Homeಮುಖಪುಟಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ 66 ವರ್ಷದ ಅಜಿತ್‌ ಪವಾರ್ ಅವರ ಜೀವದ ಜೊತೆಗೆ ವೃತ್ತಿಜೀವನ್ನೂ ಮೊಟಕುಗೊಳಿಸಿತು.

ಜುಲೈ 22, 1959 ರಂದು ಅಹ್ಮದ್‌ನಗರ ಜಿಲ್ಲೆಯ ಡಿಯೋಲಾಲಿ ಪ್ರವರದಲ್ಲಿ ಜನಿಸಿದ ಅಜಿತ್ ಪವಾರ್, ಮಹಾರಾಷ್ಟ್ರದ ಸಾರ್ವಜನಿಕ ಜೀವನದಲ್ಲಿ ಆಳವಾಗಿ ಬೆಸೆದುಕೊಂಡಿದ್ದ ರಾಜಕೀಯ ಕುಟುಂಬದಲ್ಲಿ ಬೆಳೆದರು.

ಅಜಿತ್ 18 ವರ್ಷ ವಯಸ್ಸಿನವನಾಗಿದ್ದಾಗ ಅವರ ತಂದೆ ಅನಂತರಾವ್ ಪವಾರ್ ನಿಧನರಾದರು. ನಂತರ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ಜೊತೆಗೆ ಸಕ್ರಿಯ ರಾಜಕೀಯಕ್ಕೆ ಸೇರಿಸಿಕೊಂಡರು. 1982 ರಲ್ಲಿ ಸಕ್ಕರೆ ಸಹಕಾರಿ ಸಂಸ್ಥೆಯ ಮಂಡಳಿಗೆ ಆಯ್ಕೆಯಾಗುವ ಮೂಲಕ ತಮ್ಮ ಸಾರ್ವಜನಿಕ ಜೀವನವನ್ನು ಪ್ರಾರಂಭಿಸಿದರು.

ಅವರ ಆರಂಭಿಕ ವರ್ಷಗಳು, ಪಶ್ಚಿಮ ಮಹಾರಾಷ್ಟ್ರದಲ್ಲಿ ರಾಜಕೀಯವನ್ನು ರೂಪಿಸಿದ ಸಹಕಾರಿ ಸಂಸ್ಥೆಗಳ ಸುತ್ತ ಕಳೆದವು. ಅವರು ಪ್ರಮುಖ ರಾಜಕೀಯ ಹುದ್ದೆಯನ್ನು ವಹಿಸಿಕೊಳ್ಳುವ ಮೊದಲೇ ಸಕ್ಕರೆ ಕಾರ್ಖಾನೆಗಳು, ಹಾಲು ಒಕ್ಕೂಟಗಳು ಮತ್ತು ಸ್ಥಳೀಯ ಬ್ಯಾಂಕ್‌ಗಳೊಂದಿಗೆ ಕೆಲಸ ಮಾಡುವ ಮೂಲಕ ತಮ್ಮ ರಾಜಕೀಯವಾಗಿ ಭದ್ರಗೊಂಡರು.

1991 ರಲ್ಲಿ, ಅವರು ಪುಣೆ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದರು, 16 ವರ್ಷಗಳ ಕಾಲ ಆ ಹುದ್ದೆಯನ್ನು ಅಲಂಕರಿಸಿದರು.

ಪವಾರ್ ಅವರ ಮೊದಲ ಚುನಾವಣಾ ಸ್ಪರ್ಧೆಯು 1991 ರಲ್ಲಿ ಬಾರಾಮತಿಯಿಂದ ಲೋಕಸಭೆಗೆ ಆಯ್ಕೆಯಾದಾಗುವ ಮೂಲಕ ಆರಂಭವಾಯಿತು. ನರಸಿಂಹರಾವ್ ಸರ್ಕಾರದಲ್ಲಿ ಶರದ್ ಪವಾರ್ ರಕ್ಷಣಾ ಸಚಿವರಾದ ನಂತರ ಅವರು ಆ ಸ್ಥಾನವನ್ನು ತೊರೆದು ರಾಜ್ಯ ರಾಜಕೀಯಕ್ಕೆ ಬಂದರು. ಅದೇ ವರ್ಷ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಗೆದ್ದರು.

ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ನಿರಂತರವಾಗಿ ಪ್ರತಿನಿಧಿಸುತ್ತಿದ್ದ ಸ್ಥಾನ ಇದು. ನವೆಂಬರ್ 2024 ರಲ್ಲಿ, ಅವರು ಎಂಟನೇ ಬಾರಿಗೆ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಅಲ್ಲಿ ಗೆದ್ದರು.

ಅಲ್ಲಿಂದ, ಪವಾರ್ ಅವರ ರಾಜಕೀಯ ಏರಿಕೆ ಸ್ಥಿರವಾಗಿತ್ತು. ಅವರು ತಮ್ಮ ಆಡಳಿತಾತ್ಮಕ ದಕ್ಷತೆ ಮತ್ತು ರಾಜ್ಯ ನೀತಿಯಲ್ಲಿ, ವಿಶೇಷವಾಗಿ ಹಣಕಾಸು, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಗಣನೀಯ ಪ್ರಭಾವ ಬೀರಿದ್ದಕ್ಕಾಗಿ ಹೆಸರುವಾಸಿಯಾದರು.

ಇತ್ತೀಚಿನ ವರ್ಷಗಳಲ್ಲಿ, ಅವರು ನೀರಾವರಿ, ಜಲಸಂಪನ್ಮೂಲಗಳು ಮತ್ತು ಹಣಕಾಸು ಸೇರಿದಂತೆ ಹಲವಾರು ಹೆವಿವೇಯ್ಟ್ ಖಾತೆಗಳನ್ನು ನಿರ್ವಹಿಸಿದರು. ಮಹಾರಾಷ್ಟ್ರದ ಬಜೆಟ್ ತಯಾರಿಕೆ ಮತ್ತು ಅಧಿಕಾರಶಾಹಿ ನಿರ್ಧಾರ ತೆಗೆದುಕೊಳ್ಳುವಿಕೆಯ ಪ್ರಮುಖ ವ್ಯಕ್ತಿಯಾದರು.

ಅವರು ಉಪಮುಖ್ಯಮಂತ್ರಿಯಾಗಿ ಹಲವು ಅವಧಿಗೆ ಸೇವೆ ಸಲ್ಲಿಸಿದರು. ಆ ಹುದ್ದೆಯಲ್ಲಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ರಾಜಕಾರಣಿಗಳಲ್ಲಿ ಒಬ್ಬರಾದರು.

ಅವರ ರಾಜಕೀಯ ಪ್ರಯಾಣವು ಹಲವಾರು ತಿರುವುಗಳಿಂದ ಗುರುತಿಸಲ್ಪಟ್ಟಿದೆ. ನವೆಂಬರ್ 2019 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆಯ ನಡುವಿನ ವಿಭಜನೆಯ ನಂತರ, ಅವರು ಮತ್ತು ದೇವೇಂದ್ರ ಫಡ್ನವಿಸ್ ಅವರು ರಾಜಭವನದಲ್ಲಿ ಬೆಳಿಗ್ಗೆ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಪವಾರ್ ತಮ್ಮೊಂದಿಗೆ ಸಾಕಷ್ಟು ಶಾಸಕರನ್ನು ಕರೆದೊಯ್ಯಲು ಸಾಧ್ಯವಾಗದ ಕಾರಣ ಸರ್ಕಾರ ಕೇವಲ 80 ಗಂಟೆಗಳ ಕಾಲ ನಡೆಯಿತು.

ಜುಲೈ 2023 ರಲ್ಲಿ, ಅವರು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷವನ್ನು ವಿಭಜಿಸಿದರು. ಐದನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ನಡೆ ಶರದ್ ಪವಾರ್ ಅವರೊಂದಿಗಿನ ಅವರ ಅತ್ಯಂತ ನಾಟಕೀಯ ಸಂದರ್ಭಕ್ಕೆ ಸದಾಕ್ಷಿಯಾಯಿತು.

ಡಿಸೆಂಬರ್ 5, 2024 ರ ಹೊತ್ತಿಗೆ, ಅವರು ಮುಂಬೈನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಆರನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಅವರು ಮಹಾರಾಷ್ಟ್ರದ ರಾಜಕೀಯದಲ್ಲಿ ಪ್ರಬಲರಾಗಿ ಹೊರಹೊಮ್ಮಿದರು.

ಶರದ್ ಪವಾರ್ ಅವರ ರಾಜಕೀಯ ಪ್ರಭಾವದ ಹೊರತಾಗಿಯೂ, ಬಾರಾಮತಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಅಜಿತ್ ಪವಾರ್ ಅವರ ನೆಲೆ ದೃಢವಾಗಿತ್ತು. ಅವರ ತಳಮಟ್ಟದ ಸಂಪರ್ಕ, ಸಹಕಾರಿ ವಲಯದ ಬಲ ಮತ್ತು ಬಿಗಿಯಾದ ಸಾಂಸ್ಥಿಕ ನಿಯಂತ್ರಣದ ಸಂಯೋಜನೆಯು ಅವರನ್ನು ಬದಲಾಗುತ್ತಿರುವ ಮೈತ್ರಿಗಳ ಮೂಲಕ ರಾಜಕೀಯವಾಗಿ ಸುರಕ್ಷಿತವಾಗಿರಿಸಿತು.

ತಮ್ಮ ವೇಗದ ಕಾರ್ಯಶೈಲಿ ಮತ್ತು ನಿಯಮಿತ ಸಾರ್ವಜನಿಕ ಸಂವಹನಕ್ಕೆ ಹೆಸರುವಾಸಿಯಾದ ಪವಾರ್, ಕೊನೆಯವರೆಗೂ ಸರ್ಕಾರದಲ್ಲಿ ಸಕ್ರಿಯರಾಗಿದ್ದರು. ಅವರು ಸಾಯುವ ಸಮಯದಲ್ಲಿ ಪ್ರಸ್ತುತ ಮಹಾರಾಷ್ಟ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಅಜಿತ್ ಪವಾರ್ ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಅವರ ಸಾವು ಮಹಾರಾಷ್ಟ್ರ ರಾಜಕೀಯದಲ್ಲಿ ಗಮನಾರ್ಹವಾಗಿ ಶೂನ್ಯ ಆವರಿಸುವಂತೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...