Homeಮುಖಪುಟವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ.

42 ವರ್ಷದ ಸೇಲ್ಸ್ ಮ್ಯಾನೇಜರ್ ಯು ದೀಪಕ್ ಅವರ ಆತ್ಮಹತ್ಯೆಗೆ ಪ್ರಚೋದಿಸಿ ಆರೋಪದಲ್ಲಿ ಶಿಮ್ಜಿತಾ ಮುಸ್ತಫಾ ಅವರನ್ನು ವಡಗರದ ಸಂಬಂಧಿಕರ ಮನೆಯಿಂದ ಬುಧವಾರ (ಜ.21) ವಶಕ್ಕೆ ಪಡೆಯಲಾಗಿದೆ.

ವರದಿಗಳ ಪ್ರಕಾರ, ಶಿಮ್ಜಿತಾ ದೇಶ ಬಿಟ್ಟು ಪಲಾಯನ ಮಾಡುವುದನ್ನು ತಡೆಯಲು ಪೊಲೀಸರು ಲುಕ್‌ಔಟ್‌ ನೋಟಿಸ್ ಹೊರಡಿಸಿದ್ದರು. ಮತ್ತೊಂದೆಡೆ ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು.

ಜನವರಿ 16 ರಂದು ದೀಪಕ್ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಕೆಲಸಕ್ಕಾಗಿ ಕೋಝಿಕ್ಕೋಡ್‌ನಿಂದ ಕಣ್ಣೂರಿಗೆ ತೆರಳುತ್ತಿದ್ದಾಗ, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಶಿಮ್ಜಿತಾ, ದೀಪಕ್ ಅವರ ಮೊಣಕೈ ತನ್ನ ದೇಹಕ್ಕೆ ತಾಗಿದೆ. ಅವರು ದುರುದ್ದೇಶದಿಂದ ಕೃತ್ಯವೆಸಗಿದ್ದಾರೆ ಎಂದು ವಿಡಿಯೋ ರೆಕಾರ್ಡ್ ಮಾಡಿ ಹಂಚಿಕೊಂಡಿದ್ದರು. ದೀಪಕ್ ತನ್ನ ದೇಹಕ್ಕೆ ಉದ್ಧೇಶಪೂರ್ವಕವಾಗಿ ಕೈ ತಾಗಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಮನನೊಂದು ಕೋಝಿಕ್ಕೋಡ್‌ನ ಗೋವಿಂದಪುರಂನ ಮನೆಯಲ್ಲಿ ಜನವರಿ 18ರಂದು ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಕೇರಳ ಮಾತ್ರವಲ್ಲದೆ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ದೀಪಕ್ ಸಾವಿಗೆ ಸಂಬಂಧಿಸಿದಂತೆ ಅವರ ತಾಯಿ ಕನ್ಯಕ ಪೊಲೀಸರಿಗೆ ದೂರು ನೀಡಿದ್ದರು. ನನ್ನ ಮಗ ನಿರಪರಾಧಿ, ಶಿಮ್ಜಿತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಸುಳ್ಳಾರೋಪ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ಮೂಲಕ ನನ್ನ ಮಗನ ಮಾನಹಾನಿ ಮಾಡಿ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದರು.

ದೂರು ಸ್ವೀಕರಿಸಿದ ಪೊಲೀಸರು ಶಿಮ್ಜಿತಾ ವಿರುದ್ದ ಬಿಎಎನ್‌ಎಸ್ ಸೆಕ್ಷನ್ 108ರ ಅಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ಕೈಗೊಂಡ ಪೊಲೀಸರು ಮೊದಲು ಚೋರೋಡ್‌ನಲ್ಲಿರುವ ಶಿಮ್ಜಿತಾಳ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಆಕೆ ಅಲ್ಲಿ ಇಲ್ಲ ಎಂದು ತಿಳಿದು ಹುಡುಕಾಟ ಆರಂಭಿಸಿದ್ದರು. ಬುಧವಾರ ವಡಗರದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬುಧವಾರ ಬೆಳಿಗ್ಗೆ 10:30ರ ಸುಮಾರಿಗೆ ವಿಶೇಷ ಪೊಲೀಸ್ ತಂಡ ಶಿಮ್ಜಿತಾ ಅವರನ್ನು ವಶಕ್ಕೆ ಪಡೆದಿದೆ. ನಂತರ ಸಾರ್ವಜನಿಕರು ಮತ್ತು ಮಾಧ್ಯಮದವರ ಕಣ್ಣು ತಪ್ಪಿಸಿ ರಹಸ್ಯವಾಗಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕೊಯಿಲಾಂಡಿ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಮುಂದಿನ ಕ್ರಮವಾಗಿ ಪೊಲೀಸರು ಶಿಮ್ಜಿತಾಳ ಮೊಬೈಲ್ ಫೋನ್ ವಶಕ್ಕೆ ಪಡೆದು ಅದರಲ್ಲಿ ವೈರಲ್ ವಿಡಿಯೋ ಮತ್ತು ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ.

ಶಿಮ್ಜಿತಾಳ ಬಂಧನ ವಿಷಯ ತಿಳಿದು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಜನರು, ಆಕೆಯ ಮೇಲೆ ಕೊಲೆ ಸೇರಿದಂತೆ ಕಠಿಣ ಅಪರಾಧ ಪ್ರಕರಣಗಳನ್ನು ದಾಖಲಿಸಿ ಗರಿಷ್ಠ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಕೂಡ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ. ಒಂದು ವಾರದೊಳಗೆ ತನಿಖೆಯ ಸಮಗ್ರ ವರದಿಯನ್ನು ಸಲ್ಲಿಸುವಂತೆ ಉತ್ತರ ವಲಯದ ಉಪ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ಕಾನೂನು ಕ್ರಮ ಜರುಗಿಸಲು ಅಗತ್ಯವಾದ ಡಿಜಿಟಲ್ ಸಾಕ್ಷ್ಯಗಳನ್ನು ಪಡೆದುಕೊಳ್ಳಲು ಅಧಿಕಾರಿಗಳು ಶಿಮ್ಜಿತಾಳನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಕಾನೂನು-ಸುವ್ಯವಸ್ಥೆ ಹದೆಗಡೆದಂತೆ ನೋಡಿಕೊಳ್ಳಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪೊಲೀಸರು ಶಿಮ್ಜಿತಾಳನ್ನು ನೇರವಾಗಿ ಕುನ್ನಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...