Homeಮುಖಪುಟ‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

- Advertisement -
- Advertisement -

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ.

ಕರ್ನೂಲು ಜಿಲ್ಲೆಯ ಕಲುಗೋಟ್ಲಾ ಗ್ರಾಮದಲ್ಲಿ ನಡೆದ ಗ್ರಾಮ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಹಿಂದಿನ ಸರ್ಕಾರವು ಕಲಬೆರಕೆ ಪ್ರಸಾದ (ಪವಿತ್ರ ಆಹಾರ)ದ ಮೂಲಕ ವೆಂಕಟೇಶ್ವರ ಸ್ವಾಮಿಯ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ. 

“ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ಸ್ನಾನಗೃಹ ಸ್ವಚ್ಛಗೊಳಿಸುವ ರಾಸಾಯನಿಕಗಳಿಂದ ತಯಾರಿಸಿದ ತುಪ್ಪವನ್ನು ಲಡ್ಡುಗಳಲ್ಲಿ ಬಳಸುತ್ತಿತ್ತು” ಎಂದು ಯಮ್ಮಿಗನೂರು ಕ್ಷೇತ್ರದಲ್ಲಿ ನಡೆದ ಪಟ್ಟದಾರ್ ಪಾಸ್‌ಬುಕ್ (ಭೂ ದಾಖಲೆಗಳು) ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ ನಾಯ್ಡು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪ್ರಕಾರ, ಐದು ವರ್ಷಗಳ ಕಾಲ ಲಡ್ಡು ತಯಾರಿಸಲು “ರಾಸಾಯನಿಕಗಳಿಂದ” ತಯಾರಿಸಿದ ಕಲಬೆರಕೆ ತುಪ್ಪವನ್ನು ಬಳಸಲಾಗುತ್ತಿತ್ತು. ಇವುಗಳಲ್ಲಿ ಎರಡು ರೀತಿಯ ರಾಸಾಯನಿಕಗಳಿವೆ ಎಂದು ಅವರು ಹೇಳಿದ್ದು, ಇವುಗಳಲ್ಲಿ ಕೆಲವು ತರಕಾರಿ ಮೂಲದವುಗಳಾಗಿದ್ದು, ಅವು ಹೆಚ್ಚು ದುಬಾರಿಯಾಗಿದ್ದವು, ಆದರೆ ಪ್ರಾಣಿಗಳ ಕೊಬ್ಬಿನ ಬೆಲೆ ಕಡಿಮೆ ಎಂದು ಅವರು ಗಮನಿಸಿದ್ದರು ಎಂದು ಆರೋಪಿಸಿದ್ದಾರೆ. 

ಜೊತೆಗೆ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ) ವರದಿಯು ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಹೇಳುತ್ತದೆ ಎಂದು ನಾಯ್ಡು ಪುನರುಚ್ಚರಿಸಿದ್ದಾರೆ. 

ಒಬ್ಬ ಭಕ್ತನಾಗಿ, ವೆಂಕಟೇಶ್ವರ ಸ್ವಾಮಿಯ ಪಾವಿತ್ರ್ಯವನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಹೆಚ್ಚು ಮಾತನಾಡಬಾರದು. ಆದರೆ ವೈಎಸ್‌ಆರ್‌ಸಿಪಿ ನಾಯಕರು ಸಿಬಿಐ ನೇತೃತ್ವದ ಎಸ್‌ಐಟಿ ಕಲಬೆರಕೆ ನಡೆದಿಲ್ಲ ಎಂದು ಕ್ಲೀನ್ ಚಿಟ್ ನೀಡಿದೆ ಎಂದು ವಾದಿಸುತ್ತಿದ್ದರೆ, ಟಿಡಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈವಿ ಸುಬ್ಬಾ ರೆಡ್ಡಿ ಕಲಬೆರಕೆ ನಡೆದಿದೆ ಎಂದು ಹೇಳಿದ್ದರು ಎಂದು ನೆನಪಿಸಿದ್ದಾರೆ. 

ತಿರುಮಲ ತಿರುಪತಿ ದೇವಸ್ಥಾನಗಳನ್ನು (ಟಿಟಿಡಿ) ಕಲಬೆರಕೆ ಪ್ರಸಾದದಿಂದ ಅಪವಿತ್ರಗೊಳಿಸಿದ ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದೆ ಎಂದು ನಾಯ್ಡು ಹೇಳಿದ್ದು, ಪ್ರಸ್ತುತ ಲಡ್ಡು ಮತ್ತು ಹಿಂದಿನದಕ್ಕೆ ಸಾಕಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ನಾಯ್ಡು ಅವರು ತಿರುಪತಿ ಲಡ್ಡು ಕಲಬೆರಕೆ ಪ್ರಕರಣದಲ್ಲಿ ಯಾರನ್ನೂ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದು, ಈ ವಿಷಯದ ಬಗ್ಗೆ ಎಸ್‌ಐಟಿ ವರದಿಯ ನಂತರ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಏಕವ್ಯಕ್ತಿ ಸಮಿತಿಯನ್ನು ರಚಿಸಿದ್ದಾರೆ. 

ತಿರುಮಲ ಲಡ್ಡು ಪ್ರಸಾದದ ಕಲಬೆರಕೆ ಭಕ್ತರ ನಂಬಿಕೆಯ ವಿರುದ್ಧದ ಗಂಭೀರ ಅಪರಾಧವಾಗಿದೆ ಎಂದು ಹೇಳಿರುವ ಅವರು ಈ ವಿಷಯದಲ್ಲಿ ಯಾವುದೇ ವರದಿಯು ವೈಎಸ್‌ಆರ್‌ಸಿಪಿಗೆ ಕ್ಲೀನ್ ಚಿಟ್ ನೀಡಿಲ್ಲ ಎಂದು ಪ್ರತಿಪಾದಿಸಿದ್ದಾರೆ. 

ತುಪ್ಪ ಕಲಬೆರಕೆಯನ್ನು “ದೇವರ ವಿರುದ್ಧದ ಅತ್ಯಂತ ದೊಡ್ಡ ಪಾಪ” ಎಂದು ಕರೆದ ನಾಯ್ಡು, ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ 2022 ರ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ವರದಿಯು “ಕಲಬೆರೆಕೆ ಇದೆ ಎಂದು ಸ್ಪಷ್ಟವಾಗಿ ಹೇಳಿದೆ” ಎಂದು ಆರೋಪಿಸಿದ್ದಾರೆ. 

ಗುರುವಾರ ಟಿಡಿಪಿ ವಿರುದ್ಧ ವಾಗ್ದಾಳಿ ನಡೆಸಿರುವ ವೈಎಸ್‌ಆರ್‌ಸಿಪಿ ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ, 2022 ರ ಸಿಎಫ್‌ಟಿಆರ್‌ಐ ವರದಿಯು ಪವಿತ್ರ ಸಿಹಿತಿಂಡಿ ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಕೆಯನ್ನು ಉಲ್ಲೇಖಿಸಿಲ್ಲ, ಆದರೆ ತುಪ್ಪವನ್ನು ಕಲಬೆರಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ ಎಂದು ಹೇಳಿದ್ದಾರೆ.

ಆ ವರದಿಯನ್ನು ಅವರು ಮುಚ್ಚಿಟ್ಟಿದ್ದಾರೆ ಎಂಬ ಟಿಡಿಪಿ ನೇತೃತ್ವದ ಎನ್‌ಡಿಎ ಸರ್ಕಾರದ ಆರೋಪವನ್ನು ಅವರು ತಿರಸ್ಕರಿಸಿದ್ದು, “ಒಂದು ವೇಳೆ ಅದನ್ನು ನಿಗ್ರಹಿಸಿದ್ದರೆ, ನಾನು ಮಾದರಿಗಳನ್ನು ಪರೀಕ್ಷಿಸಲು ಸಿಎಫ್‌ಟಿಆರ್‌ಐಗೆ ಏಕೆ ಬರೆಯಬೇಕು” ಎಂದು ಸುಬ್ಬಾ ರೆಡ್ಡಿ ಪ್ರಶ್ನಿಸಿದ್ದಾರೆ. 

“ಎಸ್‌ಐಟಿ ವರದಿಯು ಸಮಸ್ಯೆಯನ್ನು ಸ್ಪಷ್ಟಪಡಿಸಿದ್ದರೂ, ರಾಜ್ಯ ಸರ್ಕಾರವು ಸುಳ್ಳು ಹೇಳಿಕೆಗಳನ್ನು ಹರಡುವುದನ್ನು ಮತ್ತು ವೈಎಸ್‌ಆರ್‌ಸಿಪಿಯನ್ನು ದೂಷಿಸಲು ಹೋರ್ಡಿಂಗ್‌ಗಳನ್ನು ನಿರ್ಮಿಸುವುದನ್ನು ಮುಂದುವರೆಸಿದೆ” ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...