Homeಕರ್ನಾಟಕಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಎಫ್‌ಐಆರ್ ಪ್ರಕಾರ, ಪುನೀತ್ ಕೆರೆಹಳ್ಳಿ ಮತ್ತು ಆತನ ಗುಂಪು ಜನವರಿ 22ರಂದು ಬೆಂಗಳೂರಿನ ಸೋಲದೇವನಹಳ್ಳಿ ಬಳಿಯ ಕೆಂಪಾಪುರದ ಶ್ವೇತಾ ಫಾರಂ ರಸ್ತೆಯಲ್ಲಿನ ಸಕೀನಾ ತಸ್ನೀಮ್ ಎಂಬುವರಿಗೆ ಸೇರಿದ ಜಾಗಕ್ಕೆ ಹೋಗಿ ಗಲಾಟೆ ಮಾಡಿದ್ದರು. ಬಾಂಗ್ಲಾದೇಶದವರನ್ನು ಮಾನವ ಕಳ್ಳ ಸಾಗಾಣಿಕೆ ಮೂಲಕ ಕರೆತಂದು ಅಕ್ರಮ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಾಗ್ವಾದ ನಡೆಸಿದ್ದರು.

ಶ್ವೇತಾ ಫಾರಂ ರಸ್ತೆಯ ಜಾಗವು ಡಿಜಿ-ಐಜಿಪಿ ಎಂ.ಎ.ಸಲೀಂ ಅವರ ಬೇನಾಮಿ ಆಸ್ತಿ ಎಂದು ಪುನೀತ್ ಮತ್ತು ಆತನ ಸಹಚರರು ಸುಳ್ಳಾರೋಪ ಮಾಡಿದ್ದರು. ಅಲ್ಲದೆ, ಆ ಜಾಗದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ವಿಡಿಯೋ ಮಾಡಿ ಫೇಸ್‍ಬುಕ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾಗಿ ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ಕದಡಿದ, ಕೋಮು ಸಾಮರಸ್ಯಕ್ಕೆ ಧಕ್ಕೆ ತಂದ, ಸಾರ್ವಜನಿಕರನ್ನು ಪ್ರಚೋದಿಸಿದ, ಸಮುದಾಯಗಳ ನಡುವೆ ದ್ವೇಷ ಮೂಡಿಸಿದ ಹಾಗೂ ಮಾಹಿತಿ ತಂತ್ರಜ್ಞಾನ ದುರ್ಬಳಕೆ ಆರೋಪದಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಜನವರಿ 23ರಂದು ಬೆಂಗಳೂರು ನಗರ ಪೊಲೀಸರ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಘಟಕವು ಫೇಸ್‌ಬುಕ್ ಮತ್ತು ಇತರ ವೇದಿಕೆಗಳಲ್ಲಿ ವಿಡಿಯೋ ಪ್ರಸಾರವಾಗುತ್ತಿರುವುದನ್ನು ಗಮನಿಸಿದಾಗ ಈ ಘಟನೆ ಬೆಳಕಿಗೆ ಬಂದಿತ್ತು. ಈ ಸಂಬಂಧ ಪೊಲೀಸ್ ಅಧಿಕಾರಿಯೊಬ್ಬರು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸ್ ಅಧಿಕಾರಿಯ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ ಅಥವಾ ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ಹತ್ತು ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿರುವ ಮೂರನೇ ಎಫ್‌ಐಆರ್ ಇದಾಗಿದೆ.

ಇದಕ್ಕೂ ಮುನ್ನ, ಮನೆಯೊಂದಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಬಾಡಿಗೆದಾರರನ್ನು ಅಕ್ರಮ ವಲಸಿಗರೆಂದು ಆರೋಪಿಸಿ, ವಲಸಿಗರಿಗೆ ಮನೆಯನ್ನು ನೀಡಿದ್ದಕ್ಕಾಗಿ ಮನೆ ಮಾಲೀಕರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಜನವರಿ 16ರಂದು ಬನ್ನೇರುಘಟ್ಟ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...