Homeಮುಖಪುಟ'ರಾಜ್ಯವನ್ನು ನಿರ್ಲಕ್ಷಿಸಲಾಗಿದೆ' : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು ‘ನಿರ್ಲಕ್ಷಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ ಪಾಲನ್ನು ನೀಡದಿರುವುದು ಈ ನಿರ್ಣಯಕ್ಕೆ ಮುಖ್ಯ ಕಾರಣವಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಮತ್ತು ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಆರ್ಥಿಕ ನೆರವು ಹಾಗೂ ಯೋಜನೆಗಳನ್ನು ಮಂಜೂರು ಮಾಡಬೇಕು ಎಂದು ನಿರ್ಣಯದ ಮೂಲಕ ಕೇರಳ ಸರ್ಕಾರ ಒತ್ತಾಯಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಆದರೆ, ಈ ಸಂದರ್ಭದಲ್ಲಿ ವಿರೋಧ ಪಕ್ಷವಾದ ಯುಡಿಎಫ್ ಮೈತ್ರಿಕೂಟದ ಶಾಸಕರು ಸದನದಲ್ಲಿ ಹಾಜರಿರಲಿಲ್ಲ. ಶಬರಿಮಲೆ ಚಿನ್ನದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದರಿಂದ, ಅವರ ಅನುಪಸ್ಥಿತಿಯಲ್ಲಿಯೇ ನಿರ್ಣಯ ಕೈಗೊಳ್ಳಲಾಯಿತು. ಕೇಂದ್ರ ಬಜೆಟ್‌ನಲ್ಲಿ ಕೇರಳಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸುವ ಈ ನಿರ್ಣಯಕ್ಕೆ ಆಡಳಿತ ಪಕ್ಷದ ಸದಸ್ಯರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್‌ನಲ್ಲಿ ಕಡೆಗಣಿಸಲಾದ ಕೇರಳದ ಪ್ರಮುಖ ಬೇಡಿಕೆಗಳ ಮೇಲೆ ಈ ನಿರ್ಣಯವು ಬೆಳಕು ಚೆಲ್ಲಿದೆ. ವಿಶೇಷವಾಗಿ ರಾಜ್ಯದಲ್ಲಿ ‘ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ (ಎಮ್ಸ್‌) ಸ್ಥಾಪನೆ ಮತ್ತು ರಾಜ್ಯಾದಾದ್ಯಂತ ಸಂಚರಿಸುವ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ನೀಡಬೇಕೆಂಬ ದೀರ್ಘಕಾಲದ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ನಿರ್ಲಕ್ಷಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರವು ‘ಸಹಕಾರ ಒಕ್ಕೂಟ ವ್ಯವಸ್ಥೆ’ಗೆ ಗೌರವ ನೀಡಬೇಕು ಮತ್ತು ಕೇರಳದ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಲಾಗಿದೆ.

ಕೇರಳ ಸರ್ಕಾರವು ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಏಮ್ಸ್ ಸ್ಥಾಪನೆಗಾಗಿ ಕೇಂದ್ರವನ್ನು ಒತ್ತಾಯಿಸುತ್ತಿದೆ. ಈ ಉದ್ದೇಶಕ್ಕಾಗಿ ಈಗಾಗಲೇ ಜಮೀನನ್ನು ಗುರುತಿಸಿ, ಆರಂಭಿಕ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದರೂ, ಕೇಂದ್ರ ಸರ್ಕಾರವು ಈವರೆಗೆ ಯಾವುದೇ ಸಕಾರಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ನಿರ್ಣಯದಲ್ಲಿ ವಿಷಾದ ವ್ಯಕ್ತಪಡಿಸಲಾಗಿದೆ.

ಅಲ್ಲದೆ, ಕಾಸರಗೋಡಿನಿಂದ ತಿರುವನಂತಪುರದವರೆಗೆ 573 ಕಿ.ಮೀ. ವ್ಯಾಪ್ತಿಯಲ್ಲಿ ಉದ್ದೇಶಿತ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ಕೋರಲಾಗಿದೆ. ಪ್ರಸ್ತುತ ಈ ದೂರವನ್ನು ಕ್ರಮಿಸಲು ಬೇಕಾದ 13 ಗಂಟೆಗಳ ಸಮಯವನ್ನು ಗಣನೀಯವಾಗಿ ಕಡಿತಗೊಳಿಸಿ, ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ವೇಗ ನೀಡಲು ಈ ಯೋಜನೆ ಅತ್ಯಂತ ಮಹತ್ವದ್ದಾಗಿದೆ ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.

ಪಾಲಕ್ಕಾಡ್‌ನಲ್ಲಿ ಬಹಳ ಹಿಂದಿನಿಂದಲೂ ಬೇಡಿಕೆಯಿರುವ ಕೋಚ್ ಫ್ಯಾಕ್ಟರಿ ಯೋಜನೆಯನ್ನು ಕೇಂದ್ರವು ಕಡೆಗಣಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ವಿಳಿಂಜಂ ಅಂತರಾಷ್ಟ್ರೀಯ ಬಂದರು ಯೋಜನೆಗೆ ಯಾವುದೇ ಷರತ್ತುಗಳಿಲ್ಲದ ‘ವಯಬಿಲಿಟಿ ಗ್ಯಾಪ್ ಫಂಡಿಂಗ್’ (VGF) ಒದಗಿಸುವಂತೆ ಕೇರಳ ಸರ್ಕಾರ ಒತ್ತಾಯಿಸಿದೆ. ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿದೇಶಿ ವಿಮಾನಯಾನ ಸಂಸ್ಥೆಗಳ ಸಂಚಾರಕ್ಕೆ ಅನುವು ಮಾಡಿಕೊಡುವ ‘ಪಾಯಿಂಟ್ ಆಫ್ ಕಾಲ್’ (Point-of-call) ಸೌಲಭ್ಯವನ್ನು ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ವಯನಾಡ್ ಭೂಕುಸಿತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಕೇಂದ್ರ ಸರ್ಕಾರವು ವಿಶೇಷ ಆರ್ಥಿಕ ನೆರವು ಅಥವಾ ಪರಿಹಾರ ಪ್ಯಾಕೇಜ್ ನೀಡದೆ ಇರುವುದನ್ನು ನಿರ್ಣಯವು ಬಲವಾಗಿ ಖಂಡಿಸಿದೆ. ಕೇಂದ್ರದ ನೀತಿಗಳಿಂದಾಗಿ ಕೇರಳಕ್ಕೆ ಬರಬೇಕಿದ್ದ ಸುಮಾರು 53,000 ಕೋಟಿ ರೂಪಾಯಿ ಆದಾಯ ಕೊರತೆ ಅನುದಾನವು ಕಡಿತಗೊಳ್ಳುವ ಭೀತಿಯಿದೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಒಟ್ಟಾರೆಯಾಗಿ, ಈ ಎಲ್ಲಾ ಯೋಜನೆಗಳನ್ನು ಕಡೆಗಣಿಸಿರುವುದು ‘ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ’ ಮಾಡುವ ಅವಮಾನ ಎಂದು ನಿರ್ಣಯವು ಹೇಳಿದೆ.

ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGS) ಸ್ಥಗಿತಗೊಳಿಸಿ, ಅದರ ಬದಲಿಗೆ ‘ವಿಬಿ-ಜಿ ರಾಮ್‌ ಜಿ’ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ರಾಜ್ಯಕ್ಕೆ ಸಿಗುತ್ತಿದ್ದ ಕೇಂದ್ರದ ನೆರವು ಶೇ. 60 ರಷ್ಟು ಕಡಿತಗೊಂಡಿದೆ. ಈ ಹಿಂದೆ ಯೋಜನೆಯಡಿ ಕೇರಳಕ್ಕೆ ಸಿಗುತ್ತಿದ್ದ 88,000 ಕೋಟಿ ರೂಪಾಯಿ ಮೊತ್ತವು ಈಗ ಕೇವಲ 30,000 ಕೋಟಿಗೆ ರೂ.ಗೆ ಇಳಿದಿದೆ ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

ಅಲ್ಲದೆ, ಕೇಂದ್ರ ಸರ್ಕಾರವು ಹೇರುತ್ತಿರುವ ಕಟ್ಟುನಿಟ್ಟಿನ ಆರ್ಥಿಕ ನಿರ್ಬಂಧಗಳಿಂದಾಗಿ (Fiscal curbs),15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಈ ಹಿಂದೆ ಹಂಚಿಕೆಯಾಗಿದ್ದ ಸುಮಾರು 53,000 ಕೋಟಿ ರೂ. ಹಣದಿಂದ ಕೇರಳ ವಂಚಿತವಾಗುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕೇಂದ್ರದ ಇಂತಹ ಹಣಕಾಸು ನೀತಿಗಳು ರಾಜ್ಯದ ಅಭಿವೃದ್ಧಿ ಕುಂಠಿತಗೊಳಿಸುತ್ತಿವೆ ಎಂದು ನಿರ್ಣಯವು ಪ್ರತಿಪಾದಿಸಿದೆ.

ವಿಧಾನಸಭೆಯು ಅಂಗೀಕರಿಸಿದ ಈ ನಿರ್ಣಯವು ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು “ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ ಮಾಡಿದ ಅವಮಾನ” ಎಂದು ಬಣ್ಣಿಸಿದೆ. ಕೇವಲ ಆರ್ಥಿಕ ಅಸಮಾನತೆಯಷ್ಟೇ ಅಲ್ಲದೆ, ಇದು ರಾಜ್ಯದ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ನಿರ್ಣಯ ಪ್ರತಿಪಾದಿಸಿದೆ. ಕೇರಳಕ್ಕೆ ನ್ಯಾಯ ಒದಗಿಸಲು ಮತ್ತು ರಾಜ್ಯದ ಸಮಾನ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಎಂದು ಈ ನಿರ್ಣಯದ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...