Homeಮುಖಪುಟವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ...

ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

- Advertisement -
- Advertisement -

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಉದ್ದೇಶಪೂರ್ವಕವಾಗಿ ಓದದೆ ಬಿಟ್ಟಿದ್ದಾರೆ. ಇನ್ನೂ ಕೆಲ ಸಾಲುಗಳನ್ನು ಮಾರ್ಪಡಿಸಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

112 ನಿಮಿಷಗಳ ಸುದೀರ್ಘ ಭಾಷಣ ಮಾಡಿ ರಾಜ್ಯಪಾಲರು ನಿರ್ಗಮಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, ಸಚಿವ ಸಂಪುಟ ಅನುಮೋದಿಸಿದ ಭಾಷಣದಲ್ಲಿನ ಕೆಲವು ಸಾಲುಗಳನ್ನು ರಾಜ್ಯಪಾಲರು ಕೈಬಿಟ್ಟಿದ್ದಾರೆ ಅಥವಾ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಂತ್ರಿ ಮಂಡಲ ಅನುಮೋದಿಸಿದ ಅಧಿಕೃತ ನೀತಿ ಭಾಷಣವು ಹಾಗೆಯೇ ಉಳಿಯಬೇಕು ಎಂದು ಒತ್ತಿ ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಆರ್ಥಿಕ ಒತ್ತಡ ಹೇರುತ್ತಿದೆ ಎಂದು ಹೇಳಲಾಗಿದ್ದ ಭಾಷಣದ 12ನೇ ಪ್ಯಾರಾವನ್ನು ರಾಜ್ಯಪಾಲರು ಓದಿಲ್ಲ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ದೀರ್ಘಕಾಲ ತಡೆಹಿಡಿದಿರುವ ಬಗ್ಗೆ ಮತ್ತು ಈ ವಿಷಯದಲ್ಲಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಕುರಿತಾದ 15ನೇ ಪ್ಯಾರಾವನ್ನು ಕೈಬಿಟ್ಟಿದ್ದಾರೆ ಮತ್ತು ತೆರಿಗೆ ಹಂಚಿಕೆಗೆ ಸಂಬಂಧಿಸಿದ ಭಾಗದಲ್ಲಿ “ಇದು ನನ್ನ ಸರ್ಕಾರದ ನಂಬಿಕೆ” ಎಂಬ ಸಾಲನ್ನು ರಾಜ್ಯಪಾಲರು ಸ್ವತಃ ಸೇರಿಸಿ ಓದಿದ್ದಾರೆ ಎಂದು ಸಿಎಂ ಆರೋಪ ಮಾಡಿದ್ದಾರೆ.

ರಾಜ್ಯಪಾಲರು ತೆರಳಿದ ನಂತರ, ಸಿಎಂ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರು ಕೈಬಿಟ್ಟ ಭಾಗಗಳನ್ನು ಸದನದಲ್ಲಿ ಓದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ವಿಧಿ 176ರ ಪ್ರಕಾರ, ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಭಾಷಣವನ್ನು ರಾಜ್ಯಪಾಲರು ಹಾಗೆಯೇ ಓದಬೇಕು ಎಂದು ಸಿಎಂ ಪ್ರತಿಪಾದಿಸಿದ್ದಾರೆ.

“ಮುಖ್ಯಮಂತ್ರಿ ಸೂಚಿಸಿರುವ ವಿಷಯವು ಬಹಳ ನಿರ್ಣಾಯಕವಾಗಿದೆ. ಸಂಪುಟ ಅನುಮೋದಿಸಿರುವ ವಿಷಯದಲ್ಲಿ ಬದಲಾವಣೆ ಮಾಡುವುದು ಮತ್ತು ಕೈಬಿಡುವುದು ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಸಂಪುಟ ಅನುಮೋದಿತ ಭಾಷಣವನ್ನೇ ಸದನದ ಸದಸ್ಯರು ಮತ್ತು ಮಾಧ್ಯಮಗಳಿಗೆ ನೀಡಲಾಗುತ್ತದೆ” ಎಂದು ಹೇಳುವ ಮೂಲಕ ಸ್ಪೀಕರ್ ಎ.ಎನ್. ಶಂಸೀರ್ ಮುಖ್ಯಮಂತ್ರಿಯ ಮಾತನ್ನು ಬೆಂಬಲಿಸಿದ್ದಾರೆ.

“ಈ ರೀತಿಯ ಸಂದರ್ಭಗಳಲ್ಲಿ ರಾಜ್ಯಪಾಲರನ್ನು ಅವಮಾನಿಸುವ ರೀತಿಯೇ ತಮಿಳುನಾಡು ಮತ್ತು ಕೇರಳದಲ್ಲೂ ನಡೆಯುತ್ತಿದೆ” ಎಂದು ಗೋವಾ ಮಾಜಿ ರಾಜ್ಯಪಾಲ ಮತ್ತು ಹಿರಿಯ ಬಿಜೆಪಿ ನಾಯಕ ಪಿ.ಎಸ್. ಶ್ರೀಧರನ್ ಪಿಳ್ಳೈ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಘಟನೆಯು ಕೇಂದ್ರ-ರಾಜ್ಯ ಸಂಬಂಧಗಳು, ರಾಜ್ಯಪಾಲರ ಸಾಂವಿಧಾನಿಕ ಪಾತ್ರ ಮತ್ತು ಶಾಸಕಾಂಗ ಸಂಪ್ರದಾಯಗಳ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...