Homeಮುಖಪುಟಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ ಸ್ಥಳಾಂತರಗೊಂಡಿದೆ.

ಧೆಂಕನಾಲ್ ಜಿಲ್ಲೆಯ ಪರ್ಜಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂದರ್ಸಿಂಗ ಗ್ರಾಮದಲ್ಲಿ ಜನವರಿ 4 ರಂದು ಪಾದ್ರಿ ಬಿಪಿನ್ ಬಿಹಾರಿ ನಾಯಕ್ ಮೇಲೆ ಹಲ್ಲೆ ನಡೆಸಲಾಯಿತು. ಎಫ್‌ಐಆರ್ ಪ್ರಕಾರ, 15 ರಿಂದ 20 ಜನರ ಗುಂಪು ನಾಯಕ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಮನೆಗೆ ಬಲವಂತವಾಗಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿತು.

ಪಾದ್ರಿಯನ್ನು ಥಳಿಸಿ, ಚಪ್ಪಲಿ ಹಾರ ಹಾಕಿ, ಗ್ರಾಮದಾದ್ಯಂತ ಮೆರವಣಿಗೆ ಮಾಡಿ, ಬಲವಂತವಾಗಿ ಕೊಳಕು ನೀರು ಕುಡಿಸಲಾಯಿತು. ಅವರ ಇಚ್ಛೆಗೆ ವಿರುದ್ಧವಾಗಿ ದೇವಾಲಯದ ಮುಂದೆ ನಮಸ್ಕರಿಸಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾಯಕ್ ಅವರ ಪತ್ನಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಯ ನಂತರ, ನಾಯಕ್ ಅವರು ಅಂಗುಲ್ ಜಿಲ್ಲೆಯ ತಮ್ಮ ಸ್ಥಳೀಯ ಗ್ರಾಮದಲ್ಲಿಯೇ ವಾಸಿಸುತ್ತಿದ್ದಾರೆ. ಅವರು ಮನಗೆಗೆ ಹಿಂತಿರುಗಲು ಹೆದರುತ್ತಿದ್ದಾರೆ. ಒಂದು ವಾರದೊಳಗೆ ಮನೆ ಬಾಡಿಗೆ ಮನೆ ಖಾಲಿ ಮಾಡುವಂತೆ ಮಾಲೀಕರು ಒತ್ತಾಯಿಸಿದ ಬಳಿಕ ತಮ್ಮ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರ ಕುಟುಂಬ ತಿಳಿಸಿದೆ.

“ನನ್ನ ಸಹೋದರ ಎಂಟು ವರ್ಷಗಳ ಕಾಲ ಯಾವುದೇ ಸಮಸ್ಯೆಯಿಲ್ಲದೆ ವಾಸಿಸುತ್ತಿದ್ದ ಮನೆಯಿಂದ ಅದರ ಮಾಲೀಕರು ಹೊರಹೋಗುವಂತೆ ಒತ್ತಡ ಹಾಕುತ್ತಿದ್ದಾರೆ; ಅನಿವಾರ್ಯವಾಗಿ ನಾವು ಅಲ್ಲಿಂದ ಹೊರಟೆವು” ಎಂದು ನಾಯಕ್ ಅವರ ಹಿರಿಯ ಸಹೋದರ ಉದಯನಾಥ್ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಒಬ್ಬರ ಸ್ವಂತ ನಂಬಿಕೆಯನ್ನು ಪಾಲಿಸುವುದು ಪಾಪವೇ? ಈ ದೇಶದಲ್ಲಿ ಅದು ಮೂಲಭೂತ ಹಕ್ಕಲ್ಲವೇ” ಎಂದು ಪ್ರಶ್ನಿಸಿದ ಅವರು, ತನ್ನ ಸಹೋದರನನ್ನು ಗ್ರಾಮಸ್ಥರೊಬ್ಬರು ಅವರ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಲು ಆಹ್ವಾನಿಸಿದ್ದರು, ಬಲವಂತದ ಧಾರ್ಮಿಕ ಮತಾಂತರ ಮಾಡಲು ಅಲ್ಲ ಎಂದು ಜೇಮ್ಸ್ ಆರೋಪಗಳನ್ನು ತಿರಸ್ಕರಿಸಿದರು.

“ಅವರು ಕಳೆದ ಎರಡು ವರ್ಷಗಳಿಂದ ಅಲ್ಲಿಗೆ ಪ್ರಾರ್ಥನೆ ಸಲ್ಲಿಸಲು ಮಾತ್ರ ಹೋಗುತ್ತಿದ್ದಾರೆ. ಈ ಆರೋಪಗಳು ಸುಳ್ಳು ಮತ್ತು ಪ್ರಕರಣವನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಹೇಳಿದರು.

ಘಟನೆಯ ಗಂಭೀರತೆಯ ಹೊರತಾಗಿಯೂ ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂದು ಕುಟುಂಬ ಆರೋಪಿಸಿದೆ. ದೂರಿನ ಪ್ರಕಾರ, ನಾಯಕ್ ಅವರ ಪತ್ನಿ ಹಲ್ಲೆ ನಡೆದ ಅರ್ಧ ಗಂಟೆಯೊಳಗೆ ಪೊಲೀಸ್ ಠಾಣೆಗೆ ತಲುಪಿದರು, ಆದರೆ ಪೊಲೀಸರು ತುರ್ತು ಕ್ರಮ ತೆಗೆದುಕೊಂಡಿಲ್ಲ.

“ಅಪರಾಧದ ಗಂಭೀರತೆಯ ಹೊರತಾಗಿಯೂ, ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪುವ ಹೊತ್ತಿಗೆ, ನನ್ನ ಪತಿ ಈಗಾಗಲೇ ತೀವ್ರ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸಿದ್ದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕುಟುಂಬವು ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ. ಧೆಂಕನಲ್ ಎಸ್‌ಪಿ ಅಭಿನವ್ ಸೋಂಕರ್ ಅವರು ಪರ್ಜಂಗ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್‌ನಿಂದ ವಿವರಣೆ ಕೇಳಿದ್ದೇವೆ ಎಂದು ಹೇಳಿದರು. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು, ಇದುವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ರಾಜಕೀಯ ಪ್ರತಿಕ್ರಿಯೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಹಲ್ಲೆಯನ್ನು ಖಂಡಿಸಿದರು. “ತೀವ್ರ ಅಮಾನವೀಯ ಕೃತ್ಯ” ಎಂದು ಕರೆದು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅಸಹಿಷ್ಣುತೆಯ ವಾತಾವರಣವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕೂಡ ದಾಳಿಯನ್ನು ಖಂಡಿಸಿದರು. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ, ಹೊಣೆಗಾರರಾದವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ಪತ್ರ ಬರೆದು, ಪಾದ್ರಿ ಮತ್ತು ಅವರ ಕುಟುಂಬಕ್ಕೆ ತಕ್ಷಣರಕ್ಷಣೆ ನೀಡುವಂತೆ ಕೋರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...