Homeಕರ್ನಾಟಕಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

- Advertisement -
- Advertisement -

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ (ಜ.26) ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಭಾಷಣ ಮಾಡಿದರು. ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದರು.

ನಮ್ಮ ಸಂವಿಧಾನವು ಸಾರ್ವಭೌಮ ಅಧಿಕಾರವನ್ನು ಒಕ್ಕೂಟ ಮತ್ತು ರಾಜ್ಯಗಳ ನಡುವೆ ಹಂಚಿದೆ. ದೇಶದ ಅಖಂಡತೆ ಮತ್ತು ಸಮಗ್ರತೆಯ ದೃಷ್ಟಿಯಿಂದ ಒಕ್ಕೂಟ ಸರ್ಕಾರಕ್ಕೆ ಹೆಚ್ಚಿನ ಅಧಿಕಾರ ನೀಡುವಾಗಲೂ ರಾಜ್ಯಗಳ ಅಧಿಕಾರ ವ್ಯಾಪ್ತಿಯನ್ನು ಗುರುತಿಸಿ ಗೌರವಿಸಿದೆ. ಆ ಮೂಲಕ ದೇಶದ ವಿವಿಧತೆಯನ್ನು ಎತ್ತಿ ಹಿಡಿದಿದೆ. ವೈವಿಧ್ಯಮಯವಾದ, ಅಧಿಕಾರ ಹಂಚಿಕೆಯ ಈ ತತ್ವವನ್ನು ಅಳವಡಿಸಿಕೊಂಡು ನಮ್ಮ ಸಂವಿಧಾನದ ನಿರ್ಮಾತೃಗಳು ಈ ಆಡಳಿತ ವ್ಯವಸ್ಥೆಯನ್ನು ನಮಗೆ ನೀಡಿದ್ದಾರೆ ಎಂದರು.

ಸಂವಿಧಾನದ ಕಾರಣಕ್ಕಾಗಿಯೇ ನಾವು ನೆಮ್ಮದಿಯಿಂದ ಇದ್ದೇವೆ. ದೇಶದ ಅಸಂಖ್ಯಾತ ಜನರು, ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂದು ಆಳವಾಗಿ ನಂಬಿರುವುದರಿಂದ ಸಂವಿಧಾನವು ದಿನದಿಂದ ದಿನಕ್ಕೆ ಹೆಚ್ಚು ಪ್ರಸ್ತುತವಾಗುತ್ತಿದೆ ಎಂದು ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು, “ಸಂವಿಧಾನ ಎಷ್ಟೇ ಒಳ್ಳೆಯದಾಗಿರಲಿ, ಅದನ್ನು ಅನುಷ್ಠಾನಗೊಳಿಸುವ ಜನ ಕೆಟ್ಟವರಾಗಿದ್ದರೆ ಪರಿಣಾಮ ಕೆಟ್ಟದ್ದೇ ಆಗುತ್ತದೆ. ಸಂವಿಧಾನ ಎಷ್ಟೇ ಕೆಟ್ಟದ್ದಾಗಿದ್ದರೂ ಅದನ್ನು ಅನುಷ್ಠಾನಗೊಳಿಸುವವರು ಒಳ್ಳೆಯವರಾಗಿದ್ದರೆ ಅದರ ಪರಿಣಾಮ ಒಳ್ಳೆಯದ್ದೇ ಆಗುತ್ತದೆ. ಸಂವಿಧಾನದ ಕಾರ್ಯನಿರ್ವಹಣೆಯು ಅದರ ಗುಣಲಕ್ಷಣದ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುವುದಿಲ್ಲ. ಸಂವಿಧಾನವು ರಾಷ್ಟ್ರದ ಅಂಗಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ವ್ಯವಸ್ಥೆ ಮುಂತಾದವುಗಳನ್ನು ಮಾತ್ರ ಒದಗಿಸಬಹುದು. ಈ ಅಂಗಗಳ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರುವ ಅಂಶಗಳೆಂದರೆ ಆ ದೇಶದ ಪ್ರಜೆಗಳು ಮತ್ತು ಅವರ ಆಶೋತ್ತರಗಳನ್ನು ಈಡೇರಿಸುವುದಕ್ಕೆ ತಮ್ಮ ಸಾಧನವಾಗಿ ಆಯ್ಕೆ ಮಾಡಿಕೊಂಡ ರಾಜಕೀಯ ಪಕ್ಷಗಳು” ಎಂದಿದ್ದಾರೆ. ಹಾಗಾಗಿ ಜನರು ಮಾಡಬೇಕಾದ ಅತಿ ಮುಖ್ಯ ಕೆಲಸವೆಂದರೆ ಸಂವಿಧಾನದ ಮೂಲ ಆಶಯವನ್ನು ಅರಿತು ಕೆಲಸ ಮಾಡುವ ಪ್ರತಿನಿಧಿಗಳನ್ನು ಆರಿಸಿ ಕಳುಹಿಸುವುದು ಹಾಗೂ ನಿರಂತರವಾಗಿ ಪ್ರಶ್ನೆ, ಸಂವಾದ ಮಾಡುತ್ತಲೇ ಜನತಂತ್ರ ವ್ಯವಸ್ಥೆಯನ್ನು ಉಳಿಸಿಕೊಳ್ಳುವುದಾಗಿದೆ. ಇದನ್ನೆ ಮಹಾತ್ಮ ಗಾಂಧೀಜಿಯವರು ಸಹ ಹೇಳಿದ್ದಾರೆ ಎಂದು ತಿಳಿಸಿದರು.

ನಮ್ಮ ಗಣರಾಜ್ಯದ ನೈಜ ಶಕ್ತಿಯು ವಿವಿಧತೆಯಲ್ಲಿ ಏಕತೆ, ಪ್ರಜಾಪ್ರಭುತ್ವ ಸಂಸ್ಥೆಗಳ ಚಲನಶೀಲತೆ ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳ ಬದ್ಧತೆಯಲ್ಲಿದೆ. ಭಾರತ ಸಂವಿಧಾನದ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ನಾಯಕತ್ವದ ಕರಡು ಸಮಿತಿಯ ಪ್ರತಿಯೊಬ್ಬ ಸದಸ್ಯರೂ ಸಹ ಈ ದೇಶಕ್ಕೆ ತಮ್ಮ ಅಭೂತಪೂರ್ವ ಕೊಡುಗೆಯನ್ನು ನೀಡಿದ್ದಾರೆ. 77ನೇ ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಅವರನ್ನು ಸ್ಮರಿಸುತ್ತಾ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಮತ್ತು ದೇಶದ ಸೇವೆ ಮತ್ತು ಪ್ರಗತಿಗಾಗಿ ನಮ್ಮನ್ನು ನಾವು ಅರ್ಪಿಸಿಕೊಳ್ಳೊಣ ಎಂದರು.

ರಾಷ್ಟ್ರದ ಏಕತೆ, ಸಮಾನತೆ, ಸಮಗ್ರತೆ ಮತ್ತು ಸಮೃದ್ಧಿಯನ್ನು ಸಾಧಿಸುವಲ್ಲಿ ಪ್ರಜಾಪ್ರಭುತ್ವದ ಆದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತಲೇ ಇರಲಿ, ದೇಶಭಕ್ತಿ ಮತ್ತು ಏಕತೆಯ ಮನೋಭಾವವು ರಾಷ್ಟ್ರದ ಒಳಿತಿಗೆ ಕೊಡುಗೆ ನೀಡಲಿ, ಸುಭದ್ರ, ಸೌಹಾರ್ದ ಹಾಗೂ ಸಮೃದ್ಧ ಕರ್ನಾಟಕ ಹಾಗೂ ಭಾರತವನ್ನು ನಿರ್ಮಿಸಲು ಸಂವಿಧಾನದ ಶಕ್ತಿಯನ್ನು ಬಳಸಿಕೊಂಡು ಮುನ್ನಡೆಯೋಣ. ಮಾದರಿ ಗಣತಂತ್ರ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸೋಣ ಎಂದು ರಾಜ್ಯಪಾಲರು ಹೇಳಿದೆ.

ರಾಜ್ಯ ಸರ್ಕಾರ ಸಿದ್ದಪಡಿಸಿದ ಭಾಷಣ ಓದಿದ ರಾಜ್ಯಪಾಲರು

ಜನವರಿ 22ರಂದು ವಿಧಾನಮಂಡಲದ ವಿಶೇಷ ಅಧಿವೇಶನದ ಆರಂಭದ ವೇಳೆ ರಾಜ್ಯಪಾಲರು ಎರಡೇ ಸಾಲುಗಳ ಭಾಷಣ ಮಾಡಿ ಹೋಗಿದ್ದು ಗದ್ದಲಕ್ಕೆ ಕಾರಣವಾಗಿತ್ತು. ಅದಕ್ಕೂ ಮುನ್ನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದು ಮತ್ತು ಸ್ಪೀಕರ್, ಸಭಾಪತಿ ಸೇರಿದಂತೆ ಪ್ರಮುಖರು ರಾಜ್ಯಪಾಲರ ಮನವೊಲಿಸಿದ್ದು ಹಾಗೂ ರಾಜ್ಯಪಾಲರು ಸರ್ಕಾರ ಸಿದ್ದಪಡಿಸಿದ ಭಾಷಣ ಓದದೆ ನಿರ್ಗಮಿಸಿದ್ದು, ಆ ವೇಳೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ರಾಜ್ಯಪಾಲರನ್ನು ಅಡ್ಡಗಟ್ಟಿದ್ದು ಎಲ್ಲವೂ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಜಟಾಪಟಿಯನ್ನು ತೆರೆದಿಟ್ಟಿತ್ತು.

ಇದಾಗಿ ಒಂದು ವಾರದ ಬಳಿಕ ಮತ್ತೆ ಸರ್ಕಾರದ ಸಿದ್ದಪಡಿಸಿದ ಭಾಷಣವನ್ನು ರಾಜ್ಯಪಾಲರು ಓದುತ್ತಾರಾ ಎಂಬ ಪ್ರಶ್ನೆ ಮೂಡಿತ್ತು. ಆದರೆ, ರಾಜ್ಯಪಾಲರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೆರೆದವರು ಮತ್ತು ರಾಜ್ಯದ ಜನರನ್ನು ಉದ್ದೇಶಿಸಿ ಸರ್ಕಾರದ ಬರೆದುಕೊಟ್ಟ 11 ಪುಟಗಳ ಭಾಷಣವನ್ನು ಸಂಪೂರ್ಣ ಓದಿದರು. ನಮ್ಮ ಸರ್ಕಾರದ ಕಾರ್ಯಕ್ರಮ ಎಂದು ಭಾಷಣದಲ್ಲಿರುವ ಅಂಶಗಳನ್ನು ಉಲ್ಲೇಖಿಸಿದರು. 20 ನಿಮಿಷದಲ್ಲಿ ತಮ್ಮ ಭಾಷಣ ಮುಗಿಸಿದರು.

ರಾಜ್ಯಪಾಲರ ಭಾಷಣದ ಪೂರ್ಣ ಪಠ್ಯವನ್ನು ಕೆಳಗಡೆ ನೋಡಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...