Homeಮುಖಪುಟಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ...

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

- Advertisement -
- Advertisement -

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್, ಸಿಬಿಐ ಮತ್ತು 7 ಖಾಸಗಿ ಬ್ಯಾಂಕ್‌ಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಇದು ಬಹುಶಃ ದೇಶದ ಅತಿದೊಡ್ಡ ವೈಯಕ್ತಿಕ ಡಿಜಿಟಲ್ ವಂಚನೆ ಪ್ರಕರಣ ಎನ್ನಲಾಗ್ತಿದೆ. ಹಣ ಕಳೆದುಕೊಂಡ ವ್ಯಕ್ತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಸುಪ್ರೀಂ ಕೋರ್ಟ್, ಸರ್ಕಾರ ಮತ್ತು ಇತರ ಪಕ್ಷಕಾರರಿಗೆ ನೋಟಿಸ್ ಜಾರಿ ನೀಡಿದೆ.

ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಕೆ. ಪರಮೇಶ್ವರ್ ಅವರು, ಅರ್ಜಿದಾರರ ಮಕ್ಕಳು ವಿದೇಶದಲ್ಲಿದ್ದಾಗ ಈ ಘಟನೆ ನಡೆದಿದೆ. ಇದು ಸಂಬಂಧಪಟ್ಟ ಬ್ಯಾಂಕುಗಳ ‘ತೀವ್ರ ನಿರ್ಲಕ್ಷ್ಯ’ದ ಪ್ರಕರಣವಾಗಿದೆ. ಅರ್ಜಿದಾರರು ಬ್ಯಾಂಕುಗಳ ವಿರುದ್ಧ ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗವನ್ನು ಸಂಪರ್ಕಿಸುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಬ್ಯಾಂಕುಗಳು ಕೂಡ ಕೆಲವು ಕರ್ತವ್ಯಗಳನ್ನು ನಿರ್ವಹಿಸಬೇಕಾಗಿದೆ, ಅವರು (ಅರ್ಜಿದಾರರು) ವೀಲ್‌ಚೇರ್‌ನಲ್ಲಿ ಓಡಾಡುವವರು. ಅವರಿಗೆ ಸುಮಾರು 82 ವರ್ಷ ವಯಸ್ಸಾಗಿದೆ. ಇಷ್ಟು ದೊಡ್ಡ ವಹಿವಾಟು ಪತ್ತೆಯಾದಾಗ ಬ್ಯಾಂಕುಗಳು ಕೂಡ ಜಾಗರೂಕತೆಯನ್ನು ತೋರಿಸಬೇಕು ಎಂದು” ಅರ್ಜಿದಾರರ ಪರ ವಕೀಲ ವಾದಿಸಿದ್ದಾರೆ.

ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಸೈಬರ್ ವಂಚಕರು ಬಳಸುವ ಮ್ಯೂಲ್ ಖಾತೆಗಳನ್ನು (ವಂಚನೆಯ ಹಣ ವರ್ಗಾಯಿಸಲು ಬಳಸುವ ಖಾತೆ) ಗುರುತಿಸಲು ನಿರ್ದೇಶನಗಳನ್ನು ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ನ್ಯಾಯಾಲಯವು ಅರ್ಜಿದಾರರು ಗ್ರಾಹಕರ ಪರಿಹಾರ ಆಯೋಗದ ಮೊರೆ ಹೋಗಲು ಅವಕಾಶ ನೀಡಿದೆ.

ತಾನು ಕಳೆದುಕೊಂಡ ಹಣವನ್ನು ವಂಚಕರಿಂದ ಮರಳಿ ಪಡೆದು ಅದನ್ನು ಒಂದು ಎಸ್ಕ್ರೋ ಖಾತೆಗೆ ಅಂದರೆ, ಒಂದು ಸುರಕ್ಷಿತ, ತಾತ್ಕಾಲಿಕ ಖಾತೆ ಅಥವಾ ನ್ಯಾಯಾಲಯದ ನಿಯಂತ್ರಣದಲ್ಲಿರುವ ಖಾತೆಗೆ ಜಮೆ ಮಾಡಬೇಕು. ಬಳಿಕ ಅದನ್ನು ತನಗೆ ಬಿಡುಗಡೆ ಮಾಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಕೋರಿದ್ದಾರೆ. ಕೋಟಕ್ ಮಹೀಂದ್ರಾ ಬ್ಯಾಂಕ್, ಹೆಚ್‌ಡಿಎಫ್‌ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಇಂಡಸ್‌ಲ್ಯಾಂಡ್‌ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್ ಮತ್ತು ಯೆಸ್‌ ಬ್ಯಾಂಕ್‌ಗಳನ್ನು ಪ್ರತಿವಾದಿಗಳಾಗಿ ಉಲ್ಲೇಖಿಸಿದ್ದಾರೆ.

ರಿಟ್‌ ಅರ್ಜಿ ಪ್ರಕಾರ, ಅರ್ಜಿದಾರ 82 ವರ್ಷದ ಹಿರಿಯ ನಾಗರಿಕರಾಗಿದ್ದು, ಅವರು ಮನೆಯಲ್ಲಿ ಒಂಟಿಯಾಗಿದ್ದಾಗ ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿದ ಸೈಬರ್ ವಂಚಕರು, ಸುಪ್ರೀಂ ಕೋರ್ಟ್‌ ನೀಡಿದೆ ಎಂದು ನಕಲಿ ಆದೇಶಗಳನ್ನು ವಾಟ್ಸಾಪ್ ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಹಂಚಿಕೊಂಡು ಬ್ಯಾಂಕ್ ಖಾತೆಯಿಂದ ಹಣ ದೋಚಿದ್ದಾರೆ.

ನನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬೆದರಿಸಿ, ನಕಲಿ ನ್ಯಾಯಾಂಗದ ದಾಖಲೆಗಳನ್ನು ತೋರಿಸಿ ನನ್ನ ಜೀವಮಾನದ ಸಂಪೂರ್ಣ ಉಳಿತಾಯವನ್ನು ವಂಚಕರು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಅರ್ಜಿದಾರ ನ್ಯಾಯಾಲಯದ ಮುಂದೆ ಅಳಲು ತೋಡಿಕೊಂಡಿದ್ದಾರೆ ಎಂದು ಲೈವ್‌ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...