Homeಕರ್ನಾಟಕಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

- Advertisement -
- Advertisement -

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ ಸದನದಲ್ಲಿ ಗದ್ದಲ ಉಂಟಾದಾಗ ಬಿ.ಕೆ ಹರಿಪ್ರಸಾದ್ ಅವರು ಲೋಕಲ್‌ ರೌಡಿಯ ರೀತಿ ರಾಜ್ಯಪಾಲರಿಗೆ ಆವಾಜ್ ಹಾಕಿದ್ದಾರೆ ಎಂಬ ಬಿಜೆಪಿಯ ಟೀಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ.

ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡು ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಭಾಪತಿಗಳ ಮುಖದ ಮೇಲೆ ಕಾಗದ ಪತ್ರಗಳನ್ನು ಹರಿದು ಬಿಸಾಕಿ ಅವಮಾನ ಮಾಡಿ ಸದನದಿಂದಲೇ ಉಚ್ಛಾಟಿತರಾದವರು ಯಾವ ಪಕ್ಷದವರು? ಇಂತಹ ಶಿಸ್ತು, ಸಂಸ್ಕಾರ, ಗೌರವ, ಘನತೆ ತಂದುಕೊಟ್ಟಿರುವ ಎಲ್ಲರೂ ನಮ್ಮ ಪಕ್ಷದವರೇ ಎಂದು ಎದೆ ತಟ್ಟಿ ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ? ಎಂದು ಕೇಳಿದ್ದಾರೆ.

ಸಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯನ್ನೇ ದುರಪಯೋಗ ಪಡಿಸಿಕೊಂಡು ರಾಜ್ಯ ರಾಜಕಾರಣದಲ್ಲೇ ಅತ್ಯಂತ ಕರಾಳ ದಿನವನ್ನು ಸೃಷ್ಟಿ ಮಾಡಿರುವ ಬಿಜೆಪಿ ನಾಯಕರಿಗೆ ಸಂವಿಧಾನದ ಮೌಲ್ಯಗಳ ಬಗ್ಗೆ ಮಾತಾನಾಡಲು ನೈತಿಕತೆ ಇಲ್ಲ ಎಂದಿದ್ದಾರೆ.

ರಾಜ್ಯಪಾಲರು ರಾಜ್ಯದ ತೆರಿಗೆಯ ಹಣದಿಂದ ಅಧಿಕಾರ ಅನುಭವಿಸುತ್ತಿದ್ದಾರೆಯೇ ಹೊರತು “ನಾಗಪುರ”ದಲ್ಲಿರುವ ನೊಂದಣಿಯೇ ಆಗದ ಸಂಘಟನೆಗೆ ಬರುವ ಬಿಟ್ಟಿ ಹಣದಿಂದಲ್ಲ. ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ರಾಜ್ಯಪಾಲರೇ ಇರಲಿ, ಸಾಂವಿಧಾನಿಕ ಹುದ್ದೆಯಲ್ಲೇ ಇರಲಿ ನಮ್ಮ ಹಕ್ಕನ್ನು ಪ್ರತಿಪಾದಿಸುತ್ತಲೇ ಇರುತ್ತೇವೆ. ಬಿಜೆಪಿಯವರಿಂದ ನೈತಿಕತೆ ಕಲಿಯುವ ದಾರಿದ್ರ್ಯ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಹರಿಪ್ರಸಾದ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಜೈಲು, ಬೇಲು, ಡೀಲು, ಅಕ್ರಮದಂತ ಪದಗಳನ್ನೇ ಕೇಳಿ ರಾಜಕೀಯದಲ್ಲಿ ಆಶ್ರಯ ಪಡೆದುಕೊಂಡಿರುವ ಗಾಲಿ ಜನಾರ್ಧನ ರೆಡ್ಡಿಗೆ ಸಂವಿಧಾನ, ಸಂಸತ್ತು-ಸದನ, ವಿಧಾನಸಭೆಯ ಕಾರ್ಯಕಲಾಪ, ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಬಗ್ಗೆ ಕಿಂಚಿತ್ತಾದರೂ ತಿಳುವಳಿಕೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಷ್ಟಕ್ಕೂ ಜನಾರ್ಧನ ರೆಡ್ಡಿ “ಕರ್ನಾಟಕದಲ್ಲಿ ರೌಡಿಗಳ ದರ್ಬಾರೋ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವ ಕರ್ನಾಟಕದ ಬಗ್ಗೆ ರೆಡ್ಡಿ ಆತಂಕವಾಗಿದ್ದಾರೆ ಎಂದು ಸ್ಪಷ್ಟಪಡಿಸಬೇಕಿತ್ತು. ಕರ್ನಾಟಕದ ಗಡಿಯನ್ನು ತಾವೇ ಕಿತ್ತು ಅಕ್ರಮ ಗಣಿಗಾರಿಕೆ ಮಾಡಿದ ಕರ್ನಾಟಕ ರಾಜ್ಯದ ಬಗ್ಗೆಯೋ? ಅಥವಾ ಬಳ್ಳಾರಿ ಜಿಲ್ಲೆಯನ್ನು “ರಿಪಬ್ಲಿಕ್” ಮಾಡಿಕೊಂಡು ಗೂಂಡಾಗಿರಿ ನಡೆಸಿದ ಕಾಲದ ಕರ್ನಾಟಕದ ಬಗ್ಗೆಯೋ? ಎಂದು ಹರಿಪ್ರಸಾದ್ ಖಾರವಾಗಿ ಕೇಳಿದ್ದಾರೆ.

ಬಗೆದಷ್ಟು ಬಯಲಾಗುವ ಈ ಜನಾರ್ಧನ ರೆಡ್ಡಿ ಎಲ್ಲಿಯೂ ಸಲ್ಲದ ಪಾಪದ ಕೂಸು. ಬಿಜೆಪಿ ಪಕ್ಷದಲ್ಲಿದ್ದೇನೆ ಎಂದು ಭಾವಿಸಿರುವ ರೆಡ್ಡಿ, ಒಮ್ಮೆ ಬಿಜೆಪಿ ಪಕ್ಷದ ಮಾಜಿ ಸಂಸದ ಪ್ರತಾಪ ಸಿಂಹ ಬರೆದಿರುವ “ಮೈನಿಂಗ್ ಮಾಫಿಯಾ” ಪುಸ್ತಕದಲ್ಲಿ ಹಾಡಿ ಹೊಗಳಿದ್ದಾರೆ ಒಮ್ಮೆ ಬಿಡುವು ಮಾಡಿಕೊಂಡಿ ಓದಲಿ. ಅದೂ ಸರಿಯೇ ಪುಸ್ತಕ ಓದುವ ಸಮಯ ಜನಾರ್ಧನ ರೆಡ್ಡಿಗೆ ಎಲ್ಲಿ ಸಿಗಬೇಕು. ಸಾವಿರಾರು ಪುಟಗಳ ಚಾರ್ಜ್ ಶೀಟ್, ಕೇಸ್, ಕೋರ್ಟ್, ಬೇಲು-ಡೀಲುಗಳ ಪ್ರತಿಗಳನ್ನೇ ಓದುವುದಕ್ಕೇ ಸಮಯ ಸಾಲುತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ದುಡಿಯುವ ಜನರ ಉದ್ಯೋಗವನ್ನೇ ಕಸಿದುಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಿಶೇಷ ಅಧಿವೇಶನ ನಡೆಸದೇ, ಜನಾರ್ಧನ ರೆಡ್ಡಿ ಮಾಡಿರುವ ಅಕ್ರಮಗಳ ಬಗ್ಗೆ ವಿಶೇಷ ಅಧಿವೇಶನ ನಡೆಸಬೇಕೇ? “ಗಾಲಿ” ಇಲ್ಲದ ಜನಾರ್ಧನ ರೆಡ್ಡಿಯ ರಾಜಕೀಯ ಚಕ್ರ ಮುರಿದು ಬಿದ್ದಾಗಿದೆ, ಮುಂದೆ ಅವಶೇಷಗಳು ಕೂಡ ಸಿಗುವುದಿಲ್ಲ ಎಚ್ಚರಿಕೆ..! ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...