Homeಮುಖಪುಟ'ಖಾಸಗಿ ಮಾಹಿತಿಯ ಕಳ್ಳತನ' : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

- Advertisement -
- Advertisement -

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ವಾಟ್ಸಾಪ್‌ನ ‘ಒಪ್ಪಿಕೊಳ್ಳಿ ಇಲ್ಲವೇ ಬಿಟ್ಟುಬಿಡಿ’ (take it or leave it) ಎಂಬ ವಿವಾದಾತ್ಮಕ ಗೌಪ್ಯತಾ ನೀತಿಯ ವಿರುದ್ಧ ಭಾರತೀಯ ಸ್ಪರ್ಧಾತ್ಮಕ ಆಯೋಗವು (ಸಿಸಿಐ) 213.14 ಕೋಟಿ ರೂಪಾಯಿಗಳ ದಂಡ ವಿಧಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ವಾಟ್ಸಾಪ್ ಮತ್ತು ಮೆಟಾ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.

ಈ ಸಂದರ್ಭದಲ್ಲಿ ನ್ಯಾಯಪೀಠವು, ಬಳಕೆದಾರರಿಗೆ ತಮ್ಮ ವೈಯಕ್ತಿಕ ಡೇಟಾ ಹಂಚಿಕೆಯನ್ನು ನಿರಾಕರಿಸಲು ಯಾವುದೇ ಅರ್ಥಪೂರ್ಣವಾದ ‘ಆಪ್ಟ್-ಔಟ್’ (Opt-out) ಆಯ್ಕೆಯನ್ನು ನೀಡದಿರುವುದನ್ನು ತೀವ್ರವಾಗಿ ಪ್ರಶ್ನಿಸಿತು. ಬಳಕೆದಾರರ ಒಪ್ಪಿಗೆಯಿಲ್ಲದೆ ಅವರ ಡೇಟಾವನ್ನು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳುವ ಈ ನೀತಿಯು ಮಾರುಕಟ್ಟೆಯಲ್ಲಿನ ತನ್ನ ಪ್ರಬಲ ಸ್ಥಾನದ ದುರುಪಯೋಗ ಎಂದು ನ್ಯಾಯಾಲಯದ ಈ ವಿಚಾರಣೆಯು ಎತ್ತಿ ತೋರಿಸಿದೆ.

ಆಯ್ಕೆಯಿಂದ ಹೊರಗುಳಿಯುವ ಪ್ರಶ್ನೆ ಎಲ್ಲಿದೆ? ಇದು ಖಾಸಗಿ ಮಾಹಿತಿಯ ಕಳ್ಳತನ ಮಾಡುವ ಗೌಪ್ಯ ಮಾರ್ಗವಾಗಿದೆ ಎಂದ ಸುಪ್ರೀಂ ಕೋರ್ಟ್, ನಾಗರಿಕರನ್ನು ದೊಡ್ಡ ತಂತ್ರಜ್ಞಾನ ಕಂಪನಿಗಳೊಂದಿಗೆ ಅಸಮಾನ ಒಪ್ಪಂದಗಳಿಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

ಭಾರತದಲ್ಲಿ ಖಾಸಗಿತನದ ಹಕ್ಕನ್ನು ಅತ್ಯಂತ ಕಟ್ಟುನಿಟ್ಟಾಗಿ ಮತ್ತು ಜಾಗರೂಕತೆಯಿಂದ ರಕ್ಷಿಸಲಾಗುತ್ತದೆ ಎಂದ ಸುಪ್ರೀಂ ಕೋರ್ಟ್, ದೊಡ್ಡ ತಂತ್ರಜ್ಞಾನ ಕಂಪನಿಗಳು ರೂಪಿಸುವ ನಿಯಮಗಳು ಮತ್ತು ಷರತ್ತುಗಳು ಎಷ್ಟು ಚಾಣಾಕ್ಷತನದಿಂದ ಕೂಡಿರುತ್ತವೆ ಎಂದರೆ, ಅವುಗಳ ಹಿಂದಿನ ನಿಜವಾದ ಉದ್ದೇಶ ಮತ್ತು ಪರಿಣಾಮಗಳನ್ನು ಸಾಮಾನ್ಯ ಜನರು ಅರ್ಥಮಾಡಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಇಂತಹ ಸಂಕೀರ್ಣ ಭಾಷೆಯ ಒಪ್ಪಂದಗಳ ಮೂಲಕ ಬಳಕೆದಾರರ ಮಾಹಿತಿಯನ್ನು ಪಡೆಯುವುದು ಖಾಸಗಿ ಮಾಹಿತಿಯ ಕಳ್ಳತನಕ್ಕೆ ಸಮನಾದ ಮಾರ್ಗವಾಗಿದೆ ಎಂದು ಕಿಡಿಕಾರಿದೆ.

ಬಳಕೆದಾರರು ಮತ್ತು ದೊಡ್ಡ ತಂತ್ರಜ್ಞಾನ ಕಂಪನಿಗಳ ನಡುವೆ ಸಮಾನವಾದ ಚೌಕಾಶಿ ಶಕ್ತಿ ಇಲ್ಲದಿರುವಾಗ, ಅಂತಹ ಸಂದರ್ಭದಲ್ಲಿ ಗ್ರಾಹಕರ ದತ್ತಾಂಶವನ್ನು ಹಂಚಿಕೊಳ್ಳಲು ಕಂಪನಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಅಥವಾ ಸರಿಯಾದ ಮಾಹಿತಿ ಇಲ್ಲದೆ ಬಳಕೆದಾರರು ನೀಡುವ ಒಪ್ಪಿಗೆಯನ್ನು “ಸ್ವತಂತ್ರ ಅಥವಾ ಪೂರ್ಣ ಮಾಹಿತಿಯುಕ್ತ ಒಪ್ಪಿಗೆ” ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಒತ್ತಿಹೇಳಿದೆ. ಇಂತಹ ಸಂದರ್ಭಗಳಲ್ಲಿ ಪಡೆಯುವ ಒಪ್ಪಿಗೆಯನ್ನು ನ್ಯಾಯಾಲಯವು “ತಯಾರಿಸಿದ ಒಪ್ಪಿಗೆ” ಎಂದು ಕರೆದಿದ್ದು, ಇದು ಸಂವಿಧಾನಬದ್ಧವಾದ ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ಪ್ರಕರಣವು ಕೇವಲ ಕಂಪನಿಗಳ ನಡುವಿನ ವಿವಾದವಲ್ಲ, ಬದಲಾಗಿ ಇಡೀ ದೇಶದ ಜನರ ದತ್ತಾಂಶ ಸುರಕ್ಷತೆಗೆ ಸಂಬಂಧಿಸಿದ ನೀತಿ ರೂಪಿಸುವ ವಿಷಯವಾಗಿರುವುದರಿಂದ, ಸುಪ್ರೀಂ ಕೋರ್ಟ್ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಪ್ರಕರಣದಲ್ಲಿ ಒಂದು ಪಕ್ಷವನ್ನಾಗಿ ಸೇರಿಸಿಕೊಂಡಿದೆ. ಇದರ ಮೂಲಕ ತಂತ್ರಜ್ಞಾನ ಕಂಪನಿಗಳ ಖಾಸಗಿ ನೀತಿಗಳು ರಾಷ್ಟ್ರ ಮಟ್ಟದ ದತ್ತಾಂಶ ಸಂರಕ್ಷಣಾ ಕಾನೂನುಗಳ ಮೇಲೆ ಬೀರುವ ವ್ಯಾಪಕ ಪರಿಣಾಮಗಳನ್ನು ಚರ್ಚಿಸಲು ನ್ಯಾಯಾಲಯ ನಿರ್ಧರಿಸಿದೆ. ಸರ್ಕಾರದ ಭಾಗವಹಿಸುವಿಕೆಯು ಈ ಪ್ರಕರಣದಲ್ಲಿ ಸಮಗ್ರವಾದ ಮತ್ತು ಭದ್ರವಾದ ನೀತಿಗಳನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ನ್ಯಾಯಾಲಯ ಭಾವಿಸಿದೆ.

ಫೆಬ್ರವರಿ 9 ರಂದು ಪ್ರಕರಣದಲ್ಲಿ ಮಧ್ಯಂತರ ಆದೇಶಗಳನ್ನು ಹೊರಡಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...