Homeಕರ್ನಾಟಕಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

- Advertisement -
- Advertisement -

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ ಸದನದಲ್ಲಿ ಗದ್ದಲ ಉಂಟಾದಾಗ ಬಿ.ಕೆ ಹರಿಪ್ರಸಾದ್ ಅವರು ಲೋಕಲ್‌ ರೌಡಿಯ ರೀತಿ ರಾಜ್ಯಪಾಲರಿಗೆ ಆವಾಜ್ ಹಾಕಿದ್ದಾರೆ ಎಂಬ ಬಿಜೆಪಿಯ ಟೀಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ.

ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡು ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಸಭಾಪತಿಗಳ ಮುಖದ ಮೇಲೆ ಕಾಗದ ಪತ್ರಗಳನ್ನು ಹರಿದು ಬಿಸಾಕಿ ಅವಮಾನ ಮಾಡಿ ಸದನದಿಂದಲೇ ಉಚ್ಛಾಟಿತರಾದವರು ಯಾವ ಪಕ್ಷದವರು? ಇಂತಹ ಶಿಸ್ತು, ಸಂಸ್ಕಾರ, ಗೌರವ, ಘನತೆ ತಂದುಕೊಟ್ಟಿರುವ ಎಲ್ಲರೂ ನಮ್ಮ ಪಕ್ಷದವರೇ ಎಂದು ಎದೆ ತಟ್ಟಿ ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ? ಎಂದು ಕೇಳಿದ್ದಾರೆ.

ಸಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯನ್ನೇ ದುರಪಯೋಗ ಪಡಿಸಿಕೊಂಡು ರಾಜ್ಯ ರಾಜಕಾರಣದಲ್ಲೇ ಅತ್ಯಂತ ಕರಾಳ ದಿನವನ್ನು ಸೃಷ್ಟಿ ಮಾಡಿರುವ ಬಿಜೆಪಿ ನಾಯಕರಿಗೆ ಸಂವಿಧಾನದ ಮೌಲ್ಯಗಳ ಬಗ್ಗೆ ಮಾತಾನಾಡಲು ನೈತಿಕತೆ ಇಲ್ಲ ಎಂದಿದ್ದಾರೆ.

ರಾಜ್ಯಪಾಲರು ರಾಜ್ಯದ ತೆರಿಗೆಯ ಹಣದಿಂದ ಅಧಿಕಾರ ಅನುಭವಿಸುತ್ತಿದ್ದಾರೆಯೇ ಹೊರತು “ನಾಗಪುರ”ದಲ್ಲಿರುವ ನೊಂದಣಿಯೇ ಆಗದ ಸಂಘಟನೆಗೆ ಬರುವ ಬಿಟ್ಟಿ ಹಣದಿಂದಲ್ಲ. ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ರಾಜ್ಯಪಾಲರೇ ಇರಲಿ, ಸಾಂವಿಧಾನಿಕ ಹುದ್ದೆಯಲ್ಲೇ ಇರಲಿ ನಮ್ಮ ಹಕ್ಕನ್ನು ಪ್ರತಿಪಾದಿಸುತ್ತಲೇ ಇರುತ್ತೇವೆ. ಬಿಜೆಪಿಯವರಿಂದ ನೈತಿಕತೆ ಕಲಿಯುವ ದಾರಿದ್ರ್ಯ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಹರಿಪ್ರಸಾದ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಜೈಲು, ಬೇಲು, ಡೀಲು, ಅಕ್ರಮದಂತ ಪದಗಳನ್ನೇ ಕೇಳಿ ರಾಜಕೀಯದಲ್ಲಿ ಆಶ್ರಯ ಪಡೆದುಕೊಂಡಿರುವ ಗಾಲಿ ಜನಾರ್ಧನ ರೆಡ್ಡಿಗೆ ಸಂವಿಧಾನ, ಸಂಸತ್ತು-ಸದನ, ವಿಧಾನಸಭೆಯ ಕಾರ್ಯಕಲಾಪ, ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಬಗ್ಗೆ ಕಿಂಚಿತ್ತಾದರೂ ತಿಳುವಳಿಕೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಷ್ಟಕ್ಕೂ ಜನಾರ್ಧನ ರೆಡ್ಡಿ “ಕರ್ನಾಟಕದಲ್ಲಿ ರೌಡಿಗಳ ದರ್ಬಾರೋ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವ ಕರ್ನಾಟಕದ ಬಗ್ಗೆ ರೆಡ್ಡಿ ಆತಂಕವಾಗಿದ್ದಾರೆ ಎಂದು ಸ್ಪಷ್ಟಪಡಿಸಬೇಕಿತ್ತು. ಕರ್ನಾಟಕದ ಗಡಿಯನ್ನು ತಾವೇ ಕಿತ್ತು ಅಕ್ರಮ ಗಣಿಗಾರಿಕೆ ಮಾಡಿದ ಕರ್ನಾಟಕ ರಾಜ್ಯದ ಬಗ್ಗೆಯೋ? ಅಥವಾ ಬಳ್ಳಾರಿ ಜಿಲ್ಲೆಯನ್ನು “ರಿಪಬ್ಲಿಕ್” ಮಾಡಿಕೊಂಡು ಗೂಂಡಾಗಿರಿ ನಡೆಸಿದ ಕಾಲದ ಕರ್ನಾಟಕದ ಬಗ್ಗೆಯೋ? ಎಂದು ಹರಿಪ್ರಸಾದ್ ಖಾರವಾಗಿ ಕೇಳಿದ್ದಾರೆ.

ಬಗೆದಷ್ಟು ಬಯಲಾಗುವ ಈ ಜನಾರ್ಧನ ರೆಡ್ಡಿ ಎಲ್ಲಿಯೂ ಸಲ್ಲದ ಪಾಪದ ಕೂಸು. ಬಿಜೆಪಿ ಪಕ್ಷದಲ್ಲಿದ್ದೇನೆ ಎಂದು ಭಾವಿಸಿರುವ ರೆಡ್ಡಿ, ಒಮ್ಮೆ ಬಿಜೆಪಿ ಪಕ್ಷದ ಮಾಜಿ ಸಂಸದ ಪ್ರತಾಪ ಸಿಂಹ ಬರೆದಿರುವ “ಮೈನಿಂಗ್ ಮಾಫಿಯಾ” ಪುಸ್ತಕದಲ್ಲಿ ಹಾಡಿ ಹೊಗಳಿದ್ದಾರೆ ಒಮ್ಮೆ ಬಿಡುವು ಮಾಡಿಕೊಂಡಿ ಓದಲಿ. ಅದೂ ಸರಿಯೇ ಪುಸ್ತಕ ಓದುವ ಸಮಯ ಜನಾರ್ಧನ ರೆಡ್ಡಿಗೆ ಎಲ್ಲಿ ಸಿಗಬೇಕು. ಸಾವಿರಾರು ಪುಟಗಳ ಚಾರ್ಜ್ ಶೀಟ್, ಕೇಸ್, ಕೋರ್ಟ್, ಬೇಲು-ಡೀಲುಗಳ ಪ್ರತಿಗಳನ್ನೇ ಓದುವುದಕ್ಕೇ ಸಮಯ ಸಾಲುತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ದುಡಿಯುವ ಜನರ ಉದ್ಯೋಗವನ್ನೇ ಕಸಿದುಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಿಶೇಷ ಅಧಿವೇಶನ ನಡೆಸದೇ, ಜನಾರ್ಧನ ರೆಡ್ಡಿ ಮಾಡಿರುವ ಅಕ್ರಮಗಳ ಬಗ್ಗೆ ವಿಶೇಷ ಅಧಿವೇಶನ ನಡೆಸಬೇಕೇ? “ಗಾಲಿ” ಇಲ್ಲದ ಜನಾರ್ಧನ ರೆಡ್ಡಿಯ ರಾಜಕೀಯ ಚಕ್ರ ಮುರಿದು ಬಿದ್ದಾಗಿದೆ, ಮುಂದೆ ಅವಶೇಷಗಳು ಕೂಡ ಸಿಗುವುದಿಲ್ಲ ಎಚ್ಚರಿಕೆ..! ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....