Homeಅಂತರಾಷ್ಟ್ರೀಯಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

- Advertisement -
- Advertisement -

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿರುವ ಎಸ್‌ಸಿ ಮತ್ತು ಅದಾನಿ ಪರ ಅಮೆರಿಕ ಮೂಲದ ವಕೀಲರು, ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಎಸ್‌ಇಸಿಯ ಸಮನ್ಸ್‌ಗಳನ್ನು ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದರಿಂದಾಗಿ, ಅದಾನಿಗಳಿಗೆ ಹೇಗೆ ಸಮನ್ಸ್ ನೀಡಬೇಕು ಎಂದು ನ್ಯಾಯಾಧೀಶರು ತೀರ್ಪು ನೀಡುವ ಅಗತ್ಯವಿಲ್ಲ ಎಂದು ವರದಿಗಳು ಹೇಳಿವೆ.

ಅಮೆರಿಕದ ಕಾನೂನಿನ ಪ್ರಕಾರ ಈ ಪ್ರಕರಣದಲ್ಲಿ ಅದಾನಿಗಳಿಗೆ ಸಮನ್ಸ್ ಕೊಡುವುದು ಕಡ್ಡಾಯವಾಗಿದೆ. ಹಾಗಾಗಿ, ಎಸ್‌ಇಸಿ ಹೇಗ್ ಕನ್ವೆನ್ಷನ್ ಮೂಲಕ ಎರಡು ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ, ಅದನ್ನು ಅದಾನಿಗಳಿಗೆ ತಲುಪಿಸಲು ಎರಡೂ ಬಾರಿಯೂ ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯ ನಿರಾಕರಿಸಿತ್ತು. ಸಮನ್ಸ್‌ಗಳಲ್ಲಿ ತಾಂತ್ರಿಕ ದೋಷಗಳಿದ್ದವು. ಅಂದರೆ, ಅದರ ಮೇಲೆ ಅಗತ್ಯವಾದ ಅಧಿಕೃತ ಸೀಲ್ ಮತ್ತು ಇಂಕ್ ಸಹಿ ಮುಂತಾದವು ಸರಿಯಾಗಿ ಇರಲಿಲ್ಲ ಎಂದು ಸರ್ಕಾರ ಜಾರಿಕೊಂಡಿತ್ತು.

ಭಾರತ ಸರ್ಕಾರ ಎರಡು ಬಾರಿ ಸಮನ್ಸ್ ತಲುಪಿಸಲು ನಿರಾಕರಿಸಿದ ಕಾರಣ ಎಸ್‌ಇಸಿಗೆ ಹೇಗ್ ಕನ್ವೆನ್ಷನ್ ಮೂಲಕ ಸಮನ್ಸ್ ತಲುಪಿಸುವುದು ಕಷ್ಟವಾಗಿತ್ತು. ಇದರಿಂದಾಗಿ ಅದು ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್ ಫೆಡರಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಾಮಾನ್ಯ ಪ್ರಕ್ರಿಯೆಯನ್ನು ಬಿಟ್ಟು ಬೇರೆ ಮಾರ್ಗದ ಮೂಲಕ (ಇ-ಮೇಲ್ ಮೂಲಕ) ಸಮನ್ಸ್ ತಲುಪಿಸಲು ಅನುಮತಿ ಕೇಳಿತ್ತು. ಈ ನಡುವೆ ಅದಾನಿಗಳು ಸಮನ್ಸ್ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಧೀಶರು ಈ ಜಂಟಿ ಅರ್ಜಿಯನ್ನು ಅನುಮೋದಿಸಿದರೆ, ಅದಾನಿಯವರಿಗೆ ಎಸ್‌ಇಸಿ ದೂರಿನ ಮೇಲೆ ಪ್ರತಿಕ್ರಿಯಿಸಲು ಅಥವಾ ಆ ಪ್ರಕರಣವನ್ನು ವಜಾಗೊಳಿಸುವಂತೆ ಅರ್ಜಿ ಸಲ್ಲಿಸಲು 90 ದಿನಗಳ ಕಾಲಾವಕಾಶ ಸಿಗಲಿದೆ. ಅದಾನಿಯವರ ಪ್ರತಿಕ್ರಿಯೆಯ ನಂತರ, ಎಸ್‌ಇಸಿ ತನ್ನ ಆಕ್ಷೇಪಣೆ ಅಥವಾ ವಿರೋಧವನ್ನು ಸಲ್ಲಿಸಲು ಮುಂದಿನ 60 ದಿನಗಳ ಕಾಲಾವಕಾಶ ಹೊಂದಿರುತ್ತದೆ. ಎಸ್‌ಇಸಿ ಸಲ್ಲಿಸಿದ ಆಕ್ಷೇಪಣೆಗಳಿಗೆ ಅದಾನಿಯವರು ತಮ್ಮ ಅಂತಿಮ ಪ್ರತ್ಯುತ್ತರವನ್ನು ನೀಡಲು 45 ದಿನಗಳ ಸಮಯವನ್ನು ನಿಗದಿಪಡಿಸಲಾಗಿದೆ.

ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು 2021 ರ ಬಾಂಡ್ ವಿತರಣೆಯ ಸಮಯದಲ್ಲಿ ಅಮೆರಿಕದ ಹೂಡಿಕೆದಾರರಿಗೆ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಸರ್ಕಾರಿ ಅಧಿಕಾರಿಗಳಿಗೆ ಸುಮಾರು $265 ಮಿಲಿಯನ್ (ಅಂದಾಜು ₹2,200 ಕೋಟಿ) ಲಂಚ ನೀಡುವ ಯೋಜನೆಯ ಬಗ್ಗೆ ಹೂಡಿಕೆದಾರರಿಂದ ಮಾಹಿತಿಯನ್ನು ಮರೆಮಾಚಲಾಗಿದೆ. ಹೂಡಿಕೆದಾರರಿಗೆ ಕಂಪನಿಯು ಭ್ರಷ್ಟಾಚಾರ ವಿರೋಧಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ನಂಬಿಸಿ, ಅಕ್ರಮವಾಗಿ ಹಣ ಸಂಗ್ರಹಿಸಲಾಗಿದೆ ಈ ಎಲ್ಲಾ ಆರೋಪಗಳನ್ನು ಮಾಡಿ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (ಎಜಿಇಎಲ್‌) ಮೇಲೆ ಎಸ್‌ಇಸಿ ನವೆಂಬರ್ 2024 ರಲ್ಲಿ ದೂರು ದಾಖಲಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅದಾನಿ ಗ್ರೂಪ್, ಈ ಆರೋಪಗಳು ಆಧಾರರಹಿತವಾಗಿವೆ ಎಂದು ತಿರಸ್ಕರಿಸಿದೆ. ಅಲ್ಲದೆ, ಎಜಿಇಎಲ್‌ ಕಂಪನಿಯು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಮತ್ತು ಕಂಪನಿಯ ಯಾವುದೇ ನಿರ್ದೇಶಕರ ಮೇಲೆ ಲಂಚ ಅಥವಾ ಭ್ರಷ್ಟಾಚಾರದ ಅಪರಾಧ ಆರೋಪಗಳನ್ನು ಹೊರಿಸಲಾಗಿಲ್ಲ ಎಂದು ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...