Homeಕರ್ನಾಟಕವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು,...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು, ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

- Advertisement -
- Advertisement -

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ಆಗಿದೆ ಎಂದು ಆರೋಪಿಸಿ ವಿಡಿಯೋ ಪೋಸ್ಟ್ ಮಾಡಿದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಕೇರಳದ ಮಹಿಳೆ ವಿರುದ್ದ ಪೊಲೀಸರು ‘ಆತ್ಮಹತ್ಯೆಗೆ ಪ್ರಚೋದನೆ’ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಡಿಯೋ ಹಂಚಿಕೊಂಡ ಶಿಮ್ಜಿತಾ ಮುಸ್ತಫಾ ಎಂಬ ಮಹಿಳೆ ವಿರುದ್ದ ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಪೊಲೀಸ್‌ ಠಾಣೆಯಲ್ಲಿ ಸೋಮವಾರ (ಜ.19) ಎಫ್‌ಐಆರ್ ದಾಖಲಾಗಿದೆ. ಈಕೆ ವಿಡಿಯೋ ಹಂಚಿಕೊಂಡ ಬಳಿಕ ಮನನೊಂದು ಕೋಝಿಕ್ಕೋಡ್ ನಿವಾಸಿ 42 ವರ್ಷದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ದೂರುಗಳು ಮತ್ತು ಮೃತರಿಗೆ ತೀವ್ರ ಮಾನಸಿಕ ತೊಂದರೆ ಉಂಟುಮಾಡಿದ ಘಟನೆಗಳ ಅನುಕ್ರಮದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ ಪೊಲೀಸರು ಜನವರಿ 19ರಂದು ದೀಪಕ್ ಪೋಷಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ದೀಪಕ್ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಅವರ ಕುಟುಂಬಸ್ಥರು ಕೋಝಿಕ್ಕೋಡ್ ನಗರ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ದೂರಿನ ಪ್ರತಿಗಳನ್ನು ಜಿಲ್ಲಾಧಿಕಾರಿ, ಮಾನವ ಹಕ್ಕುಗಳ ಆಯೋಗ ಮತ್ತು ಡಿಜಿಪಿಗೆ ಕಳುಹಿಸಲಾಗುವುದು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಾನವ ಹಕ್ಕುಗಳ ಆಯೋಗವು ವಕೀಲರಾದ ವಿ ದೇವದಾಸ್ ಮತ್ತು ಅಬ್ದುಲ್ ರಹೀಮ್ ಪೂಕತ್ ಅವರು ಸಲ್ಲಿಸಿದ ದೂರುಗಳ ಮೇರೆಗೆ ಘಟನೆಯ ತನಿಖೆ ನಡೆಸುವಂತೆ ಉತ್ತರ ವಲಯ ಡಿಐಜಿಗೆ ನಿರ್ದೇಶನ ನೀಡಿದೆ. ನ್ಯಾಯಾಂಗ ಸದಸ್ಯ ಕೆ ಬೈಜುನಾಥ್ ಅವರು ಒಂದು ವಾರದೊಳಗೆ ವರದಿ ಕೋರಿದ್ದಾರೆ. ಫೆಬ್ರವರಿ 19ರಂದು ಕೋಝಿಕ್ಕೋಡ್‌ನ ಲೋಕೋಪಯೋಗಿ ಇಲಾಖೆಯ ವಿಶ್ರಾಂತಿ ಗೃಹದಲ್ಲಿ ನಡೆಯುವ ಆಯೋಗದ ಸಭೆಯಲ್ಲಿ ಈ ಪ್ರಕರಣವನ್ನು ಪರಿಗಣಿಸಲಾಗುವುದು ಎಂದಿದ್ದಾರೆ.

ಕುಟುಂಬದವರ ಪ್ರಕಾರ, ಜನವರಿ 16 ರಂದು ದೀಪಕ್ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಕೆಲಸಕ್ಕಾಗಿ ಕೋಝಿಕ್ಕೋಡ್‌ನಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದಾಗ, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಶಿಮ್ಜಿತಾ, ದೀಪಕ್ ಅವರ ಮೊಣಕೈ ತನ್ನ ದೇಹಕ್ಕೆ ತಾಗಿದೆ. ಅವರು ದುರುದ್ದೇಶದಿಂದ ಕೃತ್ಯವೆಸಗಿದ್ದಾರೆ ಎಂದು ವಿಡಿಯೋ ರೆಕಾರ್ಡ್ ಮಾಡಿ ಹಂಚಿಕೊಂಡಿದ್ದರು.

ದೀಪಕ್ ತನ್ನ ದೇಹಕ್ಕೆ ಉದ್ಧೇಶಪೂರ್ವಕವಾಗಿ ಕೈ ತಾಗಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶಿಮ್ಜಿತಾ ಆರೋಪಿಸಿದರೆ, ದೀಪಕ್ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ಅದು ಆಕಸ್ಮಿಕ ಘಟನೆ ಎಂದಿದ್ದಾರೆ. ಶಿಮ್ಜಿತಾ ಹಂಚಿಕೊಂಡ ವಿಡಿಯೋ ವೈರಲ್ ಆದ ಬಳಿಕ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಚಾರ ಕೇರಳ ಮಾತ್ರವಲ್ಲದೆ ಕರ್ನಾಟಕ, ತಮಿಳುನಾಡು ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶಿಮ್ಜಿತಾ ಅವರು ತನ್ನ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ನಲ್ಲಿ ಆಕೆ ಮನಶ್ಶಾಸ್ತ್ರಜ್ಞೆ ಮತ್ತು ವಾಣಿಜ್ಯ ಉಪನ್ಯಾಸಕಿ ಎಂದು ಹೇಳಿಕೊಂಡಿದ್ದಾರೆ. ಕೆಲ ವರದಿಗಳು ಶಿಮ್ಜಿತಾ ಮುಸ್ಲಿಂ ಲೀಗ್ ಪಕ್ಷದ ಸ್ಥಳೀಯ ನಾಯಕಿ ಎಂದಿದೆ. ಎಲ್ಲಾ ಹೇಳಿಕೆಗಳು ಮತ್ತು ಸಂಬಂಧಿತ ವರದಿಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...