Homeಕರ್ನಾಟಕಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

- Advertisement -
- Advertisement -

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ ಸದನದಲ್ಲಿ ಗದ್ದಲ ಉಂಟಾದಾಗ ಬಿ.ಕೆ ಹರಿಪ್ರಸಾದ್ ಅವರು ಲೋಕಲ್‌ ರೌಡಿಯ ರೀತಿ ರಾಜ್ಯಪಾಲರಿಗೆ ಆವಾಜ್ ಹಾಕಿದ್ದಾರೆ ಎಂಬ ಬಿಜೆಪಿಯ ಟೀಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ.

ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡು ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಭಾಪತಿಗಳ ಮುಖದ ಮೇಲೆ ಕಾಗದ ಪತ್ರಗಳನ್ನು ಹರಿದು ಬಿಸಾಕಿ ಅವಮಾನ ಮಾಡಿ ಸದನದಿಂದಲೇ ಉಚ್ಛಾಟಿತರಾದವರು ಯಾವ ಪಕ್ಷದವರು? ಇಂತಹ ಶಿಸ್ತು, ಸಂಸ್ಕಾರ, ಗೌರವ, ಘನತೆ ತಂದುಕೊಟ್ಟಿರುವ ಎಲ್ಲರೂ ನಮ್ಮ ಪಕ್ಷದವರೇ ಎಂದು ಎದೆ ತಟ್ಟಿ ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ? ಎಂದು ಕೇಳಿದ್ದಾರೆ.

ಸಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯನ್ನೇ ದುರಪಯೋಗ ಪಡಿಸಿಕೊಂಡು ರಾಜ್ಯ ರಾಜಕಾರಣದಲ್ಲೇ ಅತ್ಯಂತ ಕರಾಳ ದಿನವನ್ನು ಸೃಷ್ಟಿ ಮಾಡಿರುವ ಬಿಜೆಪಿ ನಾಯಕರಿಗೆ ಸಂವಿಧಾನದ ಮೌಲ್ಯಗಳ ಬಗ್ಗೆ ಮಾತಾನಾಡಲು ನೈತಿಕತೆ ಇಲ್ಲ ಎಂದಿದ್ದಾರೆ.

ರಾಜ್ಯಪಾಲರು ರಾಜ್ಯದ ತೆರಿಗೆಯ ಹಣದಿಂದ ಅಧಿಕಾರ ಅನುಭವಿಸುತ್ತಿದ್ದಾರೆಯೇ ಹೊರತು “ನಾಗಪುರ”ದಲ್ಲಿರುವ ನೊಂದಣಿಯೇ ಆಗದ ಸಂಘಟನೆಗೆ ಬರುವ ಬಿಟ್ಟಿ ಹಣದಿಂದಲ್ಲ. ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ರಾಜ್ಯಪಾಲರೇ ಇರಲಿ, ಸಾಂವಿಧಾನಿಕ ಹುದ್ದೆಯಲ್ಲೇ ಇರಲಿ ನಮ್ಮ ಹಕ್ಕನ್ನು ಪ್ರತಿಪಾದಿಸುತ್ತಲೇ ಇರುತ್ತೇವೆ. ಬಿಜೆಪಿಯವರಿಂದ ನೈತಿಕತೆ ಕಲಿಯುವ ದಾರಿದ್ರ್ಯ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಹರಿಪ್ರಸಾದ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಜೈಲು, ಬೇಲು, ಡೀಲು, ಅಕ್ರಮದಂತ ಪದಗಳನ್ನೇ ಕೇಳಿ ರಾಜಕೀಯದಲ್ಲಿ ಆಶ್ರಯ ಪಡೆದುಕೊಂಡಿರುವ ಗಾಲಿ ಜನಾರ್ಧನ ರೆಡ್ಡಿಗೆ ಸಂವಿಧಾನ, ಸಂಸತ್ತು-ಸದನ, ವಿಧಾನಸಭೆಯ ಕಾರ್ಯಕಲಾಪ, ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಬಗ್ಗೆ ಕಿಂಚಿತ್ತಾದರೂ ತಿಳುವಳಿಕೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಷ್ಟಕ್ಕೂ ಜನಾರ್ಧನ ರೆಡ್ಡಿ “ಕರ್ನಾಟಕದಲ್ಲಿ ರೌಡಿಗಳ ದರ್ಬಾರೋ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವ ಕರ್ನಾಟಕದ ಬಗ್ಗೆ ರೆಡ್ಡಿ ಆತಂಕವಾಗಿದ್ದಾರೆ ಎಂದು ಸ್ಪಷ್ಟಪಡಿಸಬೇಕಿತ್ತು. ಕರ್ನಾಟಕದ ಗಡಿಯನ್ನು ತಾವೇ ಕಿತ್ತು ಅಕ್ರಮ ಗಣಿಗಾರಿಕೆ ಮಾಡಿದ ಕರ್ನಾಟಕ ರಾಜ್ಯದ ಬಗ್ಗೆಯೋ? ಅಥವಾ ಬಳ್ಳಾರಿ ಜಿಲ್ಲೆಯನ್ನು “ರಿಪಬ್ಲಿಕ್” ಮಾಡಿಕೊಂಡು ಗೂಂಡಾಗಿರಿ ನಡೆಸಿದ ಕಾಲದ ಕರ್ನಾಟಕದ ಬಗ್ಗೆಯೋ? ಎಂದು ಹರಿಪ್ರಸಾದ್ ಖಾರವಾಗಿ ಕೇಳಿದ್ದಾರೆ.

ಬಗೆದಷ್ಟು ಬಯಲಾಗುವ ಈ ಜನಾರ್ಧನ ರೆಡ್ಡಿ ಎಲ್ಲಿಯೂ ಸಲ್ಲದ ಪಾಪದ ಕೂಸು. ಬಿಜೆಪಿ ಪಕ್ಷದಲ್ಲಿದ್ದೇನೆ ಎಂದು ಭಾವಿಸಿರುವ ರೆಡ್ಡಿ, ಒಮ್ಮೆ ಬಿಜೆಪಿ ಪಕ್ಷದ ಮಾಜಿ ಸಂಸದ ಪ್ರತಾಪ ಸಿಂಹ ಬರೆದಿರುವ “ಮೈನಿಂಗ್ ಮಾಫಿಯಾ” ಪುಸ್ತಕದಲ್ಲಿ ಹಾಡಿ ಹೊಗಳಿದ್ದಾರೆ ಒಮ್ಮೆ ಬಿಡುವು ಮಾಡಿಕೊಂಡಿ ಓದಲಿ. ಅದೂ ಸರಿಯೇ ಪುಸ್ತಕ ಓದುವ ಸಮಯ ಜನಾರ್ಧನ ರೆಡ್ಡಿಗೆ ಎಲ್ಲಿ ಸಿಗಬೇಕು. ಸಾವಿರಾರು ಪುಟಗಳ ಚಾರ್ಜ್ ಶೀಟ್, ಕೇಸ್, ಕೋರ್ಟ್, ಬೇಲು-ಡೀಲುಗಳ ಪ್ರತಿಗಳನ್ನೇ ಓದುವುದಕ್ಕೇ ಸಮಯ ಸಾಲುತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ದುಡಿಯುವ ಜನರ ಉದ್ಯೋಗವನ್ನೇ ಕಸಿದುಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಿಶೇಷ ಅಧಿವೇಶನ ನಡೆಸದೇ, ಜನಾರ್ಧನ ರೆಡ್ಡಿ ಮಾಡಿರುವ ಅಕ್ರಮಗಳ ಬಗ್ಗೆ ವಿಶೇಷ ಅಧಿವೇಶನ ನಡೆಸಬೇಕೇ? “ಗಾಲಿ” ಇಲ್ಲದ ಜನಾರ್ಧನ ರೆಡ್ಡಿಯ ರಾಜಕೀಯ ಚಕ್ರ ಮುರಿದು ಬಿದ್ದಾಗಿದೆ, ಮುಂದೆ ಅವಶೇಷಗಳು ಕೂಡ ಸಿಗುವುದಿಲ್ಲ ಎಚ್ಚರಿಕೆ..! ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...