Homeಮುಖಪುಟಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ ಸ್ಥಳಾಂತರಗೊಂಡಿದೆ.

ಧೆಂಕನಾಲ್ ಜಿಲ್ಲೆಯ ಪರ್ಜಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂದರ್ಸಿಂಗ ಗ್ರಾಮದಲ್ಲಿ ಜನವರಿ 4 ರಂದು ಪಾದ್ರಿ ಬಿಪಿನ್ ಬಿಹಾರಿ ನಾಯಕ್ ಮೇಲೆ ಹಲ್ಲೆ ನಡೆಸಲಾಯಿತು. ಎಫ್‌ಐಆರ್ ಪ್ರಕಾರ, 15 ರಿಂದ 20 ಜನರ ಗುಂಪು ನಾಯಕ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಮನೆಗೆ ಬಲವಂತವಾಗಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿತು.

ಪಾದ್ರಿಯನ್ನು ಥಳಿಸಿ, ಚಪ್ಪಲಿ ಹಾರ ಹಾಕಿ, ಗ್ರಾಮದಾದ್ಯಂತ ಮೆರವಣಿಗೆ ಮಾಡಿ, ಬಲವಂತವಾಗಿ ಕೊಳಕು ನೀರು ಕುಡಿಸಲಾಯಿತು. ಅವರ ಇಚ್ಛೆಗೆ ವಿರುದ್ಧವಾಗಿ ದೇವಾಲಯದ ಮುಂದೆ ನಮಸ್ಕರಿಸಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾಯಕ್ ಅವರ ಪತ್ನಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಯ ನಂತರ, ನಾಯಕ್ ಅವರು ಅಂಗುಲ್ ಜಿಲ್ಲೆಯ ತಮ್ಮ ಸ್ಥಳೀಯ ಗ್ರಾಮದಲ್ಲಿಯೇ ವಾಸಿಸುತ್ತಿದ್ದಾರೆ. ಅವರು ಮನಗೆಗೆ ಹಿಂತಿರುಗಲು ಹೆದರುತ್ತಿದ್ದಾರೆ. ಒಂದು ವಾರದೊಳಗೆ ಮನೆ ಬಾಡಿಗೆ ಮನೆ ಖಾಲಿ ಮಾಡುವಂತೆ ಮಾಲೀಕರು ಒತ್ತಾಯಿಸಿದ ಬಳಿಕ ತಮ್ಮ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರ ಕುಟುಂಬ ತಿಳಿಸಿದೆ.

“ನನ್ನ ಸಹೋದರ ಎಂಟು ವರ್ಷಗಳ ಕಾಲ ಯಾವುದೇ ಸಮಸ್ಯೆಯಿಲ್ಲದೆ ವಾಸಿಸುತ್ತಿದ್ದ ಮನೆಯಿಂದ ಅದರ ಮಾಲೀಕರು ಹೊರಹೋಗುವಂತೆ ಒತ್ತಡ ಹಾಕುತ್ತಿದ್ದಾರೆ; ಅನಿವಾರ್ಯವಾಗಿ ನಾವು ಅಲ್ಲಿಂದ ಹೊರಟೆವು” ಎಂದು ನಾಯಕ್ ಅವರ ಹಿರಿಯ ಸಹೋದರ ಉದಯನಾಥ್ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಒಬ್ಬರ ಸ್ವಂತ ನಂಬಿಕೆಯನ್ನು ಪಾಲಿಸುವುದು ಪಾಪವೇ? ಈ ದೇಶದಲ್ಲಿ ಅದು ಮೂಲಭೂತ ಹಕ್ಕಲ್ಲವೇ” ಎಂದು ಪ್ರಶ್ನಿಸಿದ ಅವರು, ತನ್ನ ಸಹೋದರನನ್ನು ಗ್ರಾಮಸ್ಥರೊಬ್ಬರು ಅವರ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಲು ಆಹ್ವಾನಿಸಿದ್ದರು, ಬಲವಂತದ ಧಾರ್ಮಿಕ ಮತಾಂತರ ಮಾಡಲು ಅಲ್ಲ ಎಂದು ಜೇಮ್ಸ್ ಆರೋಪಗಳನ್ನು ತಿರಸ್ಕರಿಸಿದರು.

“ಅವರು ಕಳೆದ ಎರಡು ವರ್ಷಗಳಿಂದ ಅಲ್ಲಿಗೆ ಪ್ರಾರ್ಥನೆ ಸಲ್ಲಿಸಲು ಮಾತ್ರ ಹೋಗುತ್ತಿದ್ದಾರೆ. ಈ ಆರೋಪಗಳು ಸುಳ್ಳು ಮತ್ತು ಪ್ರಕರಣವನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಹೇಳಿದರು.

ಘಟನೆಯ ಗಂಭೀರತೆಯ ಹೊರತಾಗಿಯೂ ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂದು ಕುಟುಂಬ ಆರೋಪಿಸಿದೆ. ದೂರಿನ ಪ್ರಕಾರ, ನಾಯಕ್ ಅವರ ಪತ್ನಿ ಹಲ್ಲೆ ನಡೆದ ಅರ್ಧ ಗಂಟೆಯೊಳಗೆ ಪೊಲೀಸ್ ಠಾಣೆಗೆ ತಲುಪಿದರು, ಆದರೆ ಪೊಲೀಸರು ತುರ್ತು ಕ್ರಮ ತೆಗೆದುಕೊಂಡಿಲ್ಲ.

“ಅಪರಾಧದ ಗಂಭೀರತೆಯ ಹೊರತಾಗಿಯೂ, ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪುವ ಹೊತ್ತಿಗೆ, ನನ್ನ ಪತಿ ಈಗಾಗಲೇ ತೀವ್ರ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸಿದ್ದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕುಟುಂಬವು ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ. ಧೆಂಕನಲ್ ಎಸ್‌ಪಿ ಅಭಿನವ್ ಸೋಂಕರ್ ಅವರು ಪರ್ಜಂಗ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್‌ನಿಂದ ವಿವರಣೆ ಕೇಳಿದ್ದೇವೆ ಎಂದು ಹೇಳಿದರು. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು, ಇದುವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ರಾಜಕೀಯ ಪ್ರತಿಕ್ರಿಯೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಹಲ್ಲೆಯನ್ನು ಖಂಡಿಸಿದರು. “ತೀವ್ರ ಅಮಾನವೀಯ ಕೃತ್ಯ” ಎಂದು ಕರೆದು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅಸಹಿಷ್ಣುತೆಯ ವಾತಾವರಣವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕೂಡ ದಾಳಿಯನ್ನು ಖಂಡಿಸಿದರು. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ, ಹೊಣೆಗಾರರಾದವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ಪತ್ರ ಬರೆದು, ಪಾದ್ರಿ ಮತ್ತು ಅವರ ಕುಟುಂಬಕ್ಕೆ ತಕ್ಷಣರಕ್ಷಣೆ ನೀಡುವಂತೆ ಕೋರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...