Homeಮುಖಪುಟಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

- Advertisement -
- Advertisement -

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು.

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ 26 ವರ್ಷದ ಸಿಮ್ರಾನ್ ಬಾಲಾ, ದೇಶದ ಅತಿದೊಡ್ಡ ಅರೆಸೈನಿಕ ಪಡೆಯಾದ ಸಿಆರ್‌ಪಿಎಫ್‌ನ 147 ಸಿಬ್ಬಂದಿಯ ತುಕಡಿಯನ್ನು ನೇತೃತ್ವ ವಹಿಸಿದರು. ಕರ್ತವ್ಯ ಪಥದಲ್ಲಿ ಫೋರ್ಸ್ ಬ್ಯಾಂಡ್ ನುಡಿಸಿದ ಸಿಆರ್‌ಪಿಎಫ್ ಹಾಡಿನ ‘ದೇಶ್ ಕೆ ಹಮ್ ಹೈ ರಕ್ಷಕ್’ ಟ್ಯೂನ್‌ನಲ್ಲಿ ಸಿಮ್ರಾನ್ ಅವರ ತಂಡವು ಸಾಗಿತು.

ಸಿಆರ್‌ಪಿಎಫ್‌ನ ಮಹಿಳಾ ಅಧಿಕಾರಿಗಳು ಈ ಹಿಂದೆ ವಿವಿಧ ಗಣರಾಜ್ಯೋತ್ಸವದ ತುಕಡಿಗಳನ್ನು ಮುನ್ನಡೆಸಿದ ನಿದರ್ಶನಗಳಿದ್ದರೂ, ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರು ಸಂಪೂರ್ಣ ಪುರುಷರ ತಂಡದ ನೇತೃತ್ವ ವಹಿಸಿದರು. ಇದು ಒಂದು ಐತಿಹಾಸಿಕ ಸಾಧನೆ ಮತ್ತು ಉತ್ತಮ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಒಂದು ವರ್ಷದ ಹಿಂದೆ ಸಿಆರ್‌ಪಿಎಫ್‌ಗೆ ಸೇರಿದ ಸಿಮ್ರಾನ್ ಅವರು, ದೇಶದ ಅತಿದೊಡ್ಡ ಅರೆಸೈನಿಕ ಪಡೆಯಲ್ಲಿ ಅಧಿಕಾರಿ ಶ್ರೇಣಿಯ ಹುದ್ದೆ ಪಡೆದ ರಾಜೌರಿಯ ಜಿಲ್ಲೆಯ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆಕೆಯ ಗ್ರಾಮ ನೌಶೇರಾ ಭಾರತ-ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಿಂದ (ಎಲ್‌ಒಸಿ) ಕೇವಲ 11 ಕಿ.ಮೀ ದೂರದಲ್ಲಿದೆ. ಈ ಪ್ರದೇಶವು ಹಿಂದೆ ಹಲವು ಬಾರಿ ಗಡಿಯಾಚೆಗಿನ ಶೆಲ್ ದಾಳಿಗೆ ಸಾಕ್ಷಿಯಾಗಿದೆ.

“ಗಣರಾಜ್ಯೋತ್ಸವದಂದು ತುಕಡಿಯನ್ನು ಮುನ್ನಡೆಸಲು ನನಗೆ ನಿಜಕ್ಕೂ ಗೌರವವಿದೆ. ಈ ಅವಕಾಶ ನೀಡಿದ್ದಕ್ಕಾಗಿ ಸಿಆರ್‌ಪಿಎಫ್‌ಗೆ ನಾನು ಕೃತಜ್ಞಳಾಗಿದ್ದೇನೆ” ಎಂದು ಸಿಮ್ರಾನ್ ಅವರು ಕೆಲವು ದಿನಗಳ ಹಿಂದೆ ತಮ್ಮ ಪೆರೇಡ್ ಅಭ್ಯಾಸದ ಸಮಯದಲ್ಲಿ ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.

ಸಿಮ್ರಾನ್, ಅವರ ಪೋಷಕರ ಮೂವರು ಮಕ್ಕಳಲ್ಲಿ ಕಿರಿಯವರು. ಅವರ ಅಜ್ಜ ಮತ್ತು ತಂದೆ ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸಿಮ್ರಾನ್ ಜಮ್ಮುವಿನ ಗಾಂಧಿನಗರದಲ್ಲಿರುವ ಸರ್ಕಾರಿ ಮಹಿಳಾ ಕಾಲೇಜಿನಿಂದ ರಾಜ್ಯಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ.

ಏಪ್ರಿಲ್ 2025ರಲ್ಲಿ ಸಿಆರ್‌ಪಿಎಫ್‌ ಸೇರಿದ ಸಿಮ್ರಾನ್, ಛತ್ತೀಸ್‌ಗಢದ ‘ಬಸ್ತಾರಿಯಾ’ ಬೆಟಾಲಿಯನ್‌ನಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳನ್ನು ಕೈಗೊಳ್ಳುವ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.

ಸುಮಾರು 3.25 ಲಕ್ಷ ಸಿಬ್ಬಂದಿಯನ್ನು ಹೊಂದಿರುವ ಸಿಆರ್‌ಪಿಎಫ್ ದೇಶದ ಅತ್ಯುನ್ನತ ಆಂತರಿಕ ಭದ್ರತಾ ಪಡೆಯಾಗಿದ್ದು, ನಕ್ಸಲ್ ವಿರೋಧಿ ಕಾರ್ಯಾಚರಣೆಗಳು, ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ನಿಗ್ರಹ ದಾಳಿಗಳು ಮತ್ತು ಈಶಾನ್ಯದಲ್ಲಿ ದಂಗೆ ನಿಗ್ರಹ ಈ ಪಡೆಯ ಪ್ರಮುಖ ಕರ್ತವ್ಯಗಳಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...