Homeಕರ್ನಾಟಕಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ....

ಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ. ಜಿ. ಪರಮೇಶ್ವರ್

- Advertisement -
- Advertisement -

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯೊಂದಿಗೆ ಅಸಭ್ಯ ವರ್ತನೆ ನಡೆಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

2026 ಜನವರಿ 20, ಮಂಗಳವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. ತನಿಖೆಯ ನಂತರ ಏನು ಬೇಕಾದರೂ ಆಗಬಹುದು. ಅವರನ್ನು ವಜಾಗೊಳಿಸಬಹುದು. ತಕ್ಷಣ ಕ್ರಮ ಕೈಗೊಳ್ಳಬೇಕಾಗಿದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಅವರು ಹಿರಿಯ ಅಧಿಕಾರಿ ಎಂಬ ಅಂಶವನ್ನು ನೋಡದೆ, ಯಾವುದೇ ಹಿಂಜರಿಕೆಯಿಲ್ಲದೆ ಕ್ರಮ ಕೈಗೊಂಡಿದ್ದೇವೆ. ತನಿಖೆಯಲ್ಲಿ ಏನಾಗುತ್ತದೆ ಎಂಬುದನ್ನು ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಇಲಾಖೆ ಮಾತ್ರವಲ್ಲ, ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಅದಕ್ಕಾಗಿಯೇ ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. 

ಮುಖ್ಯಮಂತ್ರಿ ಕೂಡ ಅಸಮಾಧಾನಗೊಂಡಿದ್ದಾರೆ, ನನಗೂ ಅಸಮಾಧಾನವಿದೆ. ಇದು ಪೊಲೀಸ್ ಇಲಾಖೆಯಾಗಿರುವುದರಿಂದ ಖಂಡಿತಾ ಇಂತಹ ಕ್ರಮ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. 

ನಿನ್ನೆ ವಿಡಿಯೊ ವೈರಲ್ ಆದ ಬೆನ್ನಲ್ಲೇ ತಮ್ಮನ್ನು ಭೇಟಿ ಮಾಡಲು ರಾಮಚಂದ್ರ ರಾವ್ ಬಂದಿದ್ದರು ಎಂದು ಆಮೇಲೆ ಗೊತ್ತಾಯಿತು. ಆದರೆ ಇಂತಹ ಪರಿಸ್ಥಿತಿಯಲ್ಲಿ ನಾನು ಖಂಡಿತಾ ಅವರನ್ನು ಭೇಟಿ ಮಾಡುತ್ತಿರಲಿಲ್ಲ. ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿ ಇಂತಹ ನೀಚ ಕೆಲಸ ಮಾಡಿದ್ದರೆ ಅದನ್ನು ಖಂಡಿತಾ ಕ್ಷಮಿಸಲು ಸಾಧ್ಯವಿಲ್ಲ ಎಂದರು.

ಡಿಜಿಪಿ ರಾಮಚಂದ್ರ ರಾವ್ ಅವರು ಇದೇ ವರ್ಷ ಮೇ ತಿಂಗಳಲ್ಲಿ ಸೇವೆಯಿಂದ ನಿವೃತ್ತರಾಗುವವರಿದ್ದರು. ವೈರಲ್ ವಿಡಿಯೊದಲ್ಲಿ ರಾಮಚಂದ್ರ ರಾವ್ ಅವರ ಸಂಪರ್ಕದಲ್ಲಿದ್ದ ಮಹಿಳೆಯರು ಯಾರು ಎಂದು ಇದುವರೆಗೆ ಗೊತ್ತಾಗಿಲ್ಲ, ಯಾರೂ ಇದುವರೆಗೆ ದೂರು ನೀಡಿಲ್ಲ. ಆ ಬಗ್ಗೆ ಕೂಡ ತನಿಖೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವರು ಹೇಳಿದ್ದಾರೆ. 

ಕೃತಕ ವಿಡಿಯೊ ಎಂದ ಡಿಜಿಪಿ

ಸೋಮವಾರ ಮಧ್ಯಾಹ್ನ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ತಮ್ಮ ಕಚೇರಿಯನ್ನು ದಿಢೀರ್‌ ತೊರೆದ ರಾಮಚಂದ್ರರಾವ್‌, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿಯಾಗಲು ಪ್ರಯತ್ನಿಸಿದರು. ಆದರೆ, ಗೃಹ ಸಚಿವರು ಅನಾರೋಗ್ಯದ ಕಾರಣ ಹೇಳಿ ಭೇಟಿಗೆ ಅವಕಾಶ ನೀಡಿಲ್ಲ. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಡಿಜಿಪಿ ರಾಮಚಂದ್ರರಾವ್‌, ‘ವಿಡಿಯೊ ಕಂಡು ಆಘಾತ­ವಾಗಿದೆ. ವೈರಲ್‌ ಆದ ವಿಡಿಯೊ ಕೃತಕವಾಗಿ ಸೃಷ್ಟಿಸ­ಲಾಗಿದೆ. ಈ ಬಗ್ಗೆ ತನಿಖೆಯಾಗಬೇಕಿದೆ ಎಂದರು.

‘ಷಡ್ಯಂತ್ರ ರೂಪಿಸಿ ನಕಲಿ ವಿಡಿಯೊ ಹರಿಬಿಡಲಾಗಿದೆ. ಈ ಬಗ್ಗೆ ವಕೀಲರ ಜತೆ ಚರ್ಚೆ ನಡೆಸಿ ಕಾನೂನು ಹೋರಾಟ ನಡೆಸುತ್ತೇನೆ,’ ‘ಇದು ಹಳೆಯ ವಿಡಿಯೊ,’ ಎಂದ ರಾಮಚಂದ್ರ ರಾವ್‌, ‘ಎಂಟು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಕೆಲಸ ಮಾಡಿದ್ದೆ,’ ಎಂದಷ್ಟೇ ಹೇಳಿ ಘಟನೆ ಬಗ್ಗೆ ಹೆಚ್ಚಿನ ವಿವರ ನೀಡಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...