Homeಅಂತರಾಷ್ಟ್ರೀಯಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

- Advertisement -
- Advertisement -

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ ಸಮನ್ಸ್‌ಗಳನ್ನು ಅಧಿಕೃತವಾಗಿ ಅದಾನಿ ಅವರಿಗೆ ತಲುಪಿಸಲು ಎರಡು ಬಾರಿ ನಿರಾಕರಿಸಿದೆ ಎಂದು ವರದಿಯಾಗಿದೆ.

ಸಮನ್ಸ್‌ಗಳಲ್ಲಿ ತಾಂತ್ರಿಕ ದೋಷಗಳಿದ್ದವು. ಅಂದರೆ, ಅದರ ಮೇಲೆ ಅಗತ್ಯವಾದ ಅಧಿಕೃತ ಸೀಲ್ ಮತ್ತು ಇಂಕ್ ಸಹಿ ಮುಂತಾದವು ಸರಿಯಾಗಿ ಇರಲಿಲ್ಲ ಎಂದು ಸರ್ಕಾರ ಜಾರಿಕೊಂಡಿದೆ ಎಂದು ವರದಿ ಹೇಳಿದೆ.

ವರದಿಗಳ ಪ್ರಕಾರ, ಕಳೆದ ವರ್ಷ (2025ರಲ್ಲಿ) ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಎಸ್‌ಇಸಿ ಕಳುಹಿಸಿದ ಕವರ್ ಲೆಟರ್‌ನಲ್ಲಿ ಇಂಕ್ ಸಹಿ, ಅಗತ್ಯ ಫಾರ್ಮ್‌ಗಳ ಮೇಲೆ ಅಧಿಕೃತ ಸೀಲ್ ಇಲ್ಲದಿರುವುದನ್ನು ಮತ್ತು ಸಮನ್ಸ್ ತಲುಪಿಸುವ ವಿಧಾನಕ್ಕೆ ಸಂಬಂಧಿಸಿದ ಪ್ರಕ್ರಿಯಾ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಎರಡು ಬಾರಿ ಸಮನ್ಸ್‌ಗಳನ್ನು ಅಧಿಕೃತವಾಗಿ ಅದಾನಿಗೆ ನೀಡಲು ನಿರಾಕರಿಸಿದೆ.

ಎರಡು ಭಾರತ ಸರ್ಕಾರ ಸಮನ್ಸ್ ತಲುಪಿಸಲು ನಿರಾಕರಿಸಿದ ಕಾರಣ ಎಸ್‌ಇಸಿಗೆ ಹೇಗ್ ಕನ್ವೆನ್ಷನ್ ಮೂಲಕ ಸಮನ್ಸ್ ತಲುಪಿಸುವುದು ಕಷ್ಟವಾಗಿದೆ. ಇದರಿಂದಾಗಿ ಅದು ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್ ಫೆಡರಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸಾಮಾನ್ಯ ಪ್ರಕ್ರಿಯೆಯನ್ನು ಬಿಟ್ಟು ಬೇರೆ ಮಾರ್ಗದ ಮೂಲಕ (ಇ-ಮೇಲ್ ಮೂಲಕ) ಸಮನ್ಸ್ ತಲುಪಿಸಲು ಅನುಮತಿ ಕೇಳಿದೆ.

ಹೇಗ್ ಕನ್ವೆನ್ಷನ್‌ನಲ್ಲಿ ಸೀಲ್ ಮತ್ತು ಅಥವಾ ಇಂಕ್ ಸಹಿ ಕಡ್ಡಾಯವಲ್ಲ ಎಂದು ಎಸ್‌ಇಸಿ ವಾದಿಸಿದರೂ, 2025ರ ಮೇ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಕಾನೂನು ಮತ್ತು ನ್ಯಾಯ ಸಚಿವಾಲಯವು ಸಮನ್ಸ್ ತಲುಪಿಸಲು ನಿರಾಕರಿಸಿದೆ.

ಡಿಸೆಂಬರ್‌ನಲ್ಲಿ ತಿರಸ್ಕರಿಸುವಾಗ ಕೇಂದ್ರ ಸಚಿವಾಲಯ ಅಮೆರಿಕದ ಕಾನೂನನ್ನೇ ಉಲ್ಲೇಖಿಸಿ, ಈ ಸಮನ್ಸ್‌ಗಳು ಅನುಮತಿಸಲಾದ ವರ್ಗಗಳಲ್ಲಿ ಬರುವುದಿಲ್ಲ ಎಂದಿದೆ. ಅಂದರೆ, ಇದು ಹೇಗ್ ಕನ್ವೆನ್ಷನ್ ಅಡಿಯಲ್ಲಿ ಸಹಾಯ ಮಾಡಬಹುದಾದ ರೀತಿಯ ದಾಖಲೆಯಲ್ಲ ಎಂದು ವಾದಿಸಿತ್ತು.

ಸಚಿವಾಲಯದ ವಾದಕ್ಕೆ ಹೇಗ್ ಕನ್ವೆನ್ಷನ್ ಅಡಿಯಲ್ಲಿ ಯಾವುದೇ ಆಧಾರವಿಲ್ಲ ಎಂದು ಎಸ್‌ಇಸಿ ಹೇಳಿತ್ತು. ಅಂದರೆ, ಅಂತಾರಾಷ್ಟ್ರೀಯ ಸಮನ್ಸ್ ನೀಡುವುದಕ್ಕೆ ಸಂಬಂಧಿಸಿದ ಹೇಗ್ ಕನ್ವೆನ್ಷನ್ ನಿಯಮಗಳು ಇಂತಹ ತಾಂತ್ರಿಕ ಅಗತ್ಯಗಳನ್ನು (ಇಂಕ್ ಸಹಿ ಅಥವಾ ಅಧಿಕೃತ ಸೀಲ್) ಕಡ್ಡಾಯಗೊಳಿಸುವುದಿಲ್ಲ ಎಂದಿತ್ತು. ಆದರೂ, ಭಾರತ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಲ್ಲ ಎನ್ನಲಾಗಿದೆ.

ಭಾರತ ಸರ್ಕಾರದ ಎರಡು ನಿರಾಕರಣೆಯ ಬಳಿಕ ಎಸ್‌ಇಸಿ ನ್ಯೂಯಾರ್ಕ್ ಕೋರ್ಟ್‌ಗೆ ಅರ್ಜಿ ಹಾಕಿ ಇಮೇಲ್ ಮೂಲಕ ಸಮನ್ಸ್ ತಲುಪಿಸಲು ಅನುಮತಿ ಕೇಳಿದೆ. ಈ ಸುದ್ದಿ ಹೊರಬಿದ್ದ ನಂತರ ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿವೆ. ವಿವಿಧ ಕಂಪನಿಗಳ ಷೇರುಗಳು 3.3% ರಿಂದ 14.6% ವರೆಗೆ ಕುಸಿದಿವೆ. ಒಟ್ಟಾರೆಯಾಗಿ ಅದಾನಿ ಗ್ರೂಪ್ ಕಂಪನಿಗಳ ಮಾರ್ಕೆಟ್ ಕ್ಯಾಪ್ ಸುಮಾರು 12.5 ಬಿಲಿಯನ್ ಡಾಲರ್ (ಅಂದಾಜು 1 ಲಕ್ಷ ಕೋಟಿ ರೂ.) ಕಳೆದುಕೊಂಡಿದೆ. ಉದಾಹರಣೆಗೆ : ಅದಾನಿ ಎಂಟರ್‌ಪ್ರೈಸಸ್, ಅದಾನಿ ಎನರ್ಜಿ ಸೊಲ್ಯೂಷನ್ಸ್ ಮುಂತಾದವು ಹೆಚ್ಚು ಇಳಿಕೆ ಕಂಡಿವೆ (10-14% ವರೆಗೆ).

ಎಸ್‌ಇಸಿಯ ಆರೋಪಗಳನ್ನು ಅದಾನಿ ಗ್ರೂಪ್ ತಳ್ಳಿ ಹಾಕಿದೆ. ಅವುಗಳನ್ನು ಆಧಾರರಹಿತ ಎಂದು ಕರೆದಿದೆ. ಎಸ್‌ಇಸಿಯ ಆರೋಪಗಳನ್ನು ಎದುರಿಸಲು ಎಲ್ಲಾ ಸಾಧ್ಯವಾದ ಕಾನೂನು ಮಾರ್ಗಗಳನ್ನು ಬಳಸುವುದಾಗಿ ಹೇಳಿದೆ. ವಿಶೇಷವಾಗಿ ಅದಾನಿ ಗ್ರೀನ್ ಎನರ್ಜಿ ಕಂಪನಿಯು ಸ್ಟಾಕ್ ಎಕ್ಸ್‌ಚೇಂಜ್‌ಗೆ ದಾಖಲೆ ಸಲ್ಲಿಸಿ, ಕಂಪನಿಯು ಈ ಎಸ್‌ಇಸಿ ಪ್ರಕರಣದ ಯಾವುದೇ ಪಕ್ಷವಲ್ಲ, ಇದು ಸಿವಿಲ್ ಪ್ರಕರಣ ಮಾತ್ರ, ಅಂದರೆ ಕ್ರಿಮಿನಲ್ ಅಲ್ಲ ಮತ್ತು ಆರೋಪಿಗಳ ವಿರುದ್ಧ ಲಂಚ ಅಥವಾ ಭ್ರಷ್ಟಾಚಾರದ ಆರೋಪಗಳಿಲ್ಲ ಎಂದು ತಿಳಿಸಿದೆ.

ಈ ಸಮನ್ಸ್‌ಗಳು ಅದಾನಿ ಗ್ರೂಪ್ ವಿರುದ್ದದ ವಂಚನೆ ಮತ್ತು 265 ಮಿಲಿಯನ್ ಡಾಲರ್ (ಸುಮಾರು 2,200 ಕೋಟಿ ರೂ.) ಲಂಚದ ಪ್ರಕರಣಕ್ಕೆ ಸಂಬಂಧಿಸಿದೆ. ವಂಚನೆ ಮತ್ತು ಲಂಚದ ಆರೋಪಗಳನ್ನು ಮಾಡಿ ಎಸ್‌ಇಸಿಯು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಸಿವಿಲ್ ಕೇಸ್ ದಾಖಲಿಸಿದೆ. ಅಮೆರಿಕದ ಕಾನೂನಿನ ಪ್ರಕಾರ, ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ವೈಯಕ್ತಿಕವಾಗಿ ಸಮನ್ಸ್ ತಲುಪಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ : ಗಣರಾಜ್ಯೋತ್ಸವ ದಿನ ಮಾಂಸ, ಮೊಟ್ಟೆ, ಮೀನು ಮಾರಾಟ ನಿಷೇಧಿಸಿದ ಜಿಲ್ಲಾಡಳಿತ!

ಗಣರಾಜ್ಯೋತ್ಸವದಂದು ಜಿಲ್ಲೆಯಾದ್ಯಂತ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜನವರಿ 26, ಗಣರಾಜ್ಯೋತ್ಸವದಂದು ಮಾಂಸ, ಕೋಳಿ, ಮೊಟ್ಟೆ, ಮೀನು ಮತ್ತು ಇತರ ಮಾಂಸಾಹಾರಿ ವಸ್ತುಗಳ...

ಮೋದಿ ಸ್ವಾಗತಿಸುವ ಫ್ಲೆಕ್ಸ್ ಬೋರ್ಡ್‌; ದಂಡ ವಿಧಿಸಿದ ಬಿಜೆಪಿ ಆಡಳಿತದ ತಿರುವನಂತಪುರಂ ಮಹಾನಗರ ಪಾಲಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದಂತೆ ನಗರದಲ್ಲಿನ ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ಆಡಳಿತವಿರುವ ತಿರುವನಂತಪುರಂ ಮಹಾನಗರ ಪಾಲಿಕೆ ತನ್ನದೇ ಪಕ್ಷಕ್ಕೆ ದಂಡ ವಿಧಿಸಿದೆ. ಪೊಲೀಸ್ ಠಾಣೆಯಲ್ಲಿ ದೂರು...

ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಸಾಮಾಜಿಕ ಮಾಧ್ಯಮ ನಿಯಂತ್ರಣ ಅಗತ್ಯ: ಕೈಲಾಶ್‌ ಸತ್ಯಾರ್ಥಿ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅಪ್ರಾಪ್ತರಿಗೆ ಸಾಮಾಜಿಕ ಮಾಧ್ಯಮದ ನಿಯಂತ್ರಣ ನಿರ್ಧಾರವನ್ನು ಬೆಂಬಲಿಸಿದ್ದಾರೆ. 'ಇದರ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು, ಸಕಾರಾತ್ಮಕವಾಗಿ ನೈತಿಕ ಮೌಲ್ಯಗಳನ್ನು ಹರಡಲು ಮತ್ತು ಸಮುದಾಯಗಳನ್ನು...

ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ

ನ್ಯೂಸ್ ಲಾಂಡ್ರಿ ವ್ಯವಸ್ಥಾಪಕ ಸಂಪಾದಕಿ ಮನೀಷಾ ಪಾಂಡೆ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ, ಕೋರ್ಟ್‌ನ ಮೌಖಿಕ ಅವಲೋಕನಗಳ ಕುರಿತು ಕೆಲ ಮಾಧ್ಯಮಗಳ ವರದಿ ಮಾಡಿದ ರೀತಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅಸಮಾಧಾನ...

ಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ ಆರೋಪ

ಪ್ರತ್ಯೇಕ ರಾಜ್ಯಗಳಲ್ಲಿ ಇಬ್ಬರು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ದೇಶದಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರ ವಿರುದ್ದ ಹೆಚ್ಚುತ್ತಿರುವ ಹಿಂಸಾಚಾರದ ಭಾಗವಾಗಿ ಇಬ್ಬರನ್ನೂ ಕೊಲ್ಲಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿವೆ. ಆಂಧ್ರ ಪ್ರದೇಶದ...

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್...

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ...

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ...

ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

ಕನ್ನಡ ಮುಖ್ಯವಾಹಿನಿ ಸಿನೆಮಾ ಅಪರೂಪಕ್ಕೊಮ್ಮೆ ಮಾತ್ರ ಸಮಾಜದ ಮೂಲಭೂತ ಪ್ರಶ್ನೆಗಳತ್ತ ನೇರವಾಗಿ ಮುಖ ಮಾಡುತ್ತದೆ. ಜಾತಿ, ಭೂಮಿ, ಅಧಿಕಾರ ಎಲ್ಲವನ್ನು ಒಟ್ಟಿಗೆ ಹಿಡಿದು ಪ್ರಶ್ನಿಸುವ ಚಿತ್ರಗಳು ಇನ್ನೂ ವಿರಳ. ನಿರ್ದೇಶಕ–ಕಥಾಲೇಖಕ ಜಡೆಶ್ ಕೆ....

ಕುಡುಪು ಗುಂಪು ಹತ್ಯೆ : ಮತ್ತೊಬ್ಬ ಆರೋಪಿಗೆ ಜಾಮೀನು

ಮಂಗಳೂರು ಹೊರವಲಯದ ಕುಡುಪು ಬಳಿ 2025ರ ಏಪ್ರಿಲ್ 27ರಂದು ನಡೆದ ಕೇರಳ ಮೂಲದ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಆರೋಪಿ ನಟೇಶ್ ಕುಮಾರ್‌ಗೆ ಹೈಕೋರ್ಟ್ ಶುಕ್ರವಾರ (ಜ.23) ಜಾಮೀನು ಮಂಜೂರು...