Homeಕರ್ನಾಟಕ'ರಾಜಭವನ'ಗಳನ್ನು 'ಲೋಕಭವನ'ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

- Advertisement -
- Advertisement -

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ ಕರ್ನಾಟಕದಲ್ಲಿ ಅದನ್ನು ರಾಜ್ಯಭವನ ಎಂದು ಬದಲಿಸಬೇಕೆಂದೂ ಆಗ್ರಹಿಸಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಜಾಗೃತ ಕರ್ನಾಟಕವು ‘ಭಾರತದ ರಾಜಕೀಯ ವ್ಯವಸ್ಥೆಯನ್ನು ಸಂವಿಧಾನಾತ್ಮಕ ಮೌಲ್ಯಗಳ ತಳಹದಿಯ ಮೇಲೆ ಮರುನಿರ್ಮಿಸಲು ಬದ್ಧವಾಗಿರುವ ರಾಜಕೀಯ ಸಂಘಟನೆಯಾದ ಜಾಗೃತ ಕರ್ನಾಟಕ, ‘ರಾಜಭವನ’ ಎಂಬ ಸ್ಥಾಪಿತ ಸಂವಿಧಾನಾತ್ಮಕ ಪದವನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ತೀವ್ರವಾಗಿ ವಿರೋಧಿಸುತ್ತದೆ’ ಎಂದು ಹೇಳಿದೆ.

ಕೇಂದ್ರ ಸರ್ಕಾರದಿಂದ ಬಂದಿರುವ ಸೂಚನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಕ್ರಮಗಳು ಸಾಂಕೇತಿಕ ಅಥವಾ ಆಡಳಿತಾತ್ಮಕವೆಂದು ತೋರಿಸಲ್ಪಟ್ಟರೂ, ಅದರ ಒಟ್ಟು ಪರಿಣಾಮ ಅಧಿಕೃತ ಸಾರ್ವಜನಿಕ ವಲಯದಲ್ಲಿ ವಿಶೇಷವಾಗಿ ಹಿಂದಿ ಆಡಳಿತ ಭಾಷೆಯಾಗಿರದ ರಾಜ್ಯಗಳಲ್ಲಿ ಹಿಂದಿಯ ಪರೋಕ್ಷ ಹೇರಿಕೆಯಾಗುತ್ತದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ತತ್ತ್ವ ಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಭಾರತೀಯ ಸಂವಿಧಾನವು ಬಹುಭಾಷಾತ್ಮಕ ಸ್ವರೂಪವನ್ನು ಸ್ಪಷ್ಟವಾಗಿ ಒಪ್ಪಿಕೊಂಡಿದೆ. ವಿಧಿ 343 ಹಿಂದಿ ಮತ್ತು ಇಂಗ್ಲಿಷ್ ಅನ್ನು ವ್ಯವಹಾರಿಕ ಭಾಷೆಗಳಾಗಿ ಗುರುತಿಸಿದರೂ, 345 ಮತ್ತು 346 ವಿಧಿಗಳು ಭಾಷಾ ವಿಚಾರದಲ್ಲಿ ರಾಜ್ಯಗಳಿಗೆ ಸ್ವಾಯತ್ತತೆಯನ್ನು ನೀಡುತ್ತವೆ. ಈ ಸಮತೋಲನವೇ ಭಾರತದ ಒಕ್ಕೂಟ ವ್ಯವಸ್ಥೆಯ ಮೂಲಾಧಾರವಾಗಿದೆ.

‘ರಾಜಭವನ’ಗಳನ್ನು ‘ಲೋಕಭವನ’ಗಳಾಗಿ ಮರುನಾಮಕರಣ ಮಾಡುವುದು ಪ್ರತ್ಯೇಕ ಕ್ರಮವಲ್ಲ ಕ್ರಮವಲ್ಲ; ಇದು ಇತ್ತೀಚಿನ ವರ್ಷಗಳಲ್ಲಿ ಕಾಣಿಸುತ್ತಿರುವ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಪ್ರವೃತ್ತಿಯ ಭಾಗವಾಗಿದೆ ಎಂದಿರುವ ಜಾಗೃತ ಕರ್ನಾಟಕ ‘ದೀರ್ಘಕಾಲದ ಇಂಗ್ಲಿಷ್ ಶಾಸನಾತ್ಮಕ ಶೀರ್ಷಿಕೆಗಳನ್ನು ಹಿಂದಿ ಪದಗಳಿಂದ ಬದಲಾಯಿಸುವುದು, ಇಡೀ ದೇಶಕ್ಕೆ ಅನ್ವಯವಾಗುವ ಪ್ರಮುಖ ಕಾನೂನುಗಳನ್ನು ಮುಖ್ಯವಾಗಿ ಹಿಂದಿ ಶೀರ್ಷಿಕೆಗಳಡಿ ಜಾರಿಗೆ ತರುವುದು, ಮತ್ತು ಅಧಿಕೃತ ಪತ್ರವ್ಯವಹಾರಗಳಲ್ಲಿ ಹಿಂದಿಗೆ ಹೆಚ್ಚುತ್ತಿರುವ ಆದ್ಯತೆ-ಇವೆಲ್ಲವೂ ಭಾಷಾ ಸಮಾನತೆಯನ್ನು ದುರ್ಬಲಗೊಳಿಸುತ್ತವೆ’ ಎಂದು ಎಚ್ಚರಿಸಿದೆ.

ಕರ್ನಾಟಕದಲ್ಲಿ, ‘ರಾಜಭವನ’ವನ್ನು ‘ರಾಜ್ಯಭವನ’ ಎಂದು ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿರುವ ಜಾಗೃತ ಕರ್ನಾಟಕ ಸಂಘಟನೆ, ರಾಜ್ಯಪಾಲರ ನಿವಾಸ ಮತ್ತು ಕಚೇರಿ ಸಂಕೀರ್ಣವು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದು, ಅದರ ನಿರ್ವಹಣೆ ಮತ್ತು ವೆಚ್ಚವನ್ನು ರಾಜ್ಯವೇ ಭರಿಸುತ್ತದೆ. ಆದ್ದರಿಂದ ಅದರ ಹೆಸರು ರಾಜ್ಯದ ಭಾಷೆ ಮತ್ತು ಗುರುತನ್ನು ಪ್ರತಿಬಿಂಬಿಸಬೇಕು ಎಂದು ಆಗ್ರಹಿಸಿದೆ. .

ಆಕ್ಷೇಪಾರ್ಹವಾಗಿರುವುದು ಮರುನಾಮಕರಣವಲ್ಲ, ಆದರೆ ಕೇಂದ್ರದಿಂದ ಹೇರಲಾಗುತ್ತಿರುವ ಏಕಸ್ವರೂಪದ ಹಿಂದಿ ನಾಮಕರಣವಾಗಿದೆ. ರಾಜ್ಯಗಳು ತಮ್ಮದೇ ಭಾಷೆಯಲ್ಲಿ ಸೂಕ್ತ ಹೆಸರನ್ನು ಆಯ್ಕೆಮಾಡುವ ಸಂವಿಧಾನಾತ್ಮಕ ಹಕ್ಕು ಹೊಂದಿವೆ ಎಂದಿರುವ ಸಂಘಟನೆ ಮೂರು ಆಗ್ರಹಗಳನ್ನು ರಾಜ್ಯ ಸರ್ಕಾರಗಳ ಮುಂದಿಟ್ಟಿದೆ. 

ಜಾಗೃತ ಕರ್ನಾಟಕ ಸಂಘಟನೆಯ ಆಗ್ರಹಗಳು: 

1. ‘ರಾಜಭವನ’ವನ್ನು ‘ಲೋಕಭವನ’ವಾಗಿ ಮರುನಾಮಕರಣ ಮಾಡುವ ಯಾವುದೇ ಕ್ರಮವನ್ನು ತಡೆಯಬೇಕು.

2. ಮರುನಾಮಕರಣ ಅಗತ್ಯವಿದ್ದಲ್ಲಿ, ರಾಜ್ಯದ ಭಾಷೆಯಲ್ಲೇ ಸೂಕ್ತ ಹೆಸರನ್ನು ಆಯ್ಕೆಮಾಡಬೇಕು.

3. ಭಾಷಾ ಹೇರಿಕೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರಕ್ಕೆ ತಮ್ಮ ಆಕ್ಷೇಪಣೆಯನ್ನು ಅಧಿಕೃತವಾಗಿ ತಿಳಿಸಬೇಕು.

ಭಾರತದ ಐಕ್ಯತೆ ಏಕರೂಪತೆಯಲ್ಲಿ ಅಲ್ಲ, ಹೊಂದಾಣಿಕೆಯಲ್ಲಿ ನೆಲಸಿದೆ. ಭಾಷಾ ಬಹುತ್ವವನ್ನು ರಕ್ಷಿಸುವುದು ಸಂವಿಧಾನದ ಆಶಯವನ್ನು ನಿಜಾರ್ಥದಲ್ಲಿ ಎತ್ತಿ ಹಿಡಿಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....