Homeಮುಖಪುಟಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

- Advertisement -
- Advertisement -

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

2025ರ ಅಕ್ಟೋಬರ್ 16ರಂದು ಗೋವಾದಿಂದ ಕರ್ನಾಟಕ ಮಾರ್ಗವಾಗಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಅಪಹರಿಸಿ ಹಣ ದರೋಡೆ ಮಾಡಲಾಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದು ಭಾರತ ದೇಶದ ಇತಿಹಾಸದಲ್ಲೇ ಅತಿದೊಡ್ಡ ಕಂಟೇನರ್ ದರೋಡೆ ಎಂದು ಹೇಳಲಾಗ್ತಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ತನಿಖೆಗೆ ವಿಶೇಷ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, ಕರ್ನಾಟಕ–ಮಹಾರಾಷ್ಟ್ರ–ಗೋವಾ ರಾಜ್ಯಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಭಾನುವಾರ (ಜ.25, 2026) ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಸಂದೀಪ್ ದತ್ತ ಪಾಟೀಲ್ ಎಂಬಾತನನ್ನು 2025ರ ಅಕ್ಟೋಬರ್ 22ರಂದು ಐವರು ಅಪಹರಿಸಿದ್ದರು. ಆ ಐದು ಮಂದಿಯನ್ನು ಬಂಧಿಸಲಾಗಿದೆ. ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ, “ನನ್ನನ್ನು 2025ರ ಅಕ್ಟೋಬರ್ 22ರಂದು ಫಾರ್ಚೂನರ್ ಕಾರಿನಲ್ಲಿ ಅಪಹರಿಸಿದ್ದರು. ಅಕ್ಟೋಬರ್ 16ನೇ ತಾರೀಖು ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆಯಾಗಿದೆ. ಅದರಲ್ಲಿ ನೀನು ಭಾಗಿಯಾಗಿದ್ದೀಯಾ.. ನೀನು 400 ಕೋಟಿ ರೂ. ಕೊಡಬೇಕು ಎಂದು ಒತ್ತಾಯಿಸಿ ಥಳಿಸಿದ್ದಾರೆ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಈ ಮಾಹಿತಿಯನ್ನು ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜನವರಿ 6ರಂದು ಪತ್ರ ಬರೆದು ನಮಗೆ ತಿಳಿಸಿದ್ದರು. ನಮಗೆ ಪತ್ರ ತಲುಪಿದ ಬಳಿಕ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಬಿರಾದರ್ ಅವರ ನೇತೃತ್ವದಲ್ಲಿ ಖಾನಾಪುರ ಮತ್ತು ನಂದಗಡ ಪೊಲೀಸ್ ಠಾಣೆಗಳ ಮೂವರು ಮರಾಠಿ ಗೊತ್ತಿರುವ ಸಿಬ್ಬಂದಿಯನ್ನು ತಂಡ ಮಾಡಿ ನಾಸಿಕ್‌ಗೆ ಕಳಿಸಿದ್ದೆವು ಎಂದು ವಿವರಿಸಿದ್ದಾರೆ.

ಮುಂದುವರಿದು, ಸಬ್‌ ಇನ್ಪೆಕ್ಟರ್ ಬಿರಾದರ್ ಅವರ ತಂಡ ನಾಸಿಕ್‌ಗೆ ಹೋಗಿ ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವೇಳೆ ಅವರು ತಾನು ಯಾವುದೇ ದರೋಡೆ ಘಟನೆ ನೋಡಿಲ್ಲ. ಆದರೆ, ನನ್ನನ್ನು ಅಪಹರಿಸಿ ಥಳಿಸಿದವರು, ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆ ನಡೆದಿದೆ ಎಂದು ಹೇಳುತ್ತಿದ್ದರು ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಬಿಎನ್‌ಎಸ್‌ ಕಾಯ್ದೆಯ ಸೆಕ್ಷನ್ 198 ಪ್ರಕಾರ ಒಂದು ಅಪರಾಧ ಘಟನೆ ಒಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡು ಇನ್ನೊಂದು ಠಾಣೆಯ ವ್ಯಾಪ್ತಿಯಲ್ಲಿ ಕೊನೆಯಾದರೆ, ಆ ಎರಡು ಠಾಣೆಗಳ ನಡುವೆ ಬರುವ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಅವಕಾಶ ಇದೆ ಎಂದಿದ್ದಾರೆ.

ಈ ದರೋಡೆ ಮತ್ತು ಅಪಹರಣ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಎಸ್‌ಐಟಿ ರಚನೆಯಾಗಿದೆ. ಈ ಅಪರಾಧ ಮಹಾರಾಷ್ಟ್ರದಲ್ಲಿ ಪ್ರಾರಂಭಗೊಂಡು ಅಲ್ಲಿಯೇ ಕೊನೆಯಾಗಿದ್ದರೆ ಅಲ್ಲಿನ ಎಸ್‌ಐಟಿ ಸಂಪೂರ್ಣ ತನಿಖೆ ಮಾಡಲಿದೆ. ಒಂದು ವೇಳೆ ಅಪರಾಧ ಬೆಳಗಾವಿಯ ವ್ಯಾಪ್ತಿಯಲ್ಲಿ ನಡೆದಿದ್ದರೆ, ಮಹಾರಾಷ್ಟ್ರ ಪೊಲೀಸರು ಆ ಬಗ್ಗೆ ಮಾಹಿತಿ ಕೊಟ್ಟರೆ ನಾವು ಇಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಮಾಡುತ್ತೇವೆ. ಅದಕ್ಕಾಗಿ ನಮ್ಮ ಪೊಲೀಸ್ ತಂಡ ಮಹಾರಾಷ್ಟ್ರದಲ್ಲಿ ಕಾಯುತ್ತಿದೆ. ಅಪರಾಧ ಬೆಳಗಾವಿ ವ್ಯಾಪ್ತಿಯಲ್ಲಿ ನಡೆದಿರುವ ಮಾಹಿತಿ ಸಿಕ್ಕರೆ ನಾವು ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳುತ್ತೇವೆ ಎಂದು ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾಸಿಕ್ ಎಸ್ಪಿಯ ಪತ್ರ ಬರೆದಿರುವುದು ಬಿಟ್ಟರೆ ಅವರು ಈ ಪ್ರಕರಣ ಸಂಬಂಧ ನಮ್ಮ ಬಳಿ ಯಾವುದೇ ಚರ್ಚೆ ನಡೆಸಿಲ್ಲ, ಮಾಹಿತಿ ಹಂಚಿಕೊಂಡಿಲ್ಲ. ಈಗಾಗಾಲೇ ಸಬ್‌ ಇಸ್ಪೆಕ್ಟರ್ ನೇತೃತ್ವದ ನಮ್ಮ ಪೊಲೀಸ್ ತಂಡ ನಾಸಿಕ್‌ನಲ್ಲಿದೆ. ಇನ್ನೂ ಹಿರಿಯ ಅಧಿಕಾರಿಯನ್ನು ಕಳಿಸಿಕೊಡಬೇಕು ಎಂದರೆ ನಾವು ಕಳಿಸಿಕೊಡುತ್ತೇವೆ ಎಂದು ಹೇಳಿದ್ದಾರೆ.

400 ಕೋಟಿ ದರೋಡೆ ನಡೆದಿರುವುದು ನಿಜವೇ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ಅದನ್ನು ನೋಡಿದವರೂ ಇಲ್ಲ. ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಸಂದೀಪ್ ದತ್ತ ಪಾಟೀಲ್ ಕೊಟ್ಟಿರುವ ಹೇಳಿಕೆ ಆಧರಿಸಿ ಈ ದರೋಡೆಯ ಕುರಿತು ಚರ್ಚೆಯಾಗುತ್ತಿದೆ. ಘಟನೆ ನಡೆದ ಸ್ಥಳದ ಬಗ್ಗೆಯೂ ಖಚಿತ ಮಾಹಿತಿ ಇಲ್ಲ. ಮಹಾರಾಷ್ಟ್ರ ಪೊಲೀಸರು ಮಾಹಿತಿ ಕೊಟ್ಟರೆ ನಾವು ಮುಂದಿನ ತನಿಖೆ ಮಾಡುತ್ತೇವೆ ಎಂದು ಬೆಳಗಾವಿ ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...