Homeಮುಖಪುಟಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

- Advertisement -
- Advertisement -

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಅಲೆಮಾರಿ ಸಮುದಾಯವಾದ ಬೇಡ ಬುಡಗ ಜಂಗಮದ 23 ವರ್ಷದ ಮಹಿಳೆ ಉಬಿದಿ ರೇಖಾ ಅವರ ಹೆರಿಗೆ ದಿನಾಂಕ ಸಮೀಪಿಸುತ್ತಿದ್ದು, ಆಸ್ಪತ್ರೆಗೆ ದಾಖಲಾಗಲು ಆಧಾರ್ ಕಾರ್ಡ್‌ ಇಲ್ಲದಿರುವುದು ಆಕೆಗೆ ದೊಡ್ಡ ಸಮಸ್ಯೆಯಾಗಿದೆ. ಯಾವುದೇ ಆಸ್ಪತ್ರೆಗೆ ಹೋದರೂ, ಆಧಾರ್ ಕಾರ್ಡ್ ಇಲ್ಲದೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ.

ರೇಖಾ ಮೂಲತಃ ಕರೀಂನಗರ ಜಿಲ್ಲೆಯ ತಿಮ್ಮಾಪುರ ಮಂಡಲದ ರಾಮಕೃಷ್ಣ ಕಾಲೋನಿ ಗ್ರಾಮದವರು. ಆದರೆ, ಅವರು ಈ ಗ್ರಾಮದ ಶಾಶ್ವತ ನಿವಾಸಿ ಎನ್ನಲಾಗದು. ಏಕೆಂದರೆ, ಗ್ರಾಮದ ಇತರ ಹಲವರಂತೆ ಇವರ ಪೋಷಕರೂ ಕೂಡ ರಾಜ್ಯದಾದ್ಯಂತ ಅಲೆದಾಡಿ ಜೀವನೋಪಾಯ ಕಂಡುಕೊಳ್ಳುವವರು. ವರದಿಯ ಪ್ರಕಾರ, ಪೋಷಕರು ರಾಜ್ಯದ ಯಾವುದೋ ಮೂಲೆಯಲ್ಲಿ ಇದ್ದಾಗ ರೇಖಾ ಅವರ ಜನನ ಆಗಿತ್ತು. ಹಾಗಾಗಿ, ಅವರ ಜನನ ಎಲ್ಲೂ ನೋಂದಣಿ ಆಗಿಲ್ಲ.

ಜನನ ನೋಂದಣಿ ಆಗದ ಕಾರಣ ರೇಖಾ ಅವರಿಗೆ ಆಧಾರ್ ಕಾರ್ಡ್ ದೊರೆತಿಲ್ಲ. ಪರಿಣಾಮ ಈಗ ಆಕೆಯ ಗರ್ಭಾವಸ್ಥೆಯಲ್ಲಿ ಸರ್ಕಾರದ ಯಾವುದೇ ಕಲ್ಯಾಣ ಯೋಜನೆಗಳನ್ನು ಪಡೆಯಲು ಆಗಿಲ್ಲ. ದಿನನಿತ್ಯದ ಆರೋಗ್ಯ ರಕ್ಷಣೆ ಮತ್ತು ಈಗ ಸುರಕ್ಷಿತ ಹೆರಿಗೆಯ ಹಕ್ಕನ್ನೂ ಪಡೆಯಲು ಹೆಣಗಾಡುವಂತಾಗಿದೆ.

ವೈದ್ಯರ ನಿರ್ದೇಶನಗಳು ಇಲ್ಲದಿದ್ದರೂ, ಸಹಜವಾಗಿ ಹೆರಿಗೆಯ ದಿನಾಂಕ ಸಮೀಪಿಸುತ್ತಿರುವುದು ಗೊತ್ತಾದ ಕಾರಣ ರೇಖಾ ಅವರು ಇತ್ತೀಚೆಗೆ ಕರೀಂನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹೋಗಿದ್ದರು. ಆದರೆ, ಅಲ್ಲಿ ಆಧಾರ್ ಕಾರ್ಡ್‌ ಇಲ್ಲದೆ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ರೇಖಾ ಜಿಲ್ಲೆಯ ಇತರ ಸರ್ಕಾರಿ ಆಸ್ಪತ್ರೆಗಳಿಗೂ ಹೋಗಿ ಬಂದಿದ್ದಾರೆ. ಎಲ್ಲೂ ಆಕೆಯನ್ನು ಸೇರಿಸಿಕೊಂಡಿಲ್ಲ ಎಂದು ಆರೋಪಿಸಲಾಗಿದೆ. ಅಲೆಮಾರಿ ಸಮುದಾಯವಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗುವುದು ಆಕೆಗೆ ಕನಸಿನ ಮಾತಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಆಧಾರ್ ಕಾರ್ಡ್‌ ಅನ್ನು ಕೇವಲ ಗುರುತಿಸುವಿಕೆಗಾಗಿ ಮಾತ್ರ ಕೇಳಲಾಗುತ್ತದೆ. ಅದು ಇಲ್ಲ ಎಂಬ ಕಾರಣಕ್ಕೆ ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ. ಒಂದು ವೇಳೆ ಆಧಾರ್ ಕಾರ್ಡ್ ಇಲ್ಲದಿದ್ದರೆ, ಅಂತವರನ್ನು ‘ಅಜ್ಞಾತ ಅಥವಾ ಅಪರಿಚತ ವ್ಯಕ್ತಿ’ ಎಂದು ಪರಿಗಣಿಸಲಾಗುತ್ತದೆ. ಅವರ ಬಗ್ಗೆ ಪೊಲೀಸರಿಗೆ ವರದಿ ಮಾಡಲಾಗುತ್ತದೆ. ಆದರೆ, ಅವರಿಗೆ ಚಿಕಿತ್ಸೆ ನಿರಾಕರಿಸಲಾಗುವುದಿಲ್ಲ” ಎಂದು ಜಿಲ್ಲಾ ಜನರಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಜಿ. ವೀರಾ ರೆಡ್ಡಿ ಹೇಳಿದ್ದಾರೆ. ಒಂದು ವೇಳೆ ಇಂತಹ ಯಾವುದೇ ಸಮಸ್ಯೆ ಅಥವಾ ತೊಂದರೆ ಉಂಟಾದರೆ, ಅದನ್ನು ನೇರವಾಗಿ ತಮ್ಮ ಗಮನಕ್ಕೆ ತರುವಂತೆ ಅವರು ಕೇಳಿಕೊಂಡಿದ್ದಾರೆ.

ಹಿರಿಯ ಅಧಿಕಾರಿ ಹೇಳಿಕೆ ಕೊಟ್ಟರೂ ತಳಮಟ್ಟದಲ್ಲಿ ನೈಜತೆ ಬೇರೆಯೇ ಇದೆ. ಅಲ್ಲಿ ನಿಯಮ ಮತ್ತು ಅದರ ಅನುಷ್ಠಾನದ ನಡುವೆ ಅಂತರವಿದೆ. ಯಾವುದೇ ಆಸ್ಪತ್ರೆಗೆ ಹೋದರೂ ದಾಖಲಿಸಿಕೊಳ್ಳಲು ನಿರಾಕರಿಸುತ್ತಿರುವುದು ಬಡ, ಅನಕ್ಷರಸ್ಥ, ಆರ್ಥಿಕವಾಗಿ ಸಬಲರಲ್ಲದ ರೇಖಾ ಅವರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ಹೆರಿಗೆಯ ದಿನಾಂಕ ಸಮೀಪಿಸಿದರೂ, ಆಕೆಗೆ ಎಲ್ಲಿ ಹೆರಿಗೆಯಾಗಲಿದೆ ಎಂಬ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ನನ್ನ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ, ನಾನು ತಾಯಿಯಾಗಲು ಸಾಧ್ಯವಿಲ್ಲವೇ?” ಎಂದು ಆಕೆ ಕೇಳುತ್ತಾರೆ ಎಂದು ವರದಿ ಹೇಳಿದೆ.

ಸ್ಥಳೀಯ ಬಿಜೆಪಿ ಮುಖಂಡ ಸುಗುರ್ತಿ ಜಗದೀಶ್ವರಚಾರಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದ್ದರು. ಅವರು ಗ್ರಾಮ ಪಂಚಾಯತ್‌ನಿಂದ ವಾಸಸ್ಥಳದ ಪ್ರಮಾಣಪತ್ರವನ್ನು ಪಡೆಯಲು ರೇಖಾ ಅವರಿಗೆ ಸಹಾಯ ಮಾಡಿದ್ದರು. ಆದರೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಆಧಾರ್ ಪೋರ್ಟಲ್ ರೇಖಾ ಅವರ ವಿವರಗಳನ್ನು ಸ್ವೀಕರಿಸಿಲ್ಲ. ಅವರ ಅರ್ಜಿ ಸ್ಥಗಿತಗೊಂಡಿದೆ.

ರೇಖಾ ಅವರ ಪ್ರಕರಣವು ದೊಡ್ಡ ಸಮಸ್ಯೆಯನ್ನು ಪ್ರತಿಬಿಂಬಿಸುತ್ತದೆ ಎಂದು ಜಗದೀಶ್ವರಚಾರಿ ಹೇಳಿದ್ದಾರೆ.

ಅಲೆಮಾರಿ ಸಮುದಾಯಗಳ ಅನೇಕ ಮಹಿಳೆಯರು ಮತ್ತು ಮಕ್ಕಳು, ಮನೆ ಜನನ, ವಲಸೆ ನೋಂದಣಿಗಳ ಕೊರತೆಯಿಂದಾಗಿ ಔಪಚಾರಿಕ ದಾಖಲೆಗಳಿಂದ ಹೊರಗೆ ಉಳಿದಿದ್ದಾರೆ. ಪರಿಣಾಮ ಅವರ ಮಕ್ಕಳು ಶಿಕ್ಷಣದಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಕಲ್ಯಾಣ ಯೋಜನೆಗಳು ಆ ಸಮುದಾಯದ ಜನರಿಗೆ ಸಿಗುತ್ತಿಲ್ಲ. ಅಲೆಮಾರಿ ಸಮುದಾಯಕ್ಕೆಂದೇ ಮೀಸಲಾದ ಯೋಜನೆಗಳ ಲಾಭವನ್ನೂ ಪಡೆಯಲು ಆಗುತ್ತಿಲ್ಲ ಎಂದು ಜಗದೀಶ್ವರಚಾರಿ ವಿಷಾದ ವ್ಯಕ್ತಪಡಿಸಿದ್ದಾರೆ.

ತುರ್ತು ಆಸ್ಪತ್ರೆ ದಾಖಲಾತಿಗಳಿಗೆ ಆಧಾರ್ ಕಡ್ಡಾಯಗೊಳಿಸುವ ಕಾನೂನುಬದ್ಧತೆಯ ಬಗ್ಗೆ ತೆಲಂಗಾಣ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು. ಆಧಾರ್ ಇಲ್ಲದ ಕಾರಣಕ್ಕೆ ತೆಲಂಗಾಣದಲ್ಲಿ ಕುಟುಂಬಗಳನ್ನು ಮಹಾಲಕ್ಷ್ಮಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಮತ್ತು ಕಲ್ಯಾಣ ಲಕ್ಷ್ಮಿಯಂತಹ ಯೋಜನೆಗಳಿಂದ ಹೊರಗಿಡಲಾಗುತ್ತದೆ ಎಂದು ವರದಿಯಾಗಿದೆ.

ಈ ಸಮಸ್ಯೆಗಳನ್ನು ತಗ್ಗಿಸಲು, ತೆಲಂಗಾಣ ಸರ್ಕಾರ ಜನವರಿ 2026ರಲ್ಲಿ ಉಚಿತ ಮಹಿಳಾ ಬಸ್ ಪ್ರಯಾಣಕ್ಕಾಗಿ ಸ್ಮಾರ್ಟ್ ಐಡಿ ಕಾರ್ಡ್‌ಗಳನ್ನು ಪರಿಚಯಿಸಿದೆ. ಇದು ಆಧಾರ್ ಪರಿಶೀಲನೆಯಲ್ಲಿ ತೊಂದರೆ ಎದುರಿಸಬಹುದಾದವರಿಗೆ ಪರಿಹಾರವನ್ನು ನೀಡುವ ಗುರಿಯನ್ನು ಹೊಂದಿದೆ.

Courtesy : newindianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...