Homeಮುಖಪುಟಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

- Advertisement -
- Advertisement -

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ. ಡಿಸೆಂಬರ್ 17ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪದ ಮೇಲೆ ಪುರುಷ ಸಹೋದ್ಯೋಗಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಪಶ್ಚಿಮ ಪೆರುಮಾಳ್ ಮೇಸ್ತ್ರಿ ಬೀದಿಯಲ್ಲಿರುವ ಎಲ್‌ಐಸಿ ಕಚೇರಿಯ ಸಹಾಯಕ ಆಡಳಿತ ಅಧಿಕಾರಿ ಟಿ. ರಾಮ್ ಎಂದು ಗುರುತಿಸಲಾಗಿದೆ. ರಾಮ್ 54 ವರ್ಷದ ಕಲ್ಯಾಣಿ ನಂಬಿ ಅವರನ್ನು ಕೊಂದಿದ್ದು, ಕಚೇರಿ ಕ್ಯಾಬಿನ್‌ನಲ್ಲಿ ಸುಟ್ಟು ಕರಕಲಾಗಿರುವ ಮೃತದೇಹ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿತ್ತು. ಪೊಲೀಸರ ಹೆಚ್ಚಿನ ತನಿಖೆಯಲ್ಲಿ ಕಲ್ಯಾಣಿ ನಂಬಿಯ ಕ್ಯಾಬಿನ್‌ನೊಳಗೆ ರಾಮ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ವಿಮಾ ಕ್ಲೇಮ್ ಸೆಟಲ್‌ಮೆಂಟ್‌ಗಳಲ್ಲಿ ಅಕ್ರಮಗಳ ಬಗ್ಗೆ ಕಲ್ಯಾಣಿ ಗಂಭೀರ ಕಳವಳ ವ್ಯಕ್ತಪಡಿಸಿದ ನಂತರ, ಅವರನ್ನು ಮೌನಗೊಳಿಸಲು ಈ ಅಪರಾಧ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ತನಿಖೆಯಿಂದ ತಿಳಿದುಬಂದಂತೆ, ರಾಮ್ 40ಕ್ಕೂ ಹೆಚ್ಚು ಸಾವಿನ ಕ್ಲೈಮ್ ಫೈಲ್‌ಗಳನ್ನು ಬಹಳ ಸಮಯದಿಂದ ಪರಿಶೀಲಿಸುತ್ತಿದ್ದಾರೆ ಎಂದು ಹಲವಾರು ವಿಮಾ ಏಜೆಂಟ್‌ಗಳು ಕಲ್ಯಾಣಿಗೆ ದೂರು ನೀಡಿದ್ದರು. ಕಲ್ಯಾಣಿ ಈ ಸಂಬಂಧ ರಾಮ್ ಅವರನ್ನು ಪ್ರಶ್ನಿಸಿ, ವಿಷಯವನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸುವುದಾಗಿ ಎಚ್ಚರಿಸಿದ್ದರು. ಹಾಗಾಗಿ, ಕಲ್ಯಾಣಿಯ ಸದ್ದಡಗಿಸಲು ಮತ್ತು ಬಾಕಿ ಇರುವ ಫೈಲ್‌ಗಳನ್ನು ನಾಶಮಾಡಲು ರಾಮ್ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಆರಂಭದಲ್ಲಿ ಬೆಂಕಿ ಆಕಸ್ಮಿಕ ಎಂದು ನಂಬಲಾಗಿದ್ದರೂ, ಮೃತ ಕಲ್ಯಾಣಿ ಅವರ ಮಗ ಪೊಲೀಸರಿಗೆ ದೂರು ನೀಡಿದಾಗ ಅನುಮಾನಗಳು ಹುಟ್ಟಿಕೊಂಡಿತ್ತು. ಬೆಂಕಿ ಘಟನೆ ನಡೆಯುವ ಕೆಲವೇ ನಿಮಿಷಗಳ ಮೊದಲು ತಾಯಿ ತನಗೆ ಕರೆ ಮಾಡಿದ್ದರು. ಆಕೆ ಅಳುತ್ತಾ, ತಕ್ಷಣ ಪೊಲೀಸರಿಗೆ ತಿಳಿಸುವಂತೆ ಹೇಳಿದ್ದರು ಎಂದು ಕಲ್ಯಾಣಿಯವರ ಮಗ ತನ್ನ ದೂರಿನಲ್ಲಿ ವಿವರಿಸಿದ್ದರು. ‘

ಘಟನಾ ಸ್ಥಳದಲ್ಲಿ ಪೊಲೀಸರು ಹಲವಾರು ಅಸಾಮಾನ್ಯ ವಿವರಗಳನ್ನು ಕೂಡ ಕಂಡುಕೊಂಡಿದ್ದರು. ಕಲ್ಯಾಣಿ ಅವರು ಕೆಲಸ ಮಾಡುತ್ತಿದ್ದ ಕ್ಯಾಬಿನ್, ಸಾಮಾನ್ಯವಾಗಿ ಕಚೇರಿ ಸಮಯದಲ್ಲಿ ತೆರೆದಿರುತ್ತದೆ. ಆದರೆ, ಘಟನೆ ನಡೆದ ದಿನ ಹೊರಗಿನಿಂದ ಸರಪಳಿಯಿಂದ ಲಾಕ್ ಆಗಿರುವುದು ಕಂಡುಬಂದಿದೆ. ಆರೋಪಿ ರಾಮ್‌ಗೆ ಕೂಡ ಸಣ್ಣಪುಟ್ಟ ಸುಟ್ಟ ಗಾಯಗಳಾಗಿತ್ತು. ತನ್ನ ಗಾಯಗಳು ಆಕಸ್ಮಿಕ ಎಂದು ಆತ ಆರಂಭದಲ್ಲಿ ಹೇಳಿಕೊಂಡಿದ್ದರು.

ವಿಚಾರಣೆಯ ಸಮಯದಲ್ಲಿ, ಪೊಲೀಸರು ರಾಮ್ ಹೇಳಿಕೆಗಳಲ್ಲಿ ಅಸಮಂಜಸತೆಯನ್ನು ಕಂಡುಕೊಂಡಿದ್ದು, ಪೊಲೀಸರ ಪ್ರಕಾರ, ಅವರು ವಿರೋಧಾತ್ಮಕ ಉತ್ತರಗಳನ್ನು ನೀಡಿದ್ದಾರೆ. ಇದು ತನಿಖಾಧಿಕಾರಿಗಳು ಆಳವಾದ ತನಿಖೆ ನಡೆಸಲು ಕಾರಣವಾಯಿತು. ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಪುರಾವೆಗಳು ಅವಘಡಕ್ಕಿಂತ ಹೆಚ್ಚಾಗಿ ಉದ್ದೇಶಪೂರ್ವಕ ಕೃತ್ಯದ ಕಡೆಗೆ ಕೈ ತೋರಿಸಿದ್ದವು ಎಂದು ವರದಿಯಾಗಿದೆ.

ರಾಮ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಕಲ್ಯಾಣಿ ನಂಬಿ ನೀಡಿದ ಎಚ್ಚರಿಕೆಯೇ ಅಪರಾಧದ ಹಿಂದಿನ ಪ್ರಮುಖ ಉದ್ದೇಶವೆಂದು ತೋರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಎಲ್‌ಐಸಿ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ ಎಂದು moneycontrol.com ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...