Homeಮುಖಪುಟಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

- Advertisement -
- Advertisement -

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳು ನಡೆದಿವೆ ಎಂದು ಪಕ್ಷವು ಗಂಭೀರ ಆರೋಪ ಮಾಡಿದೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ನೈತಿಕತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಫಲಿತಾಂಶಗಳನ್ನು ಅಸಿಂಧುಗೊಳಿಸಿ, ರಾಜ್ಯದಲ್ಲಿ ಮತ್ತೊಮ್ಮೆ ಹೊಸದಾಗಿ ಚುನಾವಣೆ ನಡೆಸಬೇಕೆಂದು ಮನವಿ ಮಾಡಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ, ರಾಜ್ಯದ ಸುಮಾರು 25 ರಿಂದ 35 ಲಕ್ಷ ಮಹಿಳಾ ಮತದಾರರಿಗೆ ತಲಾ 10,000 ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ‘ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆ’ಯ ಅಡಿಯಲ್ಲಿ ಈ ಹಣವನ್ನು ಹಂಚಲಾಗಿದ್ದು, ಚುನಾವಣೆ ಘೋಷಣೆಯಾದ ನಂತರವೇ ಹೊಸ ಫಲಾನುಭವಿಗಳನ್ನು ಈ ಯೋಜನೆಗೆ ಸೇರ್ಪಡಿಸಲಾಗಿದೆ. ಈ ಕ್ರಮವು ಮತದಾರರಿಗೆ ಆಮಿಷವೊಡ್ಡುವ ‘ಭ್ರಷ್ಟಾಚಾರದ ನಡೆ’ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ಸಾಂವಿಧಾನಿಕ ಆಶಯಗಳ ಉಲ್ಲಂಘನೆಯಾಗಿದೆ ಎಂದು ಜನ್‌ ಸುರಾಜ್ ತನ್ನ ಅರ್ಜಿಯಲ್ಲಿ ಹೇಳಿದೆ.

ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಹೊಸ ಫಲಾನುಭವಿಗಳನ್ನು ಸೇರಿಸುವುದು ಮತ್ತು ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಅವರಿಗೆ ಹಣ ಪಾವತಿ ಮಾಡಿರುವುದು ಕಾನೂನುಬಾಹಿರ ಮತ್ತು ಸಂವಿಧಾನದ 14, 21, 112, 202 ಮತ್ತು 324 ನೇ ವಿಧಿಗಳ ಉಲ್ಲಂಘನೆಯಾಗಿದೆ ಎಂದು ಘೋಷಿಸಲು ಅರ್ಜಿಯಲ್ಲಿ ಕೋರಲಾಗಿದೆ. ಸಂವಿಧಾನದ 324ನೇ ವಿಧಿ ಮತ್ತು ಜನಪ್ರತಿನಿಧಿ ಕಾಯ್ದೆ 1951ರ 123ನೇ ವಿಧಿಯಡಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ.

ಎಸ್ ಸುಬ್ರಮಣಿಯಂ ಬಾಲಾಜಿ VS ಸ್ಟೇಟ್ ಆಫ್ ತಮಿಳುನಾಡು (2013) 9 ಎಸ್‌ಸಿಸಿ 659 ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ನಿರ್ದೇಶನಗಳನ್ನು ಜಾರಿಗೆ ತರಲು ಮತ್ತು ಉಚಿತ ಕೊಡುಗೆಗಳು, ನೇರ ಪ್ರಯೋಜನ ವರ್ಗಾವಣೆ ಯೋಜನೆಗಳು ಇತ್ಯಾದಿಗಳ ಕುರಿತು ಸಮಗ್ರ ಮಾರ್ಗಸೂಚಿಗಳನ್ನು ಸಿದ್ಧಪಡಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡಲು ಅರ್ಜಿಯಲ್ಲಿ ಕೋರಲಾಗಿದೆ

ಅಲ್ಲದೆ, ಮತದಾನದ ಎರಡೂ ಹಂತಗಳಲ್ಲಿ ಸ್ವಸಹಾಯ ಗುಂಪು ‘ಜೀವಿಕ’ದಿಂದ 1.8 ಲಕ್ಷ ಮಹಿಳಾ ಫಲಾನುಭವಿಗಳನ್ನು ಮತಗಟ್ಟೆಯಲ್ಲಿ ನಿಯೋಜಿಸಿರುವುದು ಕಾನೂನುಬಾಹಿರ ಮತ್ತು ಅನ್ಯಾಯವಾಗಿದೆ ಎಂದು ಘೋಷಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಮೇಲೆ ಪ್ರಭಾವ ಬೀರುವಂತಹ ಉಚಿತ ಕೊಡುಗೆಗಳು, ನೇರ ನಗದು ವರ್ಗಾವಣೆ ಮತ್ತು ಇತರ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲು ಚುನಾವಣಾ ಆಯೋಗವು ಒಂದು ನಿರ್ದಿಷ್ಟ ಕನಿಷ್ಠ ಅವಧಿಯನ್ನು ನಿಗದಿಪಡಿಸಬೇಕು ಎಂದು ಅರ್ಜಿದಾರರು ವಿನಂತಿಸಿದ್ದಾರೆ.

ವಿಶೇಷವಾಗಿ, ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಚುನಾವಣೆ ಘೋಷಣೆಯಾಗುವ ಕನಿಷ್ಠ ಆರು ತಿಂಗಳ ಮೊದಲೇ ಇಂತಹ ಯೋಜನೆಗಳ ಅನುಷ್ಠಾನವನ್ನು ಪೂರ್ಣಗೊಳಿಸಬೇಕು ಅಥವಾ ಸ್ಥಗಿತಗೊಳಿಸಬೇಕು ಎಂಬ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಚುನಾವಣೆ ಹತ್ತಿರವಿರುವಾಗ ಇಂತಹ ಯೋಜನೆಗಳನ್ನು ಘೋಷಿಸುವುದು ಅಥವಾ ಹಣ ಹಂಚುವುದು ಮತದಾರರ ನಿರ್ಧಾರದ ಮೇಲೆ ಪ್ರಭಾವ ಬೀರುತ್ತದೆ ಎಂಬುದು ಪಕ್ಷದ ವಾದವಾಗಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಶುಕ್ರವಾರ (ಫೆ.6) ಈ ಅರ್ಜಿ ವಿಚಾರಣೆ ನಡೆಸಲಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್‌ ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...