Homeಕರ್ನಾಟಕಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

ಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

- Advertisement -
- Advertisement -

ಜ್ಯೋತಿಷ್ಯವ್ಯಾದಿಗಳ ಅರಚುವಿಕೆಯ ನಡುವೆಯೂ ಮನೆಯಿಂದ ಹೊರಬಂದ ಸಾವಿರಾರು ಮಂದಿ ಜನರು ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನ ಆಟವನ್ನು ವೀಕ್ಷಿಸಿ ಆನಂದಪಟ್ಟರು. ತುಮಕೂರಿನ ಬಹುತೇಕ ಭಾಗಗಳಲ್ಲಿ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು. ಮಕ್ಕಳು, ವಿದ್ಯಾರ್ಥಿಗಳು, ಪೊಲೀಸರು, ಪೌರಕಾರ್ಮಿಕರು, ಆಟೋಚಾಲಕರು, ವೃದ್ಧರು ಹೀಗೆ ಎಲ್ಲಾ ಜನವಿಭಾಗದವರು ಕಂಕಣ ಸೂರ್ಯಗ್ರಹಣ ವೀಕ್ಷಿಸಿ ಪುರಿ, ತಿಂಡಿ ತಿಂದು ಕಾಫಿ ಕುಡಿದು ಮೌಢ್ಯದಿಂದ ಹೊರಬರುವಂತೆ ಎಲ್ಲರಿಗೂ ಮನವಿ ಮಾಡಿದರು.

ಬ್ರಾಹ್ಮಣರು ವಾಸಿಸುವ ಚಿಕ್ಕಪೇಟೆ, ಸೋಮೇಶ್ವರ ಹೀಗೆ ಹಲವು ಭಾಗಗಳಲ್ಲಿ ಜನ ಮನೆಯಿಂದಲೂ ಹೊರಗೆ ಬರಲು ಹೆದರಿಕೊಂಡಂತೆ ಕಂಡುಬಂತು. ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸನಾತನವಾದಿಗಳು ಗ್ರಹಣ ಬಿಡುವವರೆಗೂ ಏನೂ ತಿನ್ನದೆ ಮೌಢ್ಯವನ್ನು ಆಚರಿಸಿದರು. ಗ್ರಹಣ ಬಿಟ್ಟಮೇಲೆ ಸ್ನಾನ ಮಾಡಿದರು. ಆದರೆ ವಿಜ್ಞಾನ ಕೇಂದ್ರದ ಪದಾಧಿಕಾರಿಗಳನ್ನು ಇಂತಹ ಮೌಢ್ಯದಿಂದ ಹೊರಬರುವಂತೆ ಮನವಿ ಮಾಡಿಕೊಂಡರು. ಹೀಗಾಗಿ ಕೆಲಮಟ್ಟಿಗೆ ಜನರು ಸುರಕ್ಷಿತ ಸಾಧನಗಳಿಂದ ಸೂರ್ಯಗ್ರಹಣ ವೀಕ್ಷಿಸಿದರು. ಪದಾಧಿಕಾರಿಗಳು ಕೂಡ ಸೂರ್ಯಗ್ರಹಣ ವೀಕ್ಷಿಸುವುದರಿಂದ ಯಾವುದೇ ಅಪಾಯವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿದರು.

ವಿಜ್ಞಾನ ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಗಳ ಮೂಲಕ ಕಂಕಣ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಿದ್ದರು. ಹಿರೀಮಠದ ಡಾ.ಶಿವಾನಂದಶಿವಾಚಾರ್ಯ ಸ್ವಾಮಿ, ಮಹಿಳಾ ಪೊಲೀಸ್ ಅಧಿಕಾರಿಗಳು ಬಂದು ಸೂರ್ಯಗ್ರಹಣ ವೀಕ್ಷಿಸಿದರು.  ವಿಜ್ಞಾನ ಕೇಂದ್ರದ ಸಿ.ವಿಶ್ವನಾಥ್, ಸಿ.ಯತಿರಾಜ್, ಮಾಮ ರವಿ, ನಿತ್ಯಾನಂದ, ಸಾರ್ವಜನಿಕರಿಗೆ ವೈಚಾರಿಕ, ವೈಜ್ಞಾನಿಕವಾಗಿ ಸೂರ್ಯಗ್ರಹಣದ ಬಗ್ಗೆ ವಿವರಿಸಿ ಹೇಳಿದರು. ಪರಿಸರವಾದಿ ಸಿ.ಯತಿರಾಜು ಮಾತನಾಡಿ ಕೆಲವರು ಟಿವಿಗಳಲ್ಲಿ ಕುಳಿತು ಜನರಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಜನರು ಹೊರಬಂದು ಸೂರ್ಯಗ್ರಹಣ ವೀಕ್ಷಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಸೈಯದ್ ಮುಜೀಬ್ ಅವರು ಸೋಲಾರ್ ಫಿಲ್ಟರ್ ಗಳನ್ನು ಹಿಡಿದರು. ಆಟೋ ರಿಕ್ಷಾ ಚಾಲಕರು, ವೃದ್ದೆಯರು, ಪೌರಕಾರ್ಮಿಕರು, ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಿಸಲು ಮತ್ತು ವೈಜ್ಞಾನಿಕತೆಯನ್ನು ಹರಡಲು ಅವಕಾಶ ಮಾಡಿಕೊಟ್ಟರು. ರಾಮಾಜೋಯಿಸ್ ನಗರದಲ್ಲಿ ಆನಂದ್ ಅವರು ಮಕ್ಕಳಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ ಅಕ್ಕಮ್ಮ ಎಲ್ಲಾ ಸಾವಿರ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ವೀಕ್ಷಿಸಲು ಅನುಕೂಲ ಮಾಡಿಕೊಟ್ಟರು.

ಇಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಂಡಿತು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಂಡಿತು. ಮತ್ತೊಮ್ಮೆ ಇಂತಹ ಗ್ರಹಣ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ರವಿಶಂಕರ್ ತಿಳಿಸಿದರು.

ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಾಹನಗಳ ಓಡಾಟ ವಿರಳವಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಗಿನ ಚಹ, ಕಾಫಿ ಹೀರಲು ತುಂಬಿರುತ್ತಿದ್ದ ಹೋಟೆಲ್, ಕೆಫೆಗಳು ಖಾಲಿ ಖಾಲಿ ಇದ್ದುದು ಕಂಡು ಬಂತು. ಟಿವಿಯಲ್ಲಿ ಕುಳಿತ ಜ್ಯೋತಿಷಗಳು ಬ್ರಹ್ಮಾಂಡ ಮೌಢ್ಯ ಬಿತ್ತುವುದರಲ್ಲಿ ತೊಡಗಿದ್ದರು. ಆದರೆ ಲಕ್ಷಾಂತರವಲ್ಲದಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನ ಮನೆಗಳಿಂದ ಹೊರಬಂದಿದ್ದರು. ವಾಹನಗಳ ಚಾಲಕರು ಗ್ರಹಣವನ್ನು ನಂಬಿರಲಿಲ್ಲ. ಆದರೆ ನಗರವಾಸಿಗಳಲ್ಲೇ ಮೌಢ್ಯ ಹೆಚ್ಚಾಗಿರುವುದಂತು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...