Homeಮುಖಪುಟಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು.

ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಹಿನ್ನೆಲೆ ಶನಿವಾರ ಸಭೆ ಸೇರಿದ ಎನ್‌ಸಿಪಿ ಶಾಸಕರು, ತಮ್ಮ ಶಾಸಕಾಂಗ ಪಕ್ಷದ ಹೊಸ ನಾಯಕಿಯಾಗಿ ಸುನೇತ್ರಾ ಪವಾರ್ ಅವರನ್ನು ಅವಿರೋಧ ಆಯ್ಕೆ ಮಾಡಿದರು.

ದಕ್ಷಿಣ ಮುಂಬೈನ ವಿಧಾನ ಭವನ ಸಂಕೀರ್ಣದ ನೆಲ ಮಹಡಿಯಲ್ಲಿರುವ ದಿವಂಗತ ಅಜಿತ್ ಪವಾರ್ ಅವರ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ವಿಭಾಗದ ಸಭೆಯಲ್ಲಿ ಎನ್‌ಸಿಪಿ ಹಿರಿಯ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಅವರು ಸುನೇತ್ರಾ ಅವರ ಹೆಸರನ್ನು ಸೂಚಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಅನುಮೋದಿಸಿದರು ಎಂದು ವರದಿಯಾಗಿದೆ.

ಸಭೆಯಲ್ಲಿ ಸುನೇತ್ರಾ ಪವಾರ್ ತಮ್ಮ ಪತಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅವರ ಕಿರಿಯ ಮಗ ಜೈ ಕೂಡ ಹಾಜರಿದ್ದರು. ವಿಧಾನ ಭವನದ ಸಂಕೀರ್ಣಕ್ಕೆ ಆಗಮಿಸಿದಾಗ ಸಚಿವರು ಮತ್ತು ಶಾಸಕರು ತಮ್ಮ ಅಗಲಿದ ನಾಯಕ ಅಜಿತ್ ಪವಾರ್ ಅವರನ್ನು ನೆನೆದು ಭಾವುಕರಾದರು.

2024ರ ಲೋಕಸಭಾ ಚುನಾವಣೆಯವರೆಗೂ ಸುನೇತ್ರಾ ಪವಾರ್ ರಾಜಕೀಯದಿಂದ ದೂರ ಇದ್ದರು. ಮೊದಲ ಬಾರಿಗೆ ಲೋಕಸಭೆಯ ಚುನಾವಣೆಗೆ ಅವರು ಬಾರಾಮತಿಯಿಂದ ಎನ್‌ಸಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಅವರ ಅತ್ತಿಗೆ ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಳೆ ವಿರುದ್ದ ಸೋಲನುಭವಿಸಿದ್ದರು. ಬಳಿಕ ಸುನೇತ್ರಾ ಅವರು ರಾಜ್ಯಸಭೆಗೆ ಆಯ್ಕೆಯಾದರು.

ಸುನೇತ್ರಾ ಪವಾರ್ ಅವರನ್ನು ಪಕ್ಷದ ಶಾಸಕಾಂಗ ನಾಯಕಿಯಾಗಿ ಆಯ್ಕೆ ಮಾಡಿರುವ ಪತ್ರವನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಲ್ಲಿಸಲಾಗಿದ್ದು, ಅವರು ಅದನ್ನು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರವಾನಿಸಿದ್ದಾರೆ ಎಂದು ಎನ್‌ಸಿಪಿ ಕಾರ್ಯಕಾರಿ ಅಧ್ಯಕ್ಷ ಪ್ರಫುಲ್ ಪಟೇಲ್ ತಿಳಿಸಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯ ನಂತರ, ಎರಡು ಎನ್‌ಸಿಪಿ ಬಣಗಳ ಸಂಭಾವ್ಯ ವಿಲೀನದ ಬಗ್ಗೆ ಪ್ರತಿಕ್ರಿಯಿಸಲು ಪಟೇಲ್ ನಿರಾಕರಿಸಿದರು. ಪಕ್ಷದ ತಕ್ಷಣದ ಆದ್ಯತೆಯೆಂದರೆ ಶಾಸಕಾಂಗ ಪಕ್ಷದ ನಾಯಕಿಯ ಆಯ್ಕೆ ಮತ್ತು ಹೊಸ ಉಪಮುಖ್ಯಮಂತ್ರಿಯ ನೇಮಕ ಎಂದು ಪುನರುಚ್ಚರಿಸಿದರು.

ದೇವೇಂದ್ರ ಫಡ್ನವಿಸ್ ಸರ್ಕಾರದಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಮಾತ್ರವಲ್ಲದೆ ಹಣಕಾಸು, ಯೋಜನೆ ಮತ್ತು ಅಬಕಾರಿ ಸೇರಿದಂತೆ ಪ್ರಮುಖ ಖಾತೆಗಳನ್ನು ಹೊಂದಿದ್ದರು. ಬೀಡ್ ಮತ್ತು ಪುಣೆ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿದ್ದರು. ಕ್ರೀಡೆ ಮತ್ತು ಯುವಜನ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಔಕಾಫ್ (ವಕ್ಫ್) ಇಲಾಖೆಗಳ ಹೆಚ್ಚುವರಿ ಉಸ್ತುವಾರಿಯನ್ನು ಹೊಂದಿದ್ದರು. ಸುನೇತ್ರಾ ಪವಾರ್ ಅವರಿಗೆ ಹಂಚಿಕೆಯಾಗಬೇಕಾದ ಖಾತೆಗಳ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

ಎನ್‌ಸಿಪಿ (ಎಸ್‌ಪಿ) ಜೊತೆಗಿನ ವಿಲೀನದ ಬಗ್ಗೆ ಯಾವುದೇ ನಿರ್ಧಾರವನ್ನು ಸುನೇತ್ರಾ ಪವಾರ್ ತೆಗೆದುಕೊಳ್ಳುತ್ತಾರೆ ಎಂದು ಹಿರಿಯ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಹೇಳಿದ್ದಾರೆ. “ಇಂದು ನಮ್ಮ ಕೆಲಸ ಹೊಸ ನಾಯಕಿಯನ್ನು ಆಯ್ಕೆ ಮಾಡುವುದಾಗಿತ್ತು. ಹಾಗಾಗಿ, ಆ ವಿಷಯದ ಬಗ್ಗೆ ಮಾತ್ರ ಶಾಸಕರು ಗಮನಹರಿಸಿದ್ದಾರೆ. ವಿಲೀನದ ಬಗ್ಗೆ ಪಕ್ಷದ ನಾಯಕತ್ವವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಎನ್‌ಸಿಪಿ ಶಾಸಕ ಸಂಗ್ರಾಮ್ ಜಗತಾಪ್ ಹೇಳಿದ್ದಾರೆ.

ಈ ನಡುವೆ ಶಿವಸೇನೆ (ಯುಬಿಟಿ) ವಕ್ತಾರ ಆನಂದ್ ದುಬೆ ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ಭರ್ತಿ ಮಾಡುವ ತುರ್ತು ಅಗತ್ಯವನ್ನು ಪ್ರಶ್ನಿಸಿದ್ದು, ಈ ಆತುರವು ರಾಜ್ಯದಲ್ಲಿ ನೈತಿಕ ಮತ್ತು ರಾಜಕೀಯ ಕಳವಳಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ದುಬೆ, ಹಿರಿಯ ನಾಯಕ ಶರದ್ ಪವಾರ್ ಅವರಿಗೂ ಈ ನಿರ್ಧಾರದ ಬಗ್ಗೆ ತಿಳಿದಿಲ್ಲ. ಹಾಗಾದರೆ ಇಲ್ಲಿ ಏನು ನಡೆಯುತ್ತಿದೆ? ಈ ಆತುರಕ್ಕೆ ಕಾರಣವೇನು? ಮಹಾರಾಷ್ಟ್ರಕ್ಕೆ ಈ ವಿಷಯದಲ್ಲಿ ಖುಷಿಯಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...