Homeಅಂತರಾಷ್ಟ್ರೀಯಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

- Advertisement -
- Advertisement -

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ ಬಯಲಾದ ಕಾರಣ ‘ಲೇಬರ್ ಪಕ್ಷಕ್ಕೆ ಮತ್ತಷ್ಟು ಮುಜುಗರ ಉಂಟಾಗುವುದು ತನಗೆ ಇಷ್ಟವಿಲ್ಲ’ ಎಂದು ಮ್ಯಾಂಡೆಲ್ಸನ್ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಕಳೆದ ವರ್ಷ ಜೆಫ್ರಿ ಎಪ್‌ಸ್ಟೀನ್‌ ಜೊತೆಗಿನ ಹಳೆಯ ಸಂಬಂಧದ ಹಿನ್ನೆಲೆ ಅಮೆರಿಕದ ಬ್ರಿಟಿಷ್ ರಾಯಭಾರಿ ಹುದ್ದೆಯಿಂದ ವಜಾಗೊಂಡಿದ್ದ ಮಾಜಿ ಕ್ಯಾಬಿನೆಟ್ ಸಚಿವ ಲಾರ್ಡ್ ಮ್ಯಾಂಡೆಲ್ಸನ್ ಅವರ ಹೆಸರು, ಕಳೆದ ಶುಕ್ರವಾರ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಹೊಸ ದಾಖಲೆಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಈ ಹೊಸ ಫೈಲ್‌ಗಳಲ್ಲಿ ಎಪ್‌ಸ್ಟೀನ್ ಮ್ಯಾಂಡೆಲ್ಸನ್ ಅವರಿಗೆ ಹಣಕಾಸಿನ ನೆರವು ನೀಡಿದ್ದ ಬಗ್ಗೆ ಮತ್ತು ಮ್ಯಾಂಡೆಲ್ಸನ್ ಸರ್ಕಾರಿ ನೀತಿಗಳ ಬಗ್ಗೆ ಎಪ್‌ಸ್ಟೀನ್ ಜೊತೆ ಚರ್ಚಿಸಿದ ಬಗ್ಗೆ ಸಂಶಯಾಸ್ಪದ ವಿವರಗಳಿವೆ ಎಂದು ವರದಿಯಾಗಿದೆ.

ಎಪ್‌ಸ್ಟೀನ್ ಕಡೆಯಿಂದ ತನಗೆ ಯಾವುದೇ ಹಣಕಾಸಿನ ನೆರವು ಸಿಕ್ಕಿಲ್ಲ ಎಂದು ಮ್ಯಾಂಡೆಲ್ಸನ್ ವಾದಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ಸದಸ್ಯತ್ವ ತ್ಯಜಿಸುತ್ತಿರುವುದಾಗಿ ಹೇಳಿದ್ದಾರೆ. ಈ ನಡುವೆ ಮ್ಯಾಂಡೆಲ್ಸನ್ ಅವರನ್ನು ಹೌಸ್ ಆಫ್ ಲಾರ್ಡ್ಸ್‌ನಿಂದಲೂ ಹೊರಹಾಕಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ.

ಅಮೆರಿಕದ ನ್ಯಾಯಾಂಗ ಇಲಾಖೆಯು ಇತ್ತೀಚೆಗೆ ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ, ಜೆಫ್ರಿ ಎಪ್‌ಸ್ಟೀನ್ 2003 ಮತ್ತು 2004ರ ಅವಧಿಯಲ್ಲಿ ಲಾರ್ಡ್ ಮ್ಯಾಂಡೆಲ್ಸನ್ ಅವರಿಗೆ ಒಟ್ಟು 75,000 ಡಾಲರ್ (£55,000) ಹಣವನ್ನು ಪಾವತಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಹಣವನ್ನು ತಲಾ 25,000 ಡಾಲರ್ ಮೊತ್ತದ ಮೂರು ಪ್ರತ್ಯೇಕ ಕಂತುಗಳಲ್ಲಿ ವರ್ಗಾಯಿಸಲಾಗಿತ್ತು ಎನ್ನಲಾಗಿದೆ.

ಭಾನುವಾರದಂದು ಲೇಬರ್ ಪಕ್ಷದ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಲಾರ್ಡ್ ಮ್ಯಾಂಡೆಲ್ಸನ್, “ಈ ವಾರಾಂತ್ಯದಲ್ಲಿ ಜೆಫ್ರಿ ಎಪ್‌ಸ್ಟೀನ್ ಸುತ್ತ ಸೃಷ್ಟಿಯಾಗಿರುವ ತೀವ್ರ ಆಕ್ರೋಶದ ವಿದ್ಯಮಾನಗಳೊಂದಿಗೆ ನನ್ನ ಹೆಸರು ಮತ್ತೆ ತಳುಕು ಹಾಕಿಕೊಂಡಿದೆ. ಈ ಬಗ್ಗೆ ನಾನು ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

ಮುಂದುವರಿದು, “ಸುಮಾರು 20 ವರ್ಷಗಳ ಹಿಂದೆ ಎಪ್‌ಸ್ಟೀನ್ ನನಗೆ ಹಣ ಪಾವತಿ ಮಾಡಿದ್ದಾನೆ ಎಂಬ ಆರೋಪಗಳು ಸುಳ್ಳು ಎಂದು ನಾನು ನಂಬುತ್ತೇನೆ. ಈ ಬಗ್ಗೆ ನನ್ನ ಬಳಿ ಯಾವುದೇ ದಾಖಲೆಗಳಿಲ್ಲ ಅಥವಾ ನೆನಪೂ ಇಲ್ಲ. ಆದರೂ ಈ ವಿಚಾರಗಳ ಬಗ್ಗೆ ನಾನು ಸ್ವತಃ ತನಿಖೆ ನಡೆಸುವ ಅಗತ್ಯವಿದೆ” ಎಂದು ಹೇಳಿದ್ದಾರೆ.

“ಈ ತನಿಖೆ ನಡೆಸುವ ಸಮಯದಲ್ಲಿ ಲೇಬರ್ ಪಕ್ಷಕ್ಕೆ ಮತ್ತಷ್ಟು ಮುಜುಗರ ಉಂಟಾಗುವುದು ನನಗೆ ಇಷ್ಟವಿಲ್ಲ, ಆದ್ದರಿಂದ ನಾನು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಮ್ಯಾಂಡೆಲ್ಸನ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಹಿಂದೆಯೇ ಯಾರ ಧ್ವನಿಯನ್ನು ಆಲಿಸಬೇಕಿತ್ತೋ ಅಂತಹ ಮಹಿಳೆಯರು ಮತ್ತು ಹುಡುಗಿಯರಲ್ಲಿ (ಎಪ್‌ಸ್ಟೀನ್‌ ಸಂತ್ರಸ್ತರಲ್ಲಿ) ಮತ್ತೊಮ್ಮೆ ಕ್ಷಮೆಯಾಚಿಸಲು ನಾನು ಈ ಅವಕಾಶವನ್ನು ಬಳಸಿಕೊಳ್ಳಲು ಬಯಸುತ್ತೇನೆ” ಎಂದು ಮ್ಯಾಂಡೆಲ್ಸನ್ ಹೇಳಿದ್ದಾರೆ.

“ನಾನು ನನ್ನ ಜೀವನವನ್ನೇ ಲೇಬರ್ ಪಕ್ಷದ ಮೌಲ್ಯಗಳು ಮತ್ತು ಅದರ ಯಶಸ್ಸಿಗಾಗಿ ಮುಡಿಪಾಗಿಟ್ಟಿದ್ದೇನೆ. ಪಕ್ಷದ ಹಿತದೃಷ್ಟಿಯಿಂದಲೇ ನಾನು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಮ್ಯಾಂಡೆಲ್ಸನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಹೊಸದಾಗಿ ಬಿಡುಗಡೆಯಾದ ದಾಖಲೆಗಳು ಅಧಿಕೃತವೇ ಎಂದು ತನಗೆ ತಿಳಿದಿಲ್ಲ ಎಂದು ಲಾರ್ಡ್ ಮ್ಯಾಂಡೆಲ್ಸನ್ ಭಾನುವಾರ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...