Homeಕರ್ನಾಟಕಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

ಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

- Advertisement -
- Advertisement -

ಜ್ಯೋತಿಷ್ಯವ್ಯಾದಿಗಳ ಅರಚುವಿಕೆಯ ನಡುವೆಯೂ ಮನೆಯಿಂದ ಹೊರಬಂದ ಸಾವಿರಾರು ಮಂದಿ ಜನರು ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನ ಆಟವನ್ನು ವೀಕ್ಷಿಸಿ ಆನಂದಪಟ್ಟರು. ತುಮಕೂರಿನ ಬಹುತೇಕ ಭಾಗಗಳಲ್ಲಿ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು. ಮಕ್ಕಳು, ವಿದ್ಯಾರ್ಥಿಗಳು, ಪೊಲೀಸರು, ಪೌರಕಾರ್ಮಿಕರು, ಆಟೋಚಾಲಕರು, ವೃದ್ಧರು ಹೀಗೆ ಎಲ್ಲಾ ಜನವಿಭಾಗದವರು ಕಂಕಣ ಸೂರ್ಯಗ್ರಹಣ ವೀಕ್ಷಿಸಿ ಪುರಿ, ತಿಂಡಿ ತಿಂದು ಕಾಫಿ ಕುಡಿದು ಮೌಢ್ಯದಿಂದ ಹೊರಬರುವಂತೆ ಎಲ್ಲರಿಗೂ ಮನವಿ ಮಾಡಿದರು.

ಬ್ರಾಹ್ಮಣರು ವಾಸಿಸುವ ಚಿಕ್ಕಪೇಟೆ, ಸೋಮೇಶ್ವರ ಹೀಗೆ ಹಲವು ಭಾಗಗಳಲ್ಲಿ ಜನ ಮನೆಯಿಂದಲೂ ಹೊರಗೆ ಬರಲು ಹೆದರಿಕೊಂಡಂತೆ ಕಂಡುಬಂತು. ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸನಾತನವಾದಿಗಳು ಗ್ರಹಣ ಬಿಡುವವರೆಗೂ ಏನೂ ತಿನ್ನದೆ ಮೌಢ್ಯವನ್ನು ಆಚರಿಸಿದರು. ಗ್ರಹಣ ಬಿಟ್ಟಮೇಲೆ ಸ್ನಾನ ಮಾಡಿದರು. ಆದರೆ ವಿಜ್ಞಾನ ಕೇಂದ್ರದ ಪದಾಧಿಕಾರಿಗಳನ್ನು ಇಂತಹ ಮೌಢ್ಯದಿಂದ ಹೊರಬರುವಂತೆ ಮನವಿ ಮಾಡಿಕೊಂಡರು. ಹೀಗಾಗಿ ಕೆಲಮಟ್ಟಿಗೆ ಜನರು ಸುರಕ್ಷಿತ ಸಾಧನಗಳಿಂದ ಸೂರ್ಯಗ್ರಹಣ ವೀಕ್ಷಿಸಿದರು. ಪದಾಧಿಕಾರಿಗಳು ಕೂಡ ಸೂರ್ಯಗ್ರಹಣ ವೀಕ್ಷಿಸುವುದರಿಂದ ಯಾವುದೇ ಅಪಾಯವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿದರು.

ವಿಜ್ಞಾನ ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಗಳ ಮೂಲಕ ಕಂಕಣ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಿದ್ದರು. ಹಿರೀಮಠದ ಡಾ.ಶಿವಾನಂದಶಿವಾಚಾರ್ಯ ಸ್ವಾಮಿ, ಮಹಿಳಾ ಪೊಲೀಸ್ ಅಧಿಕಾರಿಗಳು ಬಂದು ಸೂರ್ಯಗ್ರಹಣ ವೀಕ್ಷಿಸಿದರು.  ವಿಜ್ಞಾನ ಕೇಂದ್ರದ ಸಿ.ವಿಶ್ವನಾಥ್, ಸಿ.ಯತಿರಾಜ್, ಮಾಮ ರವಿ, ನಿತ್ಯಾನಂದ, ಸಾರ್ವಜನಿಕರಿಗೆ ವೈಚಾರಿಕ, ವೈಜ್ಞಾನಿಕವಾಗಿ ಸೂರ್ಯಗ್ರಹಣದ ಬಗ್ಗೆ ವಿವರಿಸಿ ಹೇಳಿದರು. ಪರಿಸರವಾದಿ ಸಿ.ಯತಿರಾಜು ಮಾತನಾಡಿ ಕೆಲವರು ಟಿವಿಗಳಲ್ಲಿ ಕುಳಿತು ಜನರಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಜನರು ಹೊರಬಂದು ಸೂರ್ಯಗ್ರಹಣ ವೀಕ್ಷಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಸೈಯದ್ ಮುಜೀಬ್ ಅವರು ಸೋಲಾರ್ ಫಿಲ್ಟರ್ ಗಳನ್ನು ಹಿಡಿದರು. ಆಟೋ ರಿಕ್ಷಾ ಚಾಲಕರು, ವೃದ್ದೆಯರು, ಪೌರಕಾರ್ಮಿಕರು, ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಿಸಲು ಮತ್ತು ವೈಜ್ಞಾನಿಕತೆಯನ್ನು ಹರಡಲು ಅವಕಾಶ ಮಾಡಿಕೊಟ್ಟರು. ರಾಮಾಜೋಯಿಸ್ ನಗರದಲ್ಲಿ ಆನಂದ್ ಅವರು ಮಕ್ಕಳಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ ಅಕ್ಕಮ್ಮ ಎಲ್ಲಾ ಸಾವಿರ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ವೀಕ್ಷಿಸಲು ಅನುಕೂಲ ಮಾಡಿಕೊಟ್ಟರು.

ಇಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಂಡಿತು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಂಡಿತು. ಮತ್ತೊಮ್ಮೆ ಇಂತಹ ಗ್ರಹಣ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ರವಿಶಂಕರ್ ತಿಳಿಸಿದರು.

ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಾಹನಗಳ ಓಡಾಟ ವಿರಳವಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಗಿನ ಚಹ, ಕಾಫಿ ಹೀರಲು ತುಂಬಿರುತ್ತಿದ್ದ ಹೋಟೆಲ್, ಕೆಫೆಗಳು ಖಾಲಿ ಖಾಲಿ ಇದ್ದುದು ಕಂಡು ಬಂತು. ಟಿವಿಯಲ್ಲಿ ಕುಳಿತ ಜ್ಯೋತಿಷಗಳು ಬ್ರಹ್ಮಾಂಡ ಮೌಢ್ಯ ಬಿತ್ತುವುದರಲ್ಲಿ ತೊಡಗಿದ್ದರು. ಆದರೆ ಲಕ್ಷಾಂತರವಲ್ಲದಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನ ಮನೆಗಳಿಂದ ಹೊರಬಂದಿದ್ದರು. ವಾಹನಗಳ ಚಾಲಕರು ಗ್ರಹಣವನ್ನು ನಂಬಿರಲಿಲ್ಲ. ಆದರೆ ನಗರವಾಸಿಗಳಲ್ಲೇ ಮೌಢ್ಯ ಹೆಚ್ಚಾಗಿರುವುದಂತು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...