Homeಮುಖಪುಟ'ಖಾಸಗಿ ಮಾಹಿತಿಯ ಕಳ್ಳತನ' : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

- Advertisement -
- Advertisement -

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ವಾಟ್ಸಾಪ್‌ನ ‘ಒಪ್ಪಿಕೊಳ್ಳಿ ಇಲ್ಲವೇ ಬಿಟ್ಟುಬಿಡಿ’ (take it or leave it) ಎಂಬ ವಿವಾದಾತ್ಮಕ ಗೌಪ್ಯತಾ ನೀತಿಯ ವಿರುದ್ಧ ಭಾರತೀಯ ಸ್ಪರ್ಧಾತ್ಮಕ ಆಯೋಗವು (ಸಿಸಿಐ) 213.14 ಕೋಟಿ ರೂಪಾಯಿಗಳ ದಂಡ ವಿಧಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ವಾಟ್ಸಾಪ್ ಮತ್ತು ಮೆಟಾ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.

ಈ ಸಂದರ್ಭದಲ್ಲಿ ನ್ಯಾಯಪೀಠವು, ಬಳಕೆದಾರರಿಗೆ ತಮ್ಮ ವೈಯಕ್ತಿಕ ಡೇಟಾ ಹಂಚಿಕೆಯನ್ನು ನಿರಾಕರಿಸಲು ಯಾವುದೇ ಅರ್ಥಪೂರ್ಣವಾದ ‘ಆಪ್ಟ್-ಔಟ್’ (Opt-out) ಆಯ್ಕೆಯನ್ನು ನೀಡದಿರುವುದನ್ನು ತೀವ್ರವಾಗಿ ಪ್ರಶ್ನಿಸಿತು. ಬಳಕೆದಾರರ ಒಪ್ಪಿಗೆಯಿಲ್ಲದೆ ಅವರ ಡೇಟಾವನ್ನು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳುವ ಈ ನೀತಿಯು ಮಾರುಕಟ್ಟೆಯಲ್ಲಿನ ತನ್ನ ಪ್ರಬಲ ಸ್ಥಾನದ ದುರುಪಯೋಗ ಎಂದು ನ್ಯಾಯಾಲಯದ ಈ ವಿಚಾರಣೆಯು ಎತ್ತಿ ತೋರಿಸಿದೆ.

ಆಯ್ಕೆಯಿಂದ ಹೊರಗುಳಿಯುವ ಪ್ರಶ್ನೆ ಎಲ್ಲಿದೆ? ಇದು ಖಾಸಗಿ ಮಾಹಿತಿಯ ಕಳ್ಳತನ ಮಾಡುವ ಗೌಪ್ಯ ಮಾರ್ಗವಾಗಿದೆ ಎಂದ ಸುಪ್ರೀಂ ಕೋರ್ಟ್, ನಾಗರಿಕರನ್ನು ದೊಡ್ಡ ತಂತ್ರಜ್ಞಾನ ಕಂಪನಿಗಳೊಂದಿಗೆ ಅಸಮಾನ ಒಪ್ಪಂದಗಳಿಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

ಭಾರತದಲ್ಲಿ ಖಾಸಗಿತನದ ಹಕ್ಕನ್ನು ಅತ್ಯಂತ ಕಟ್ಟುನಿಟ್ಟಾಗಿ ಮತ್ತು ಜಾಗರೂಕತೆಯಿಂದ ರಕ್ಷಿಸಲಾಗುತ್ತದೆ ಎಂದ ಸುಪ್ರೀಂ ಕೋರ್ಟ್, ದೊಡ್ಡ ತಂತ್ರಜ್ಞಾನ ಕಂಪನಿಗಳು ರೂಪಿಸುವ ನಿಯಮಗಳು ಮತ್ತು ಷರತ್ತುಗಳು ಎಷ್ಟು ಚಾಣಾಕ್ಷತನದಿಂದ ಕೂಡಿರುತ್ತವೆ ಎಂದರೆ, ಅವುಗಳ ಹಿಂದಿನ ನಿಜವಾದ ಉದ್ದೇಶ ಮತ್ತು ಪರಿಣಾಮಗಳನ್ನು ಸಾಮಾನ್ಯ ಜನರು ಅರ್ಥಮಾಡಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಇಂತಹ ಸಂಕೀರ್ಣ ಭಾಷೆಯ ಒಪ್ಪಂದಗಳ ಮೂಲಕ ಬಳಕೆದಾರರ ಮಾಹಿತಿಯನ್ನು ಪಡೆಯುವುದು ಖಾಸಗಿ ಮಾಹಿತಿಯ ಕಳ್ಳತನಕ್ಕೆ ಸಮನಾದ ಮಾರ್ಗವಾಗಿದೆ ಎಂದು ಕಿಡಿಕಾರಿದೆ.

ಬಳಕೆದಾರರು ಮತ್ತು ದೊಡ್ಡ ತಂತ್ರಜ್ಞಾನ ಕಂಪನಿಗಳ ನಡುವೆ ಸಮಾನವಾದ ಚೌಕಾಶಿ ಶಕ್ತಿ ಇಲ್ಲದಿರುವಾಗ, ಅಂತಹ ಸಂದರ್ಭದಲ್ಲಿ ಗ್ರಾಹಕರ ದತ್ತಾಂಶವನ್ನು ಹಂಚಿಕೊಳ್ಳಲು ಕಂಪನಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಅಥವಾ ಸರಿಯಾದ ಮಾಹಿತಿ ಇಲ್ಲದೆ ಬಳಕೆದಾರರು ನೀಡುವ ಒಪ್ಪಿಗೆಯನ್ನು “ಸ್ವತಂತ್ರ ಅಥವಾ ಪೂರ್ಣ ಮಾಹಿತಿಯುಕ್ತ ಒಪ್ಪಿಗೆ” ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಒತ್ತಿಹೇಳಿದೆ. ಇಂತಹ ಸಂದರ್ಭಗಳಲ್ಲಿ ಪಡೆಯುವ ಒಪ್ಪಿಗೆಯನ್ನು ನ್ಯಾಯಾಲಯವು “ತಯಾರಿಸಿದ ಒಪ್ಪಿಗೆ” ಎಂದು ಕರೆದಿದ್ದು, ಇದು ಸಂವಿಧಾನಬದ್ಧವಾದ ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ಪ್ರಕರಣವು ಕೇವಲ ಕಂಪನಿಗಳ ನಡುವಿನ ವಿವಾದವಲ್ಲ, ಬದಲಾಗಿ ಇಡೀ ದೇಶದ ಜನರ ದತ್ತಾಂಶ ಸುರಕ್ಷತೆಗೆ ಸಂಬಂಧಿಸಿದ ನೀತಿ ರೂಪಿಸುವ ವಿಷಯವಾಗಿರುವುದರಿಂದ, ಸುಪ್ರೀಂ ಕೋರ್ಟ್ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಪ್ರಕರಣದಲ್ಲಿ ಒಂದು ಪಕ್ಷವನ್ನಾಗಿ ಸೇರಿಸಿಕೊಂಡಿದೆ. ಇದರ ಮೂಲಕ ತಂತ್ರಜ್ಞಾನ ಕಂಪನಿಗಳ ಖಾಸಗಿ ನೀತಿಗಳು ರಾಷ್ಟ್ರ ಮಟ್ಟದ ದತ್ತಾಂಶ ಸಂರಕ್ಷಣಾ ಕಾನೂನುಗಳ ಮೇಲೆ ಬೀರುವ ವ್ಯಾಪಕ ಪರಿಣಾಮಗಳನ್ನು ಚರ್ಚಿಸಲು ನ್ಯಾಯಾಲಯ ನಿರ್ಧರಿಸಿದೆ. ಸರ್ಕಾರದ ಭಾಗವಹಿಸುವಿಕೆಯು ಈ ಪ್ರಕರಣದಲ್ಲಿ ಸಮಗ್ರವಾದ ಮತ್ತು ಭದ್ರವಾದ ನೀತಿಗಳನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ನ್ಯಾಯಾಲಯ ಭಾವಿಸಿದೆ.

ಫೆಬ್ರವರಿ 9 ರಂದು ಪ್ರಕರಣದಲ್ಲಿ ಮಧ್ಯಂತರ ಆದೇಶಗಳನ್ನು ಹೊರಡಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...