Homeಅಂತರಾಷ್ಟ್ರೀಯಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

- Advertisement -
- Advertisement -

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ ನೆಟ್‌ವರ್ಕಿಂಗ್ ಮತ್ತು ಹೂಡಿಕೆಯ ಚರ್ಚೆಗಳಿಗೆ ಸೀಮಿತವಾಗಿದ್ದರೂ ಸಹ, ಈ ಹಿಂದೆ ಬಿಜೆಪಿ ನೀಡಿದ್ದ ಸ್ಪಷ್ಟನೆಯನ್ನು ಇವು ಪ್ರಶ್ನಿಸುವಂತೆ ಮಾಡಿವೆ. ಪುರಿಯವರ ಹೆಸರನ್ನು ಎಪ್‌ಸ್ಟೀನ್ ಕೇವಲ ‘ಸಾಂದರ್ಭಿಕವಾಗಿ ಬಳಸಿದ್ದಾರೆ’ ಎಂಬ ಬಿಜೆಪಿಯ ವಾದವು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಈ-ಇಮೇಲ್‌ಗಳು ಇಬ್ಬರ ನಡುವೆ ನಿಕಟ ಸಂಪರ್ಕವಿತ್ತೆಂದು ಸೂಚಿಸುತ್ತಿವೆ ಎಂದು ದಿ ವೈರ್ ವರದಿ ಮಾಡಿದೆ.

ಅಮೆರಿಕದ ನ್ಯಾಯ ಇಲಾಖೆಯು ಜನವರಿ 30, 2026ರಂದು ಬಿಡುಗಡೆ ಮಾಡಿರುವ ಸುಮಾರು 30 ಲಕ್ಷ ಪುಟಗಳ ಜೆಫ್ರಿ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹರ್ದೀಪ್ ಸಿಂಗ್ ಪುರಿ ಮತ್ತು ಎಪ್‌ಸ್ಟೀನ್‌ ನಡುವಿನ ಇ-ಮೇಲ್ ಸಂಭಾಷಣೆಗಳು ಲಭ್ಯವಾಗಿವೆ. ಪುರಿಯವರು ಎಪ್‌ಸ್ಟೀನ್ ಅನ್ನು ಆತನ ನ್ಯೂಯಾರ್ಕ್‌ನ ಮನೆಯಲ್ಲಿ ಕನಿಷ್ಠ ಮೂರು ಬಾರಿ (ಫೆಬ್ರವರಿ 4, 2015, ಜನವರಿ 6, 2016 ಮತ್ತು ಮೇ 19, 2017) ಭೇಟಿಯಾಗಿದ್ದರು ಎಂದು ದಾಖಲೆಗಳು ದೃಢಪಡಿಸಿವೆ. ಎಪ್‌ಸ್ಟೀನ್‌ ಲಿಂಕ್ಡ್‌ಇನ್ ಸಹ-ಸಂಸ್ಥಾಪಕ ರೀಡ್ ಹಾಫ್‌ಮನ್ ಸೇರಿದಂತೆ ಸಿಲಿಕಾನ್ ವ್ಯಾಲಿಯ ಪ್ರಮುಖ ಹೂಡಿಕೆದಾರರೊಂದಿಗೆ ಪುರಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಪುರಿಯವರು ಈ ಸಂಭಾಷಣೆಗಳಲ್ಲಿ ಪ್ರಧಾನಿ ಮೋದಿಯವರ ‘ಡಿಜಿಟಲ್ ಇಂಡಿಯಾ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳ ಬಗ್ಗೆ ವಿವರಿಸಿದ್ದರು. ಅಂದಿನ ಸಮಯದಲ್ಲಿ ಪುರಿಯವರು ಯಾವುದೇ ಸಾರ್ವಜನಿಕ ಹುದ್ದೆಯಲ್ಲಿರಲಿಲ್ಲ ಎಂದು ವರದಿ ವಿವರಿಸಿದೆ.

ಈ ಹಿಂದೆ ಬಿಜೆಪಿ ಈ ಸಂಪರ್ಕವನ್ನು ಕೇವಲ ಎಪ್‌ಸ್ಟೀನ್‌ “ಹೆಸರು ಹೇಳಿಕೊಳ್ಳುವಿಕೆ” (name-dropping) ಎಂದು ತಳ್ಳಿಹಾಕಿತ್ತು. ಆದರೆ, ಹೊಸ ಇ-ಮೇಲ್‌ಗಳು ಇಬ್ಬರ ನಡುವೆ ನಿರಂತರ ಮತ್ತು ವ್ಯವಹಾರಿಕ ಪರಿಚಿತತೆ ಇತ್ತೆಂದು ತೋರಿಸುತ್ತಿವೆ. ಎಪ್‌ಸ್ಟೀನ್‌ನ ಇಮೇಲ್‌ಗಳಲ್ಲಿ ಭಾರತದ ಪ್ರಧಾನಿ ಮತ್ತು ಇತರರ ಬಗ್ಗೆ ಇರುವ ಉಲ್ಲೇಖಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ “ಅಪರಾಧಿಯ ನಿರರ್ಥಕ ಮಾತುಗಳು” ಎಂದು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಎಪ್‌ಸ್ಟೀನ್‌ ಜೊತೆ ಇ-ಮೇಲ್ ಸಂಭಾಷಣೆಗಳು ನಡೆದ ಸಮಯದಲ್ಲಿ ಹರ್ದೀಪ್‌ ಸಿಂಗ್ ಪುರಿಯವರು ಯಾವುದೇ ಸಾರ್ವಜನಿಕ ಅಥವಾ ಸರ್ಕಾರಿ ಹುದ್ದೆಯನ್ನು ಹೊಂದಿರಲಿಲ್ಲ. ವೃತ್ತಿಪರ ರಾಜತಾಂತ್ರಿಕರಾಗಿದ್ದ ಅವರು, ಭಾರತೀಯ ವಿದೇಶಾಂಗ ಸೇವೆಯಿಂದ ನಿವೃತ್ತರಾದ ನಂತರ, ನ್ಯೂಯಾರ್ಕ್‌ನಲ್ಲಿರುವ ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ ಎಂಬ ಪ್ರಮುಖ ಥಿಂಕ್-ಟ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು 2014ರಲ್ಲಿ ಬಿಜೆಪಿ ಸೇರಿದರು ಮತ್ತು ಸುಮಾರು ಮೂರು ವರ್ಷಗಳ ನಂತರ, ಅಂದರೆ ಸೆಪ್ಟೆಂಬರ್ 2017ರಲ್ಲಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಸ್ತುತ, ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಬಿಡುಗಡೆಯಾದ ಫೈಲ್‌ಗಳು ಇ-ಮೇಲ್ ವೇಳಾಪಟ್ಟಿಗಳು, ಸಭೆಗಳ ದೃಢೀಕರಣ ಮತ್ತು ಭಾರತದ ಇಂಟರ್ನೆಟ್ ಆರ್ಥಿಕತೆಯ ವ್ಯವಹಾರಿಕ ಅವಕಾಶಗಳ ಬಗ್ಗೆ ನಡೆದ ಗಂಭೀರ ಚರ್ಚೆಗಳನ್ನು ಒಳಗೊಂಡಿವೆ. ಮುಖ್ಯವಾಗಿ, ಈ ಇ-ಮೇಲ್‌ಗಳು ಎಪ್‌ಸ್ಟೀನ್‌ ಭಾಗಿಯಾಗಿದ್ದ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ. ಈ ಸಂಭಾಷಣೆಗಳು ಕೇವಲ ಹೂಡಿಕೆ ಮತ್ತು ವಾಣಿಜ್ಯ ವಿಷಯಗಳಿಗೆ ಮಾತ್ರ ಸೀಮಿತವಾಗಿದ್ದವು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ.

ಜೆಫ್ರಿ ಎಪ್‌ಸ್ಟೀನ್‌ನ ಸಂಪೂರ್ಣ ಕ್ರಿಮಿನಲ್ ಹಿನ್ನೆಲೆ 2018ರ ಸುಮಾರಿಗೆ ಜಗತ್ತಿಗೆ ಬಹಿರಂಗವಾಯಿತು. ಆದರೆ, ಅದಕ್ಕೂ ಮೊದಲೇ ಅಂದರೆ 2008ರಲ್ಲಿಯೇ ಫ್ಲೋರಿಡಾದಲ್ಲಿ ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆಯ ಆರೋಪದ ಮೇಲೆ ಆತ ಶಿಕ್ಷೆಗೆ ಒಳಗಾಗಿದ್ದ. ಆದಾಗ್ಯೂ, ಆತ ಯುಎಸ್‌ನ ಶ್ರೀಮಂತ ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದ್ದ. ಅವರಲ್ಲಿ ಹೆಚ್ಚಿನವರು ಈಗ ಆತನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯವು ಎಪ್‌ಸ್ಟೀನ್ ಒಬ್ಬ ‘ಶಿಕ್ಷೆಗೊಳಗಾದ ಅಪರಾಧಿ’ ಎಂಬ ಅಂಶವನ್ನು ಒತ್ತಿಹೇಳಿದೆ. ಈ ಉಲ್ಲೇಖವು 2008 ರ ಶಿಕ್ಷೆಯಾಗಿದೆ. ಅಪ್ರಾಪ್ತ ವಯಸ್ಕರ ಲೈಂಗಿಕ ಕಳ್ಳಸಾಗಣೆಗಾಗಿ ಫೆಡರಲ್ ಆರೋಪದ ಮೇಲೆ ಜುಲೈ 2019ರಲ್ಲಿ ಎಪ್‌ಸ್ಟೀನ್ ಅನ್ನು ಮತ್ತೆ ಬಂಧಿಸಲಾಗಿತ್ತು. ಇದಾಗಿ, ಒಂದು ತಿಂಗಳಿಗೆ ಆತ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.

“ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖವಾಗಿ ಎಂಬ ವಿಷಯದ ಕುರಿತು ಪ್ರತಿಕ್ರಿಯೆ ಕೋರಿ ನಾವು ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಪರ್ಕಿಸಿದ್ದೆವು, ಈ ವೇಳೆ ಅವರು ಎಪ್‌ಸ್ಟೀನ್ ಜೊತೆಗಿನ ಭೇಟಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಈ ಭೇಟಿಗಳು ಕೇವಲ ವ್ಯವಹಾರಿಕ ಉದ್ದೇಶಕ್ಕೆ ಸೀಮಿತವಾಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿದ್ದ ಎಂಟು ವರ್ಷಗಳ ಅವಧಿಯಲ್ಲಿ ನಾನು ಆತನನ್ನು ಕೇವಲ ಮೂರು ಬಾರಿ ಮಾತ್ರ ಭೇಟಿಯಾಗಿದ್ದೆ. ಈ ಎಲ್ಲಾ ಭೇಟಿಗಳು ತಾನು ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ನಡೆದವು ಎಂದು ಹೇಳಿದ್ದಾರೆ. ಎಪ್‌ಸ್ಟೀನ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಆ ಸಮಯದಲ್ಲಿ ತನಗೆ ಯಾವುದೇ ಅರಿವಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...