Homeಅಂತರಾಷ್ಟ್ರೀಯಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

- Advertisement -
- Advertisement -

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ.

ಈ ಒಪ್ಪಂದದ ಅಡಿಯಲ್ಲಿ, ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಗರಿಷ್ಠ ಸುಂಕವನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇದರಲ್ಲಿ ರಷ್ಯಾ ತೈಲ ಖರೀದಿಯ ಕಾರಣಕ್ಕಾಗಿ ವಿಧಿಸಲಾಗಿದ್ದ ಶೇ. 25ರಷ್ಟು ಹೆಚ್ಚುವರಿ ಪೆನಾಲ್ಟಿ ಸುಂಕದ ರದ್ದತಿಯೂ ಸೇರಿದೆ.

ವ್ಯಾಪಾರ ಒಪ್ಪಂದದಿಂದ ಜೆನೆರಿಕ್ ಔಷಧಗಳು, ರತ್ನ ಮತ್ತು ವಜ್ರಗಳು ಹಾಗೂ ವಿಮಾನದ ಬಿಡಿಭಾಗಗಳ ಮೇಲಿನ ಸುಂಕವು ಶೂನ್ಯಕ್ಕೆ ಇಳಿಕೆಯಾಗಲಿದೆ. ಜವಳಿ, ಚರ್ಮದ ವಸ್ತುಗಳು ಮತ್ತು ಕರಕುಶಲ ವಸ್ತುಗಳ ರಫ್ತಿಗೂ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿಕೊಂಡಿದೆ.

ವ್ಯಾಪಾರ ಒಪ್ಪಂದದ ಮೂಲಕ ಮುಂದಿನ 5 ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಬಿಲಿಯನ್ ಡಾಲರ್ ಮೌಲ್ಯದ ಇಂಧನ ಉತ್ಪನ್ನಗಳು, ವಿಮಾನದ ಬಿಡಿಭಾಗಗಳು ಮತ್ತು ತಂತ್ರಜ್ಞಾನ ಉತ್ಪನ್ನಗಳನ್ನು ಖರೀದಿಸಲು ಭಾರತ ಉದ್ದೇಶಿಸಿದೆ.

ರಷ್ಯಾದಿಂದ ನೇರವಾಗಿ ಅಥವಾ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಭಾರತ ಬದ್ಧತೆ ವ್ಯಕ್ತಪಡಿಸಿದೆ ಎಂದು ಅಮೆರಿಕದ ಶ್ವೇತಭವನ ಹೇಳಿದೆ. ರಷ್ಯಾ ತೈಲದ ಬದಲಿಗೆ ಭಾರತವು ಮುಂದಿನ ದಿನಗಳಲ್ಲಿ ಅಮೆರಿಕ ಮತ್ತು ವೆನೆಜುವೆಲಾದಿಂದ ಹೆಚ್ಚಿನ ಪ್ರಮಾಣದಲ್ಲಿ ತೈಲ ಖರೀದಿಸಲು ಉದ್ದೇಶಿಸಿದೆ ಎಂದಿದೆ.

ಭಾರತವು ರಷ್ಯಾದಿಂದ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿಲ್ಲ, ಆದರೆ ಹೊಸ ವ್ಯಾಪಾರ ಒಪ್ಪಂದದ ಭಾಗವಾಗಿ ಅದನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ಹಂತಹಂತವಾಗಿ ಸ್ಥಗಿತಗೊಳಿಸಲು ಸಮ್ಮತಿಸಿದೆ ಎಂದು ವರದಿಗಳು ಹೇಳಿವೆ.

ಕಳೆದ ಕೆಲವು ತಿಂಗಳುಗಳಿಂದ ಭಾರತವು ರಷ್ಯಾದಿಂದ ಮಾಡುತ್ತಿದ್ದ ತೈಲ ಆಮದನ್ನು ಈಗಾಗಲೇ ಕಡಿಮೆ ಮಾಡಿದೆ. ಜನವರಿಯಲ್ಲಿ ದಿನಕ್ಕೆ 1.2 ಮಿಲಿಯನ್ ಬ್ಯಾರೆಲ್ ಇದ್ದ ಆಮದು, ಫೆಬ್ರವರಿಯಲ್ಲಿ 1 ಮಿಲಿಯನ್ ಮತ್ತು ಮಾರ್ಚ್ ವೇಳೆಗೆ 8 ಲಕ್ಷ ಬ್ಯಾರೆಲ್‌ಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಭಾರತವು ಈ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ, ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ವಿಧಿಸಿದ್ದ ಶೇ. 25ರಷ್ಟು ಹೆಚ್ಚುವರಿ ‘ಪೆನಾಲ್ಟಿ’ ಸುಂಕವನ್ನು ಫೆಬ್ರವರಿ 7ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ.

ಭಾರತದ ವಿದೇಶಾಂಗ ಸಚಿವಾಲಯವು ದೇಶದ ಇಂಧನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.

ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಭಾರತವು ತನ್ನ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳ ಹಿತಾಸಕ್ತಿಯನ್ನು ಕಾಪಾಡಿಕೊಂಡಿದೆ. ಅಕ್ಕಿ, ಗೋಧಿ, ಹಾಲು ಮತ್ತು ಮಾಂಸದಂತಹ ಸೂಕ್ಷ್ಮ ಉತ್ಪನ್ನಗಳಿಗೆ ಸುಂಕ ವಿನಾಯಿತಿಯಿಂದ ರಕ್ಷಣೆ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.

ಭಾರತೀಯ ರೈತರ ಜೀವನೋಪಾಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಅಮೆರಿಕದ ಉತ್ಪನ್ನಗಳು ಭಾರತದ ಮಾರುಕಟ್ಟೆಗೆ ಬರುವಾಗ ವಿಧಿಸುವ ಆಮದು ಸುಂಕವನ್ನು ಕಡಿಮೆ ಮಾಡುವುದಿಲ್ಲ. ಇದರಿಂದ ಅಮೆರಿಕದ ಅಗ್ಗದ ಕೃಷಿ ಉತ್ಪನ್ನಗಳು ಭಾರತೀಯ ಮಾರುಕಟ್ಟೆಯನ್ನು ಆಕ್ರಮಿಸದಂತೆ ತಡೆಯಲಾಗುತ್ತದೆ. ಗೋಧಿ, ಅಕ್ಕಿ, ಜೋಳ, ಸೋಯಾಬೀನ್ ಮತ್ತು ಸಕ್ಕರೆಯಂತಹ ಪ್ರಮುಖ ಬೆಳೆಗಳನ್ನು ‘ಸೂಕ್ಷ್ಮ ಉತ್ಪನ್ನ’ಗಳ ಪಟ್ಟಿಯಲ್ಲಿ ಇರಿಸಲಾಗಿದ್ದು, ಇವುಗಳಿಗೆ ಯಾವುದೇ ರಿಯಾಯಿತಿ ನೀಡಿಲ್ಲ. ಅಮೆರಿಕದ ಹಾಲು, ಬೆಣ್ಣೆ, ಗಿಣ್ಣು ಮತ್ತು ಪನೀರ್‌ನಂತಹ ಉತ್ಪನ್ನಗಳ ಆಮದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಭಾರತದ ಕೋಟ್ಯಂತರ ಸಣ್ಣ ಹೈನುಗಾರರ ಹಿತಾಸಕ್ತಿ ಕಾಪಾಡುವುದು ಇದರ ಉದ್ದೇಶ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಈ ಒಪ್ಪಂದದ ಮೊದಲ ಹಂತಕ್ಕೆ ಮಾರ್ಚ್ 2026ರ ಮಧ್ಯಭಾಗದಲ್ಲಿ ಅಧಿಕೃತವಾಗಿ ಸಹಿ ಹಾಕುವ ನಿರೀಕ್ಷೆಯಿದೆ. ಒಪ್ಪಂದವು ಭಾರತೀಯ ರಫ್ತುದಾರರಿಗೆ, ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ (MSMEs) 30 ಟ್ರಿಲಿಯನ್ ಡಾಲರ್ ಮಾರುಕಟ್ಟೆಯನ್ನು ಮುಕ್ತಗೊಳಿಸಲಿದೆ ಪಿಯೂಷ್ ಗೋಯಲ್ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...