Homeಮುಖಪುಟತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಸತತ 3ನೇ ಬಾರಿಗೆ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ...

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಸತತ 3ನೇ ಬಾರಿಗೆ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆರ್‌.ಎನ್‌.ರವಿ

- Advertisement -
- Advertisement -

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ರಾಜ್ಯಪಾಲ ಆರ್‌.ಎನ್‌ ರವಿ ಮತ್ತು ಸರ್ಕಾರದ ನಡುವೆ ಜಟಾಪಟಿ ನಡೆದಿದೆ. ಸತತ 3ನೇ ಬಾರಿಗೆ ರಾಜ್ಯಪಾಲರು ಅಧಿವೇಶನದ ಆರಂಭದಲ್ಲಿ ಮಾಡಬೇಕಾದ ಸಾಂಪ್ರದಾಯಿಕ ಭಾಷಣ ಮಾಡದೆ ಮಂಗಳವಾರ (ಜ.20) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ಡಿಎಂಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ‘ತಪ್ಪುಗಳಿವೆ’ ಎಂದು ಆರೋಪಿಸಿ, ಅದನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದು, ವರ್ಷದ ಮೊದಲ ಅಧಿವೇಶನದ ಆರಂಭದಲ್ಲೇ ಗದ್ದಲ ಉಂಟಾಗಿದೆ.

ವರದಿಗಳ ಪ್ರಕಾರ, ಸದನಕ್ಕೆ ಪ್ರವೇಶಿಸಿದ ಕೂಡಲೇ, ರಾಷ್ಟ್ರಗೀತೆಗೆ ಸರಿಯಾದ ಗೌರವ ನೀಡಲಾಗಿಲ್ಲ ಎಂದು ರಾಜ್ಯಪಾಲ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನನಗೆ ನಿರಾಶೆಯಾಗಿದೆ. ರಾಷ್ಟ್ರಗೀತೆಯನ್ನು ಸರಿಯಾಗಿ ಗೌರವಿಸಬೇಕು” ಎಂದು ಹೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಅಪ್ಪಾವು ಅವರು, ರಾಜ್ಯ ಸರ್ಕಾರ ಸಿದ್ಧಪಡಿಸಿದ ಸಾಂಪ್ರದಾಯಿಕ ಭಾಷಣ ಓದುವುದಕ್ಕೆ ಮಾತ್ರ ರಾಜ್ಯಪಾಲರು ತಮ್ಮನ್ನು ಸೀಮಿತಗೊಳಿಸಬೇಕು. ಸದನದ ಸ್ಥಾಪಿತ ನಿಯಮಗಳು ಮತ್ತು ಸಂಪ್ರದಾಯಗಳನ್ನು ಅನುಸರಿಸಬೇಕು. ವಿಧಾನಸಭೆಯಲ್ಲಿ ಚುನಾಯಿತ ಸದಸ್ಯರು ಮಾತ್ರ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅನುಮತಿ ಇದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಪಾಲರು, “ನನ್ನ ಭಾಷಣಕ್ಕೆ ಅಡ್ಡಿಪಡಿಸಲಾಗಿದೆ. ಮೈಕ್ರೊಫೋನ್ (ಮೈಕ್) ಸ್ವಿಚ್ ಆಫ್ ಮಾಡಲಾಗಿದೆ. ಇದರಿಂದ ನನಗೆ ಅವಮಾನವಾಗಿದೆ. ತಪ್ಪುಗಳಿಂದ ತುಂಬಿರುವ ಭಾಷಣವನ್ನು ನಾನು ಓದಲು ಸಾಧ್ಯವಿಲ್ಲ” ಎಂದು ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯಪಾಲರ ನಡೆಯನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಟೀಕಿಸಿದ್ದು, ರಾಜ್ಯಪಾಲರು ಸಂಪ್ರದಾಯ ಮತ್ತು ನಿಯಮಗಳನ್ನು ಉಲ್ಲಂಘಿಸಿ ಹೊರನಡೆದಿದ್ದಾರೆ ಎಂದಿದ್ದಾರೆ. ನಂತರ ಭಾಷಣದ ಇಂಗ್ಲಿಷ್ ಆವೃತ್ತಿಯನ್ನು ಓದಲಾಗಿದೆ ಎಂದು ಭಾವಿಸಲಾಗಿದೆ ಎಂದು ಹೇಳುವ ನಿರ್ಣಯವನ್ನು ಮಂಡಿಸಿದ್ದಾರೆ.

“ರಾಜ್ಯಪಾಲರು ಸಂಪ್ರದಾಯಗಳು ಮತ್ತು ನಿಯಮಗಳನ್ನು ಉಲ್ಲಂಘಿಸಿ ಹೊರನಡೆದಿದ್ದಾರೆ. ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ, ರಾಜ್ಯಪಾಲರು ತಮ್ಮ ಅಭಿಪ್ರಾಯಗಳನ್ನು ಸೇರಿಸಲು ಅಥವಾ ಬೇರೆ ಏನನ್ನಾದರೂ ಹೇಳಲು ಯಾವುದೇ ಅವಕಾಶವಿಲ್ಲ” ಎಂದು ಸ್ಟಾಲಿನ್ ಹೇಳಿದ್ದಾರೆ.

ರಾಜ್ಯಪಾಲರ ರವಿ ಅವರು ಉದ್ದೇಶಪೂರ್ವಕವಾಗಿ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ನಡವಳಿಕೆ ಸದನವನ್ನು ಅವಮಾನಿಸಿದಂತೆ ಎಂದು ಸಿಎಂ ಸ್ಟಾಲಿನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರ ಅಗತ್ಯವಿಲ್ಲ ಎಂಬ ಆಡಳಿತಾರೂಢ ಡಿಎಂಕೆಯ ನಿಲುವನ್ನು ಸ್ಟಾಲಿನ್ ಪುನರುಚ್ಚರಿಸಿದ್ದು, ಈ ಹಿಂದಿನ ಮುಖ್ಯಮಂತ್ರಿಗಳಾದ ದಿವಂಗತ ಸಿಎನ್ ಅಣ್ಣಾದೊರೈ ಮತ್ತು ಎಂ ಕರುಣಾನಿಧಿ ಅವರು ರಾಜ್ಯಪಾಲರ ಸ್ಥಾನವನ್ನು ಗೌರವಿಸಿದ್ದರು. ಹಾಗಾಗಿ, ನಾವು ಅದನ್ನು ಅನುಸರಿಸುತ್ತಿದ್ದೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...