Homeಕರ್ನಾಟಕಪೌರಾಯುಕ್ತೆಗೆ ಧಮ್ಕಿ ಪ್ರಕರಣ : ಕರ್ನಾಟಕ-ಕೇರಳ ಗಡಿಯಲ್ಲಿ ರಾಜೀವ್‌ ಗೌಡ ಬಂಧನ; ಆಶ್ರಯ ಕೊಟ್ಟ ಮಂಗಳೂರಿನ...

ಪೌರಾಯುಕ್ತೆಗೆ ಧಮ್ಕಿ ಪ್ರಕರಣ : ಕರ್ನಾಟಕ-ಕೇರಳ ಗಡಿಯಲ್ಲಿ ರಾಜೀವ್‌ ಗೌಡ ಬಂಧನ; ಆಶ್ರಯ ಕೊಟ್ಟ ಮಂಗಳೂರಿನ ಉದ್ಯಮಿ ವಶಕ್ಕೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಜಿ. ಅಮೃತಗೌಡ ಅವರಿಗೆ ದೂರವಾಣಿ ಮೂಲಕ ಧಮ್ಕಿ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಜೀವ್‌ ಗೌಡ ಅವರನ್ನು ಪೊಲೀಸರು ಸೋಮವಾರ (ಜ.26) ಕರ್ನಾಟಕ-ಕೇರಳ ಗಡಿ ಸಮೀಪ ಕೇರಳ ರಾಜ್ಯದ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.

ರಾಜೀವ್‌ ಗೌಡ ಅವರು ಕಳೆದ 12-13 ದಿನಗಳಿಂದ ತಲೆಮರೆಸಿಕೊಂಡಿದ್ದರು. ಎಫ್‌ಐಆರ್‌ ರದ್ದತಿ ಮತ್ತು ನಿರೀಕ್ಷಣಾ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 22ರಂದು ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ, ಜನವರಿ 24ರಂದು ಅವರನ್ನು ಕೆಪಿಸಿಸಿ ಶಿಸ್ತುಸಮಿತಿ ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಿತ್ತು. ಇದಕ್ಕೂ ಮುನ್ನ ರಾಜೀವ್‌ಗೌಡ ಕೆಪಿಸಿಸಿ ಸಂಯೋಜಕರಾಗಿದ್ದರು.

ರಾಜೀವ್ ಗೌಡ ಅವರನ್ನು ಕೇರಳ ಗಡಿ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕುಶಾಲ್ ಚೌಕ್ಸೆ ಸೋಮವಾರ (ಜ.26) ದೃಢಪಡಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮಂಗಳವಾರ (ಜ.27) ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.

ಕೇರಳಕ್ಕೆ ಪ್ರಯಾಣಿಸುವ ಮೊದಲು, ರಾಜೀವ್ ಗೌಡ ಮೂರು ದಿನಗಳ ಕಾಲ ಮಂಗಳೂರಿನ ರೆಸಾರ್ಟ್‌ನಲ್ಲಿ ತಂಗಿದ್ದರು. ಅವರು ಸಂಬಂಧಿಕರ ಕಾರಿನಲ್ಲಿ ಮಂಗಳೂರಿಗೆ ತೆರಳಿದ್ದರು. ಈ ಸಂಬಂಧ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ತಡರಾತ್ರಿ ಈ ಇಬ್ಬರನ್ನು ಕರೆತಂದು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಬಳಿಯ ಅತಿಥಿ ಗೃಹದಲ್ಲಿ ಇರಿಸಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಎಎಸ್‌ಪಿ ಜಗನ್ನಾಥ ರೈ, ಡಿವೈಎಸ್‌ಪಿ ರವಿಕುಮಾರ್, ತನಿಖಾಧಿಕಾರಿ ಇನ್‌ಸ್ಪೆಕ್ಟರ್ ಆನಂದ್ ವಿಚಾರಣೆ ನಡೆಸುತ್ತಿದ್ದಾರೆ. ಸೋಕೊ ತಂಡ ಕೂಡ ವಿಚಾರಣೆಯಲ್ಲಿ ಭಾಗಿಯಾಗಿದೆ ಎಂದು ವರದಿಯಾಗಿದೆ.

ವರದಿಯೊಂದರ ಪ್ರಕಾರ, ಪೊಲೀಸರ ಕಣ್ತಪ್ಪಿಸಲು ಯತ್ನಿಸಿದ್ದ ರಾಜೀವ್‌ ಗೌಡ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಬಳಿ ಕಾರು ನಿಲ್ಲಿಸಿ, ಉದ್ಯಮಿಯ ಕಾರಿನಲ್ಲಿ ತಲಪಾಡಿ ಮಾರ್ಗವಾಗಿ ಕಾಸರಗೋಡಿನತ್ತ ಹೋಗುತ್ತಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದಾರೆ.

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿದ್ದರು.

ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...