Homeಕರ್ನಾಟಕ'ರಾಜಭವನ'ಗಳನ್ನು 'ಲೋಕಭವನ'ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

- Advertisement -
- Advertisement -

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ ಕರ್ನಾಟಕದಲ್ಲಿ ಅದನ್ನು ರಾಜ್ಯಭವನ ಎಂದು ಬದಲಿಸಬೇಕೆಂದೂ ಆಗ್ರಹಿಸಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಜಾಗೃತ ಕರ್ನಾಟಕವು ‘ಭಾರತದ ರಾಜಕೀಯ ವ್ಯವಸ್ಥೆಯನ್ನು ಸಂವಿಧಾನಾತ್ಮಕ ಮೌಲ್ಯಗಳ ತಳಹದಿಯ ಮೇಲೆ ಮರುನಿರ್ಮಿಸಲು ಬದ್ಧವಾಗಿರುವ ರಾಜಕೀಯ ಸಂಘಟನೆಯಾದ ಜಾಗೃತ ಕರ್ನಾಟಕ, ‘ರಾಜಭವನ’ ಎಂಬ ಸ್ಥಾಪಿತ ಸಂವಿಧಾನಾತ್ಮಕ ಪದವನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ತೀವ್ರವಾಗಿ ವಿರೋಧಿಸುತ್ತದೆ’ ಎಂದು ಹೇಳಿದೆ.

ಕೇಂದ್ರ ಸರ್ಕಾರದಿಂದ ಬಂದಿರುವ ಸೂಚನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಕ್ರಮಗಳು ಸಾಂಕೇತಿಕ ಅಥವಾ ಆಡಳಿತಾತ್ಮಕವೆಂದು ತೋರಿಸಲ್ಪಟ್ಟರೂ, ಅದರ ಒಟ್ಟು ಪರಿಣಾಮ ಅಧಿಕೃತ ಸಾರ್ವಜನಿಕ ವಲಯದಲ್ಲಿ ವಿಶೇಷವಾಗಿ ಹಿಂದಿ ಆಡಳಿತ ಭಾಷೆಯಾಗಿರದ ರಾಜ್ಯಗಳಲ್ಲಿ ಹಿಂದಿಯ ಪರೋಕ್ಷ ಹೇರಿಕೆಯಾಗುತ್ತದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ತತ್ತ್ವ ಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಭಾರತೀಯ ಸಂವಿಧಾನವು ಬಹುಭಾಷಾತ್ಮಕ ಸ್ವರೂಪವನ್ನು ಸ್ಪಷ್ಟವಾಗಿ ಒಪ್ಪಿಕೊಂಡಿದೆ. ವಿಧಿ 343 ಹಿಂದಿ ಮತ್ತು ಇಂಗ್ಲಿಷ್ ಅನ್ನು ವ್ಯವಹಾರಿಕ ಭಾಷೆಗಳಾಗಿ ಗುರುತಿಸಿದರೂ, 345 ಮತ್ತು 346 ವಿಧಿಗಳು ಭಾಷಾ ವಿಚಾರದಲ್ಲಿ ರಾಜ್ಯಗಳಿಗೆ ಸ್ವಾಯತ್ತತೆಯನ್ನು ನೀಡುತ್ತವೆ. ಈ ಸಮತೋಲನವೇ ಭಾರತದ ಒಕ್ಕೂಟ ವ್ಯವಸ್ಥೆಯ ಮೂಲಾಧಾರವಾಗಿದೆ.

‘ರಾಜಭವನ’ಗಳನ್ನು ‘ಲೋಕಭವನ’ಗಳಾಗಿ ಮರುನಾಮಕರಣ ಮಾಡುವುದು ಪ್ರತ್ಯೇಕ ಕ್ರಮವಲ್ಲ ಕ್ರಮವಲ್ಲ; ಇದು ಇತ್ತೀಚಿನ ವರ್ಷಗಳಲ್ಲಿ ಕಾಣಿಸುತ್ತಿರುವ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಪ್ರವೃತ್ತಿಯ ಭಾಗವಾಗಿದೆ ಎಂದಿರುವ ಜಾಗೃತ ಕರ್ನಾಟಕ ‘ದೀರ್ಘಕಾಲದ ಇಂಗ್ಲಿಷ್ ಶಾಸನಾತ್ಮಕ ಶೀರ್ಷಿಕೆಗಳನ್ನು ಹಿಂದಿ ಪದಗಳಿಂದ ಬದಲಾಯಿಸುವುದು, ಇಡೀ ದೇಶಕ್ಕೆ ಅನ್ವಯವಾಗುವ ಪ್ರಮುಖ ಕಾನೂನುಗಳನ್ನು ಮುಖ್ಯವಾಗಿ ಹಿಂದಿ ಶೀರ್ಷಿಕೆಗಳಡಿ ಜಾರಿಗೆ ತರುವುದು, ಮತ್ತು ಅಧಿಕೃತ ಪತ್ರವ್ಯವಹಾರಗಳಲ್ಲಿ ಹಿಂದಿಗೆ ಹೆಚ್ಚುತ್ತಿರುವ ಆದ್ಯತೆ-ಇವೆಲ್ಲವೂ ಭಾಷಾ ಸಮಾನತೆಯನ್ನು ದುರ್ಬಲಗೊಳಿಸುತ್ತವೆ’ ಎಂದು ಎಚ್ಚರಿಸಿದೆ.

ಕರ್ನಾಟಕದಲ್ಲಿ, ‘ರಾಜಭವನ’ವನ್ನು ‘ರಾಜ್ಯಭವನ’ ಎಂದು ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿರುವ ಜಾಗೃತ ಕರ್ನಾಟಕ ಸಂಘಟನೆ, ರಾಜ್ಯಪಾಲರ ನಿವಾಸ ಮತ್ತು ಕಚೇರಿ ಸಂಕೀರ್ಣವು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದು, ಅದರ ನಿರ್ವಹಣೆ ಮತ್ತು ವೆಚ್ಚವನ್ನು ರಾಜ್ಯವೇ ಭರಿಸುತ್ತದೆ. ಆದ್ದರಿಂದ ಅದರ ಹೆಸರು ರಾಜ್ಯದ ಭಾಷೆ ಮತ್ತು ಗುರುತನ್ನು ಪ್ರತಿಬಿಂಬಿಸಬೇಕು ಎಂದು ಆಗ್ರಹಿಸಿದೆ. .

ಆಕ್ಷೇಪಾರ್ಹವಾಗಿರುವುದು ಮರುನಾಮಕರಣವಲ್ಲ, ಆದರೆ ಕೇಂದ್ರದಿಂದ ಹೇರಲಾಗುತ್ತಿರುವ ಏಕಸ್ವರೂಪದ ಹಿಂದಿ ನಾಮಕರಣವಾಗಿದೆ. ರಾಜ್ಯಗಳು ತಮ್ಮದೇ ಭಾಷೆಯಲ್ಲಿ ಸೂಕ್ತ ಹೆಸರನ್ನು ಆಯ್ಕೆಮಾಡುವ ಸಂವಿಧಾನಾತ್ಮಕ ಹಕ್ಕು ಹೊಂದಿವೆ ಎಂದಿರುವ ಸಂಘಟನೆ ಮೂರು ಆಗ್ರಹಗಳನ್ನು ರಾಜ್ಯ ಸರ್ಕಾರಗಳ ಮುಂದಿಟ್ಟಿದೆ. 

ಜಾಗೃತ ಕರ್ನಾಟಕ ಸಂಘಟನೆಯ ಆಗ್ರಹಗಳು: 

1. ‘ರಾಜಭವನ’ವನ್ನು ‘ಲೋಕಭವನ’ವಾಗಿ ಮರುನಾಮಕರಣ ಮಾಡುವ ಯಾವುದೇ ಕ್ರಮವನ್ನು ತಡೆಯಬೇಕು.

2. ಮರುನಾಮಕರಣ ಅಗತ್ಯವಿದ್ದಲ್ಲಿ, ರಾಜ್ಯದ ಭಾಷೆಯಲ್ಲೇ ಸೂಕ್ತ ಹೆಸರನ್ನು ಆಯ್ಕೆಮಾಡಬೇಕು.

3. ಭಾಷಾ ಹೇರಿಕೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರಕ್ಕೆ ತಮ್ಮ ಆಕ್ಷೇಪಣೆಯನ್ನು ಅಧಿಕೃತವಾಗಿ ತಿಳಿಸಬೇಕು.

ಭಾರತದ ಐಕ್ಯತೆ ಏಕರೂಪತೆಯಲ್ಲಿ ಅಲ್ಲ, ಹೊಂದಾಣಿಕೆಯಲ್ಲಿ ನೆಲಸಿದೆ. ಭಾಷಾ ಬಹುತ್ವವನ್ನು ರಕ್ಷಿಸುವುದು ಸಂವಿಧಾನದ ಆಶಯವನ್ನು ನಿಜಾರ್ಥದಲ್ಲಿ ಎತ್ತಿ ಹಿಡಿಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...