Homeಮುಖಪುಟಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು.

ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಹಿನ್ನೆಲೆ ಶನಿವಾರ ಸಭೆ ಸೇರಿದ ಎನ್‌ಸಿಪಿ ಶಾಸಕರು, ತಮ್ಮ ಶಾಸಕಾಂಗ ಪಕ್ಷದ ಹೊಸ ನಾಯಕಿಯಾಗಿ ಸುನೇತ್ರಾ ಪವಾರ್ ಅವರನ್ನು ಅವಿರೋಧ ಆಯ್ಕೆ ಮಾಡಿದರು.

ದಕ್ಷಿಣ ಮುಂಬೈನ ವಿಧಾನ ಭವನ ಸಂಕೀರ್ಣದ ನೆಲ ಮಹಡಿಯಲ್ಲಿರುವ ದಿವಂಗತ ಅಜಿತ್ ಪವಾರ್ ಅವರ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ವಿಭಾಗದ ಸಭೆಯಲ್ಲಿ ಎನ್‌ಸಿಪಿ ಹಿರಿಯ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಅವರು ಸುನೇತ್ರಾ ಅವರ ಹೆಸರನ್ನು ಸೂಚಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಅನುಮೋದಿಸಿದರು ಎಂದು ವರದಿಯಾಗಿದೆ.

ಸಭೆಯಲ್ಲಿ ಸುನೇತ್ರಾ ಪವಾರ್ ತಮ್ಮ ಪತಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅವರ ಕಿರಿಯ ಮಗ ಜೈ ಕೂಡ ಹಾಜರಿದ್ದರು. ವಿಧಾನ ಭವನದ ಸಂಕೀರ್ಣಕ್ಕೆ ಆಗಮಿಸಿದಾಗ ಸಚಿವರು ಮತ್ತು ಶಾಸಕರು ತಮ್ಮ ಅಗಲಿದ ನಾಯಕ ಅಜಿತ್ ಪವಾರ್ ಅವರನ್ನು ನೆನೆದು ಭಾವುಕರಾದರು.

2024ರ ಲೋಕಸಭಾ ಚುನಾವಣೆಯವರೆಗೂ ಸುನೇತ್ರಾ ಪವಾರ್ ರಾಜಕೀಯದಿಂದ ದೂರ ಇದ್ದರು. ಮೊದಲ ಬಾರಿಗೆ ಲೋಕಸಭೆಯ ಚುನಾವಣೆಗೆ ಅವರು ಬಾರಾಮತಿಯಿಂದ ಎನ್‌ಸಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಅವರ ಅತ್ತಿಗೆ ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಳೆ ವಿರುದ್ದ ಸೋಲನುಭವಿಸಿದ್ದರು. ಬಳಿಕ ಸುನೇತ್ರಾ ಅವರು ರಾಜ್ಯಸಭೆಗೆ ಆಯ್ಕೆಯಾದರು.

ಸುನೇತ್ರಾ ಪವಾರ್ ಅವರನ್ನು ಪಕ್ಷದ ಶಾಸಕಾಂಗ ನಾಯಕಿಯಾಗಿ ಆಯ್ಕೆ ಮಾಡಿರುವ ಪತ್ರವನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಲ್ಲಿಸಲಾಗಿದ್ದು, ಅವರು ಅದನ್ನು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರವಾನಿಸಿದ್ದಾರೆ ಎಂದು ಎನ್‌ಸಿಪಿ ಕಾರ್ಯಕಾರಿ ಅಧ್ಯಕ್ಷ ಪ್ರಫುಲ್ ಪಟೇಲ್ ತಿಳಿಸಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯ ನಂತರ, ಎರಡು ಎನ್‌ಸಿಪಿ ಬಣಗಳ ಸಂಭಾವ್ಯ ವಿಲೀನದ ಬಗ್ಗೆ ಪ್ರತಿಕ್ರಿಯಿಸಲು ಪಟೇಲ್ ನಿರಾಕರಿಸಿದರು. ಪಕ್ಷದ ತಕ್ಷಣದ ಆದ್ಯತೆಯೆಂದರೆ ಶಾಸಕಾಂಗ ಪಕ್ಷದ ನಾಯಕಿಯ ಆಯ್ಕೆ ಮತ್ತು ಹೊಸ ಉಪಮುಖ್ಯಮಂತ್ರಿಯ ನೇಮಕ ಎಂದು ಪುನರುಚ್ಚರಿಸಿದರು.

ದೇವೇಂದ್ರ ಫಡ್ನವಿಸ್ ಸರ್ಕಾರದಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಮಾತ್ರವಲ್ಲದೆ ಹಣಕಾಸು, ಯೋಜನೆ ಮತ್ತು ಅಬಕಾರಿ ಸೇರಿದಂತೆ ಪ್ರಮುಖ ಖಾತೆಗಳನ್ನು ಹೊಂದಿದ್ದರು. ಬೀಡ್ ಮತ್ತು ಪುಣೆ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿದ್ದರು. ಕ್ರೀಡೆ ಮತ್ತು ಯುವಜನ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಔಕಾಫ್ (ವಕ್ಫ್) ಇಲಾಖೆಗಳ ಹೆಚ್ಚುವರಿ ಉಸ್ತುವಾರಿಯನ್ನು ಹೊಂದಿದ್ದರು. ಸುನೇತ್ರಾ ಪವಾರ್ ಅವರಿಗೆ ಹಂಚಿಕೆಯಾಗಬೇಕಾದ ಖಾತೆಗಳ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

ಎನ್‌ಸಿಪಿ (ಎಸ್‌ಪಿ) ಜೊತೆಗಿನ ವಿಲೀನದ ಬಗ್ಗೆ ಯಾವುದೇ ನಿರ್ಧಾರವನ್ನು ಸುನೇತ್ರಾ ಪವಾರ್ ತೆಗೆದುಕೊಳ್ಳುತ್ತಾರೆ ಎಂದು ಹಿರಿಯ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಹೇಳಿದ್ದಾರೆ. “ಇಂದು ನಮ್ಮ ಕೆಲಸ ಹೊಸ ನಾಯಕಿಯನ್ನು ಆಯ್ಕೆ ಮಾಡುವುದಾಗಿತ್ತು. ಹಾಗಾಗಿ, ಆ ವಿಷಯದ ಬಗ್ಗೆ ಮಾತ್ರ ಶಾಸಕರು ಗಮನಹರಿಸಿದ್ದಾರೆ. ವಿಲೀನದ ಬಗ್ಗೆ ಪಕ್ಷದ ನಾಯಕತ್ವವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಎನ್‌ಸಿಪಿ ಶಾಸಕ ಸಂಗ್ರಾಮ್ ಜಗತಾಪ್ ಹೇಳಿದ್ದಾರೆ.

ಈ ನಡುವೆ ಶಿವಸೇನೆ (ಯುಬಿಟಿ) ವಕ್ತಾರ ಆನಂದ್ ದುಬೆ ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ಭರ್ತಿ ಮಾಡುವ ತುರ್ತು ಅಗತ್ಯವನ್ನು ಪ್ರಶ್ನಿಸಿದ್ದು, ಈ ಆತುರವು ರಾಜ್ಯದಲ್ಲಿ ನೈತಿಕ ಮತ್ತು ರಾಜಕೀಯ ಕಳವಳಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ದುಬೆ, ಹಿರಿಯ ನಾಯಕ ಶರದ್ ಪವಾರ್ ಅವರಿಗೂ ಈ ನಿರ್ಧಾರದ ಬಗ್ಗೆ ತಿಳಿದಿಲ್ಲ. ಹಾಗಾದರೆ ಇಲ್ಲಿ ಏನು ನಡೆಯುತ್ತಿದೆ? ಈ ಆತುರಕ್ಕೆ ಕಾರಣವೇನು? ಮಹಾರಾಷ್ಟ್ರಕ್ಕೆ ಈ ವಿಷಯದಲ್ಲಿ ಖುಷಿಯಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...