Homeಕರ್ನಾಟಕ‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ ‘ಲ್ಯಾಂಡ್ ಲಾರ್ಡ್’ ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿದರು. 

ಫೆಬ್ರವರಿ 3, ಮಂಗಳವಾರದಂದು ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿದ ತಂಡ ಮನವಿ ಪತ್ರ ನೀಡಿತು. 

ಪತ್ರದಲ್ಲಿ ಇತ್ತೀಚೆಗೆ ಬಿಡುಗಡೆಯಾದ ನಿರ್ದೇಶಕ ಜಡೆಶ್ ಕೆ. ಹಂಪಿ ಅವರ ದುನಿಯಾವಿಜಯ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಕನ್ನಡ ಚಲನಚಿತ್ರವು ಕೇವಲ ಮನರಂಜನೆಯ ಉದ್ದೇಶವಲ್ಲದೆ, ಭೂಮಿ-ಜಾತಿ-ಶ್ರಮ-ಮಾನವ ಗೌರವ ಎಂಬ ಮೂಲಭೂತ ಸಾಮಾಜಿಕ ಪ್ರಶ್ನೆಗಳನ್ನು ಗಂಭೀರವಾಗಿ ಸ್ಪರ್ಶಿಸುವ ಮಹತ್ವದ ಸಾಂಸ್ಕೃತಿಕ ಸಿನಿಮಾವಾಗಿದೆ ಎಂದಿರುವ ಸಂಘಟನೆ ಈ ಚಿತ್ರವು ಜಮೀನ್ದಾರಿ ವ್ಯವಸ್ಥೆಯ ಅವಶೇಷಗಳು, ಭೂಮಿಯಿಲ್ಲದ ಕಾರ್ಮಿಕರ ದೀರ್ಘಕಾಲದ ಹೋರಾಟ, ದಲಿತ-ಅಂಚಿನ ಸಮುದಾಯಗಳ ಬದುಕಿನ ಸಂಕಷ್ಟಗಳು ಮತ್ತು ಸಂವಿಧಾನವು ಪ್ರತಿಪಾದಿಸುವ ಸಮಾನತೆ, ಸ್ವಾತಂತ್ರ್ಯ, ಸಹೋದರತ್ನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ತಲುಪಿಸುವ ಪ್ರಯತ್ನವಾಗಿದೆ. ಇಂತಹ ವಿಷಯಾಧಾರಿತ ಚಿತ್ರಗಳು ಸಮಾಜದಲ್ಲಿ ಸಂವಿಧಾನಾತ್ಮಕ ಜಾಗೃತಿ ಮೂಡಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಲು ಅತ್ಯಂತ ಅಗತ್ಯವಾಗಿವೆ ಎಂದು ಹೇಳಿದೆ. 

ಮುಖ್ಯವಾಹಿನಿ ಕನ್ನಡ ಸಿನೆಮಾದಲ್ಲಿ ಅಪರೂಪಕ್ಕೆ ಮಾತ್ರ ಕಾಣಿಸುವ ಈ ರೀತಿಯ ಸಾಮಾಜಿಕ ಬದ್ಧತೆ ಹೊಂದಿರುವ ಚಿತ್ರಗಳಿಗೆ ಸರ್ಕಾರದಿಂದ ಪ್ರೋತ್ಸಾಹ ದೊರಕುವುದು ಸೃಜನಶೀಲತೆಗೂ, ಸಾರ್ವಜನಿಕ ಹಿತಾಸಕ್ತಿಗೂ ಅನುಕೂಲಕರವಾಗುತ್ತದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳು, ವಿದ್ಯಾರ್ಥಿಗಳು, ಕಾರ್ಮಿಕ ವರ್ಗ ಹಾಗೂ ಯುವಜನತೆಗೆ ಈ ಚಿತ್ರದ ಸಂದೇಶ ತಲುಪಲು ಸಂಪೂರ್ಣ ಮನರಂಜನಾ ತೆರಿಗೆ ವಿನಾಯಿತಿ ಮಹತ್ವದ ಪಾತ್ರ ವಹಿಸುತ್ತದೆ.

ಆದುದರಿಂದ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಚಿಂತನೆಗೆ ಬದ್ಧವಾದ ‘ಲ್ಯಾಂಡ್ ಲಾರ್ಡ್’ ಕನ್ನಡ ಚಲನಚಿತ್ರಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕೆಂದು ವಿನಮ್ರವಾಗಿ ಮನು ಮಾಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿತ್ತು. 

ಇನ್ನು ಡಿಎಸ್ಎಸ್ ನಾಯಕರು ಮತ್ತು ದಲಿತ ಹೋರಾಟಗಾರರ ಮನವಿಗೆ ಸ್ಪಂದಿಸಿರುವ ಸಿದ್ದರಾಮಯ್ಯ ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ.  ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿರುವ ಅವರು ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ‘ಲ್ಯಾಂಡ್ ಲಾರ್ಡ್’ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ’ ಎಂದಿದ್ದಾರೆ. 

ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, ಹಿರಿಯ ಕವಿ ಸುಬ್ಬು ಹೊಲೆಯಾರ್, ಗೊಲ್ಲಹಳ್ಳಿ ಶಿವಪ್ರಸಾದ್, ಹುಲಿಕುಂಟೆ ಮೂರ್ತಿ, ಚಂದ್ರು ತರಹುಣಸೆ, ರವಿ ಈಚಲಮರ, ವಿಜಯಕುಮಾರ್ ಸೋನಾರೆ ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...