Homeಮುಖಪುಟಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ 66 ವರ್ಷದ ಅಜಿತ್‌ ಪವಾರ್ ಅವರ ಜೀವದ ಜೊತೆಗೆ ವೃತ್ತಿಜೀವನ್ನೂ ಮೊಟಕುಗೊಳಿಸಿತು.

ಜುಲೈ 22, 1959 ರಂದು ಅಹ್ಮದ್‌ನಗರ ಜಿಲ್ಲೆಯ ಡಿಯೋಲಾಲಿ ಪ್ರವರದಲ್ಲಿ ಜನಿಸಿದ ಅಜಿತ್ ಪವಾರ್, ಮಹಾರಾಷ್ಟ್ರದ ಸಾರ್ವಜನಿಕ ಜೀವನದಲ್ಲಿ ಆಳವಾಗಿ ಬೆಸೆದುಕೊಂಡಿದ್ದ ರಾಜಕೀಯ ಕುಟುಂಬದಲ್ಲಿ ಬೆಳೆದರು.

ಅಜಿತ್ 18 ವರ್ಷ ವಯಸ್ಸಿನವನಾಗಿದ್ದಾಗ ಅವರ ತಂದೆ ಅನಂತರಾವ್ ಪವಾರ್ ನಿಧನರಾದರು. ನಂತರ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ಜೊತೆಗೆ ಸಕ್ರಿಯ ರಾಜಕೀಯಕ್ಕೆ ಸೇರಿಸಿಕೊಂಡರು. 1982 ರಲ್ಲಿ ಸಕ್ಕರೆ ಸಹಕಾರಿ ಸಂಸ್ಥೆಯ ಮಂಡಳಿಗೆ ಆಯ್ಕೆಯಾಗುವ ಮೂಲಕ ತಮ್ಮ ಸಾರ್ವಜನಿಕ ಜೀವನವನ್ನು ಪ್ರಾರಂಭಿಸಿದರು.

ಅವರ ಆರಂಭಿಕ ವರ್ಷಗಳು, ಪಶ್ಚಿಮ ಮಹಾರಾಷ್ಟ್ರದಲ್ಲಿ ರಾಜಕೀಯವನ್ನು ರೂಪಿಸಿದ ಸಹಕಾರಿ ಸಂಸ್ಥೆಗಳ ಸುತ್ತ ಕಳೆದವು. ಅವರು ಪ್ರಮುಖ ರಾಜಕೀಯ ಹುದ್ದೆಯನ್ನು ವಹಿಸಿಕೊಳ್ಳುವ ಮೊದಲೇ ಸಕ್ಕರೆ ಕಾರ್ಖಾನೆಗಳು, ಹಾಲು ಒಕ್ಕೂಟಗಳು ಮತ್ತು ಸ್ಥಳೀಯ ಬ್ಯಾಂಕ್‌ಗಳೊಂದಿಗೆ ಕೆಲಸ ಮಾಡುವ ಮೂಲಕ ತಮ್ಮ ರಾಜಕೀಯವಾಗಿ ಭದ್ರಗೊಂಡರು.

1991 ರಲ್ಲಿ, ಅವರು ಪುಣೆ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದರು, 16 ವರ್ಷಗಳ ಕಾಲ ಆ ಹುದ್ದೆಯನ್ನು ಅಲಂಕರಿಸಿದರು.

ಪವಾರ್ ಅವರ ಮೊದಲ ಚುನಾವಣಾ ಸ್ಪರ್ಧೆಯು 1991 ರಲ್ಲಿ ಬಾರಾಮತಿಯಿಂದ ಲೋಕಸಭೆಗೆ ಆಯ್ಕೆಯಾದಾಗುವ ಮೂಲಕ ಆರಂಭವಾಯಿತು. ನರಸಿಂಹರಾವ್ ಸರ್ಕಾರದಲ್ಲಿ ಶರದ್ ಪವಾರ್ ರಕ್ಷಣಾ ಸಚಿವರಾದ ನಂತರ ಅವರು ಆ ಸ್ಥಾನವನ್ನು ತೊರೆದು ರಾಜ್ಯ ರಾಜಕೀಯಕ್ಕೆ ಬಂದರು. ಅದೇ ವರ್ಷ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಗೆದ್ದರು.

ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ನಿರಂತರವಾಗಿ ಪ್ರತಿನಿಧಿಸುತ್ತಿದ್ದ ಸ್ಥಾನ ಇದು. ನವೆಂಬರ್ 2024 ರಲ್ಲಿ, ಅವರು ಎಂಟನೇ ಬಾರಿಗೆ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಅಲ್ಲಿ ಗೆದ್ದರು.

ಅಲ್ಲಿಂದ, ಪವಾರ್ ಅವರ ರಾಜಕೀಯ ಏರಿಕೆ ಸ್ಥಿರವಾಗಿತ್ತು. ಅವರು ತಮ್ಮ ಆಡಳಿತಾತ್ಮಕ ದಕ್ಷತೆ ಮತ್ತು ರಾಜ್ಯ ನೀತಿಯಲ್ಲಿ, ವಿಶೇಷವಾಗಿ ಹಣಕಾಸು, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಗಣನೀಯ ಪ್ರಭಾವ ಬೀರಿದ್ದಕ್ಕಾಗಿ ಹೆಸರುವಾಸಿಯಾದರು.

ಇತ್ತೀಚಿನ ವರ್ಷಗಳಲ್ಲಿ, ಅವರು ನೀರಾವರಿ, ಜಲಸಂಪನ್ಮೂಲಗಳು ಮತ್ತು ಹಣಕಾಸು ಸೇರಿದಂತೆ ಹಲವಾರು ಹೆವಿವೇಯ್ಟ್ ಖಾತೆಗಳನ್ನು ನಿರ್ವಹಿಸಿದರು. ಮಹಾರಾಷ್ಟ್ರದ ಬಜೆಟ್ ತಯಾರಿಕೆ ಮತ್ತು ಅಧಿಕಾರಶಾಹಿ ನಿರ್ಧಾರ ತೆಗೆದುಕೊಳ್ಳುವಿಕೆಯ ಪ್ರಮುಖ ವ್ಯಕ್ತಿಯಾದರು.

ಅವರು ಉಪಮುಖ್ಯಮಂತ್ರಿಯಾಗಿ ಹಲವು ಅವಧಿಗೆ ಸೇವೆ ಸಲ್ಲಿಸಿದರು. ಆ ಹುದ್ದೆಯಲ್ಲಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ರಾಜಕಾರಣಿಗಳಲ್ಲಿ ಒಬ್ಬರಾದರು.

ಅವರ ರಾಜಕೀಯ ಪ್ರಯಾಣವು ಹಲವಾರು ತಿರುವುಗಳಿಂದ ಗುರುತಿಸಲ್ಪಟ್ಟಿದೆ. ನವೆಂಬರ್ 2019 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆಯ ನಡುವಿನ ವಿಭಜನೆಯ ನಂತರ, ಅವರು ಮತ್ತು ದೇವೇಂದ್ರ ಫಡ್ನವಿಸ್ ಅವರು ರಾಜಭವನದಲ್ಲಿ ಬೆಳಿಗ್ಗೆ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಪವಾರ್ ತಮ್ಮೊಂದಿಗೆ ಸಾಕಷ್ಟು ಶಾಸಕರನ್ನು ಕರೆದೊಯ್ಯಲು ಸಾಧ್ಯವಾಗದ ಕಾರಣ ಸರ್ಕಾರ ಕೇವಲ 80 ಗಂಟೆಗಳ ಕಾಲ ನಡೆಯಿತು.

ಜುಲೈ 2023 ರಲ್ಲಿ, ಅವರು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷವನ್ನು ವಿಭಜಿಸಿದರು. ಐದನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ನಡೆ ಶರದ್ ಪವಾರ್ ಅವರೊಂದಿಗಿನ ಅವರ ಅತ್ಯಂತ ನಾಟಕೀಯ ಸಂದರ್ಭಕ್ಕೆ ಸದಾಕ್ಷಿಯಾಯಿತು.

ಡಿಸೆಂಬರ್ 5, 2024 ರ ಹೊತ್ತಿಗೆ, ಅವರು ಮುಂಬೈನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಆರನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಅವರು ಮಹಾರಾಷ್ಟ್ರದ ರಾಜಕೀಯದಲ್ಲಿ ಪ್ರಬಲರಾಗಿ ಹೊರಹೊಮ್ಮಿದರು.

ಶರದ್ ಪವಾರ್ ಅವರ ರಾಜಕೀಯ ಪ್ರಭಾವದ ಹೊರತಾಗಿಯೂ, ಬಾರಾಮತಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಅಜಿತ್ ಪವಾರ್ ಅವರ ನೆಲೆ ದೃಢವಾಗಿತ್ತು. ಅವರ ತಳಮಟ್ಟದ ಸಂಪರ್ಕ, ಸಹಕಾರಿ ವಲಯದ ಬಲ ಮತ್ತು ಬಿಗಿಯಾದ ಸಾಂಸ್ಥಿಕ ನಿಯಂತ್ರಣದ ಸಂಯೋಜನೆಯು ಅವರನ್ನು ಬದಲಾಗುತ್ತಿರುವ ಮೈತ್ರಿಗಳ ಮೂಲಕ ರಾಜಕೀಯವಾಗಿ ಸುರಕ್ಷಿತವಾಗಿರಿಸಿತು.

ತಮ್ಮ ವೇಗದ ಕಾರ್ಯಶೈಲಿ ಮತ್ತು ನಿಯಮಿತ ಸಾರ್ವಜನಿಕ ಸಂವಹನಕ್ಕೆ ಹೆಸರುವಾಸಿಯಾದ ಪವಾರ್, ಕೊನೆಯವರೆಗೂ ಸರ್ಕಾರದಲ್ಲಿ ಸಕ್ರಿಯರಾಗಿದ್ದರು. ಅವರು ಸಾಯುವ ಸಮಯದಲ್ಲಿ ಪ್ರಸ್ತುತ ಮಹಾರಾಷ್ಟ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಅಜಿತ್ ಪವಾರ್ ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಅವರ ಸಾವು ಮಹಾರಾಷ್ಟ್ರ ರಾಜಕೀಯದಲ್ಲಿ ಗಮನಾರ್ಹವಾಗಿ ಶೂನ್ಯ ಆವರಿಸುವಂತೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...