೋಪಗಳ ಮೇಲೆ ಆಧಾರಿತವಾಗಿದ್ದವು. ಇದರಲ್ಲಿ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್‌) ಎಂಬ ಕಂಪನಿಯಿಂದ ಆರ್‌ಆರ್‌ಪಿಆರ್‌ಗೆ ಸುಮಾರು 403.85 ಕೋಟಿ ರೂಪಾಯಿ ಬಡ್ಡಿರಹಿತ ಸಾಲ ನೀಡಲಾಗಿತ್ತು, ಮತ್ತು ಇದರೊಂದಿಗೆ ಎನ್‌ಡಿಟಿವಿಯ ಷೇರುಗಳ ಒತ್ತೆ, ಷೇರು ವರ್ಗಾವಣೆಗಳು ಮತ್ತು ಇತರ ಸಂಕೀರ್ಣ ವಹಿವಾಟುಗಳಿದ್ದವು. ಆದಾಯ ತೆರಿಗೆ ಇಲಾಖೆಯು ಇದನ್ನು ತೆರಿಗೆ ತಪ್ಪಿಸುವಿಕೆ ಅಥವಾ ಆದಾಯ ಮರೆಮಾಚುವಿಕೆ ಎಂದು ಆರೋಪಿಸಿ, 2009-10ರ ಅಸೆಸ್‌ಮೆಂಟ್ ಇಯರ್‌ಗೆ ಸಂಬಂಧಿಸಿದಂತೆ ಮರುಮೌಲ್ಯಮಾಪನ ಮಾಡಲು ಪ್ರಯತ್ನಿಸಿತ್ತು.

ಒಂದು ವರ್ಷಕ್ಕೆ ಎರಡನೇ ಬಾರಿಗೆ ಮರುಮೌಲ್ಯ ಮಾಪನ ಎಂದು ವಾದಿಸಿ, ಆದಾಯ ತೆರಿಗೆ ನೋಟಿಸ್‌ಗಳ ವಿರುದ್ಧ ಪ್ರಣಯ್ ಮತ್ತು ರಾಧಿಕಾ ರಾಯ್ ನವೆಂಬರ್ 2017ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದಾಯ ಇಲಾಖೆಯು ಈ ಹಿಂದೆ ಜುಲೈ 2011ರಲ್ಲಿ ಮರು ಮೌಲ್ಯಮಾಪನ ಮಾಡಿತ್ತು. ಆ ಪ್ರಕ್ರಿಯೆಗಳಲ್ಲಿ ಅದೇ ಸಮಸ್ಯೆಗಳನ್ನು ನಿರ್ದಿಷ್ಟವಾಗಿ ಪರಿಶೀಲಿಸಿತ್ತು ಮತ್ತು ಅದು ಮಾರ್ಚ್ 2013ರಲ್ಲಿ ಮರುಮೌಲ್ಯಮಾಪನ ಆದೇಶದೊಂದಿಗೆ ಮುಕ್ತಾಯಗೊಂಡಿತು ಎಂದು ಹೇಳಿದ್ದರು.

ಮೌಲ್ಯಮಾಪನ ಅಧಿಕಾರಿ ಹೇಳಿಂತೆ ಹಿಂದಿನ ಮರು-ಮೌಲ್ಯಮಾಪನ ಕೇವಲ ಸೀಮಿತ ವ್ಯಾಪ್ತಿಯದ್ದು ಎಂಬ ಅಭಿಪ್ರಾಯವನ್ನು ಅವರು ಪ್ರಶ್ನಿಸಿದ್ದರು. ಒಮ್ಮೆ ಮರುಮೌಲ್ಯಮಾಪನ ಪ್ರಾರಂಭವಾದ ನಂತರ, ಸಂಪೂರ್ಣ ಕಡಿಮೆ ಅಂದಾಜು ಮಾಡಲಾದ ಆದಾಯವನ್ನು ಪರಿಶೀಲಿಸಬಹುದು ಎಂದು ವಾದಿಸಿದ್ದರು. ಅದೇ ವಿಷಯವನ್ನು ಮತ್ತೆ ತೆರೆಯುವುದು ‘ಅಭಿಪ್ರಾಯದ ಬದಲಾವಣೆ’, ಇದು ಕಾನೂನಿನ ಅಡಿಯಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದರು.

ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಇದೇ ರೀತಿಯ ಮರುಮೌಲ್ಯಮಾಪನ ಪ್ರಕ್ರಿಯೆಗಳು ಈಗಾಗಲೇ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಅಲ್ಲಿ ಅಂತಿಮ ಆದೇಶಗಳ ಮೇಲಿನ ತಡೆಯಾಜ್ಞೆ ಜಾರಿಯಲ್ಲಿದೆ. ಸೆಪ್ಟೆಂಬರ್ 2024 ರಲ್ಲಿ ಹೈಕೋರ್ಟ್‌ನ ಪ್ರತ್ಯೇಕ ಪೀಠವು ಆರ್‌ಆರ್‌ಪಿಆರ್‌ಗೆ ನೀಡಲಾದ ನೋಟಿಸ್ ಅನ್ನು ರದ್ದುಗೊಳಿಸಿದೆ ಎಂದು ಹೇಳಲಾಗಿತ್ತು.

ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಪರ ವಕೀಲರಾದ ವಿಯುಷ್ಟಿ ರಾವತ್, ದೇವಾಂಶ್ ಜೈನ್ ಮತ್ತು ಸಾರ್ಥಕ್ ಅಬ್ರೋಲ್ ಅವರೊಂದಿಗೆ ಹಿರಿಯ ವಕೀಲ ಸಚಿತ್ ಜಾಲಿ ವಾದ ಮಂಡಿಸಿದ್ದರು.

ಆದಾಯ ತೆರಿಗೆ ಇಲಾಖೆಯನ್ನು ವಕೀಲರಾದ ಎನ್.ಪಿ. ಸಾಹ್ನಿ, ಇಂದ್ರಜ್ ಸಿಂಗ್ ರೈ, ಸಂಜೀವ್ ಮೆನನ್, ರಾಹುಲ್ ಸಿಂಗ್ ಮತ್ತು ಗೌರವ್ ಕುಮಾರ್ ಪ್ರತಿನಿಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ "ಸಂಪೂರ್ಣ ಯುದ್ಧ" ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. "ಇರಾನ್‌ನಲ್ಲಿ ಹೊಸ ನಾಯಕತ್ವವನ್ನು...

ಬೆಂಗಳೂರು: ವಿವೇಕನಗರದಲ್ಲಿ ಕಾಲೇಜು ಬಸ್‌ಗೆ ಸಿಲುಕಿ ತಾಯಿ ಮತ್ತು 8 ವರ್ಷದ ಮಗ ಸಾವು: ವಾಹನ ಬಿಟ್ಟು ಪರಾರಿಯಾದ ಚಾಲಕ 

ಬೆಂಗಳೂರಿನ ಮಧ್ಯಭಾಗ ವಿವೇಕನಗರ ಮುಖ್ಯರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ಖಾಸಗಿ ಕಾಲೇಜು ಬಸ್ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆ ಮತ್ತು ಅವರ ಎಂಟು ವರ್ಷದ ಮಗ...