Homeದಲಿತ್ ಫೈಲ್ಸ್ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

- Advertisement -
- Advertisement -

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ ತಿಳಿಯುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ಶಿವಮತಿ 19 ವರ್ಷ ವಯಸ್ಸಿನವಳಾಗಿದ್ದು, ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದಳು. ಆಕೆ ಪ್ರಬಲಜಾತಿ ಕುಟುಂಬಕ್ಕೆ ಸೇರಿದ್ದು, ಮೊಬೈಲ್ ಫೋನ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ದಲಿತ ವ್ಯಕ್ತಿ ಅನಂತಕೃಷ್ಣನ್ ಅ ವರನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ತಿರುನಲ್ವೇಲಿಯ ಪೆಟ್ಟೈಪುಲಿ ಪ್ರದೇಶದಲ್ಲಿ ಶಿವಮತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಶಿವಮತಿಯ ಕುಟುಂಬವು ಆಕೆಯ ಅಂತರ್ಜಾತಿ ಸಂಬಂಧವನ್ನು ಬಲವಾಗಿ ವಿರೋಧಿಸಿತು. ನಾವು ಮದುವೆಯಾಗಲು ಯೋಚಿಸಿದ್ದೆವು ಎಂದು ಅನಂತಕೃಷ್ಣನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ದಂಪತಿಗಳು ಫೆಬ್ರವರಿ 6 ರಂದು ಮದುವೆಯಾಗಲು ನಿರ್ಧರಿಸಿ, ಈಗಾಗಲೇ ಮದುವೆ ಪ್ರಮಾಣಪತ್ರವನ್ನು ಪಡೆಯುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು. ಯುವಕನ ಪ್ರಕಾರ, ಕುಟುಂಬದ ವಿರೋಧವು ಸಂಪೂರ್ಣವಾಗಿ ಜಾತಿಯನ್ನು ಆಧರಿಸಿದೆ.

ಶಿವಮತಿಗೆ ಆಕೆಯ ಚಿಕ್ಕಪ್ಪ ಬೆದರಿಕೆ ಹಾಕಿದ್ದರು, ಮದುವೆ ಪ್ರಕ್ರಿಯೆ ಮುಂದುವರಿಸಿದರೆ ಕೊಲ್ಲುವುದಾಗಿ ಎಚ್ಚರಿಸಿದ್ದರು ಎಂದು ಅವರು ಆರೋಪಿಸಿದ್ದಾರೆ. ಸಂಪರ್ಕ ಕಡಿತಗೊಳಿಸಲು ಆಕೆಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದಾರೆ, ಶಿವಮತಿ ಮನೆಯಲ್ಲಿ ಹಲ್ಲೆ ನಡೆಸಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಅನಂತಕೃಷ್ಣನ್ ಅವರ ಕುಟುಂಬದವರು ಹೇಳಿದ್ದಾರೆ.

ಈ ಆರೋಪಗಳು ಗಂಭೀರವಾಗಿದ್ದರೂ, ಆರಂಭಿಕ ವಿಚಾರಣೆ ಮತ್ತು ಸ್ಥಳದಿಂದ ಬಂದ ಪುರಾವೆಗಳು ಶಿವಮತಿ ಆತ್ಮಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು ಸೂಚಿಸುತ್ತವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಮರಣೋತ್ತರ ವರದಿಯ ನಂತರವೇ ನಾವು ಎಲ್ಲವನ್ನೂ ಖಚಿತಪಡಿಸುತ್ತೇವೆ. ಎಲ್ಲಾ ಕೋನಗಳನ್ನು ತನಿಖೆ ಮಾಡಲಾಗುತ್ತಿದೆ” ಎಂದು ಹೇಳಿದರು. ಶಿವಮತಿಯ ಕುಟುಂಬ ಸದಸ್ಯರು, ಸ್ನೇಹಿತರಿಂದ ಹೇಳಿಕೆಗಳನ್ನು ಪ್ರಸ್ತುತ ದಾಖಲಿಸಲಾಗುತ್ತಿದೆ.

ಪ್ರಕರಣದ ಸೂಕ್ಷ್ಮತೆ ಮತ್ತು ಜಾತಿ ಸಂಬಂಧಿತ ಆರೋಪಗಳನ್ನು ಪರಿಗಣಿಸಿ, ತನಿಖೆಯನ್ನು ಸಹಾಯಕ ಪೊಲೀಸ್ ಆಯುಕ್ತರಿಗೆ ವರ್ಗಾಯಿಸಲಾಗಿದೆ. ಬೆದರಿಕೆ, ಒತ್ತಡ ಅಥವಾ ಕಿರುಕುಳದಿಂದಾಗಿ ಶಿವಮತಿ ಅವರ ಜೀವ ತೆಗೆಯಲು ಪ್ರೇರೇಪಿಸಲಾಗಿದೆ ಎಂಬುದಕ್ಕೆ ಪುರಾವೆಗಳು ಹೊರಬಂದರೆ, ಆಕೆಯ ಕುಟುಂಬ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಗಾಗಿ ಪ್ರಕರಣ ದಾಖಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ತಮಿಳುನಾಡಿನಲ್ಲಿ ಈ ಹಿಂದೆ ನಡೆದ ಜಾತಿ ಸಂಬಂಧಿತ ಹಿಂಸಾಚಾರದ ನೋವಿನ ನೆನಪುಗಳನ್ನು ಈ ಪ್ರಕರಣವು ಮತ್ತೆ ಮುನ್ನಲೆಗೆ ತಂದಿದೆ. ಜುಲೈ 2025 ರಲ್ಲಿ ಅಂತರ್ಜಾತಿ ಸಂಬಂಧ ಹೊಂದಿದ್ದಕ್ಕಾಗಿ ಕೊಂದು ಹಾಕಲಾದ ದಲಿತ ಸಾಫ್ಟ್‌ವೇರ್ ಎಂಜಿನಿಯರ್ ಕವಿನ್ ಸೆಲ್ವಗಣೇಶ್ ಅವರ ಹತ್ಯೆಯೊಂದಿಗೆ ಅನೇಕರು ಹೋಲಿಕೆ ಮಾಡಿದ್ದಾರೆ. ಆ ಪ್ರಕರಣವು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿತ್ತು, ಮರ್ಯಾದಾ ಹತ್ಯೆಗಳನ್ನು ತಡೆಯಲು ಬಲವಾದ ಕಾನೂನು ಜಾರಿಗೆ ತರಬೇಕೆಂಬ ಬೇಡಿಕೆಗಳಿಗೆ ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...