Homeಅಂತರಾಷ್ಟ್ರೀಯಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

- Advertisement -
- Advertisement -

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ.

ಈ ಒಪ್ಪಂದದ ಅಡಿಯಲ್ಲಿ, ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಗರಿಷ್ಠ ಸುಂಕವನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇದರಲ್ಲಿ ರಷ್ಯಾ ತೈಲ ಖರೀದಿಯ ಕಾರಣಕ್ಕಾಗಿ ವಿಧಿಸಲಾಗಿದ್ದ ಶೇ. 25ರಷ್ಟು ಹೆಚ್ಚುವರಿ ಪೆನಾಲ್ಟಿ ಸುಂಕದ ರದ್ದತಿಯೂ ಸೇರಿದೆ.

ವ್ಯಾಪಾರ ಒಪ್ಪಂದದಿಂದ ಜೆನೆರಿಕ್ ಔಷಧಗಳು, ರತ್ನ ಮತ್ತು ವಜ್ರಗಳು ಹಾಗೂ ವಿಮಾನದ ಬಿಡಿಭಾಗಗಳ ಮೇಲಿನ ಸುಂಕವು ಶೂನ್ಯಕ್ಕೆ ಇಳಿಕೆಯಾಗಲಿದೆ. ಜವಳಿ, ಚರ್ಮದ ವಸ್ತುಗಳು ಮತ್ತು ಕರಕುಶಲ ವಸ್ತುಗಳ ರಫ್ತಿಗೂ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿಕೊಂಡಿದೆ.

ವ್ಯಾಪಾರ ಒಪ್ಪಂದದ ಮೂಲಕ ಮುಂದಿನ 5 ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಬಿಲಿಯನ್ ಡಾಲರ್ ಮೌಲ್ಯದ ಇಂಧನ ಉತ್ಪನ್ನಗಳು, ವಿಮಾನದ ಬಿಡಿಭಾಗಗಳು ಮತ್ತು ತಂತ್ರಜ್ಞಾನ ಉತ್ಪನ್ನಗಳನ್ನು ಖರೀದಿಸಲು ಭಾರತ ಉದ್ದೇಶಿಸಿದೆ.

ರಷ್ಯಾದಿಂದ ನೇರವಾಗಿ ಅಥವಾ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಭಾರತ ಬದ್ಧತೆ ವ್ಯಕ್ತಪಡಿಸಿದೆ ಎಂದು ಅಮೆರಿಕದ ಶ್ವೇತಭವನ ಹೇಳಿದೆ. ರಷ್ಯಾ ತೈಲದ ಬದಲಿಗೆ ಭಾರತವು ಮುಂದಿನ ದಿನಗಳಲ್ಲಿ ಅಮೆರಿಕ ಮತ್ತು ವೆನೆಜುವೆಲಾದಿಂದ ಹೆಚ್ಚಿನ ಪ್ರಮಾಣದಲ್ಲಿ ತೈಲ ಖರೀದಿಸಲು ಉದ್ದೇಶಿಸಿದೆ ಎಂದಿದೆ.

ಭಾರತವು ರಷ್ಯಾದಿಂದ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿಲ್ಲ, ಆದರೆ ಹೊಸ ವ್ಯಾಪಾರ ಒಪ್ಪಂದದ ಭಾಗವಾಗಿ ಅದನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ಹಂತಹಂತವಾಗಿ ಸ್ಥಗಿತಗೊಳಿಸಲು ಸಮ್ಮತಿಸಿದೆ ಎಂದು ವರದಿಗಳು ಹೇಳಿವೆ.

ಕಳೆದ ಕೆಲವು ತಿಂಗಳುಗಳಿಂದ ಭಾರತವು ರಷ್ಯಾದಿಂದ ಮಾಡುತ್ತಿದ್ದ ತೈಲ ಆಮದನ್ನು ಈಗಾಗಲೇ ಕಡಿಮೆ ಮಾಡಿದೆ. ಜನವರಿಯಲ್ಲಿ ದಿನಕ್ಕೆ 1.2 ಮಿಲಿಯನ್ ಬ್ಯಾರೆಲ್ ಇದ್ದ ಆಮದು, ಫೆಬ್ರವರಿಯಲ್ಲಿ 1 ಮಿಲಿಯನ್ ಮತ್ತು ಮಾರ್ಚ್ ವೇಳೆಗೆ 8 ಲಕ್ಷ ಬ್ಯಾರೆಲ್‌ಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಭಾರತವು ಈ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ, ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ವಿಧಿಸಿದ್ದ ಶೇ. 25ರಷ್ಟು ಹೆಚ್ಚುವರಿ ‘ಪೆನಾಲ್ಟಿ’ ಸುಂಕವನ್ನು ಫೆಬ್ರವರಿ 7ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ.

ಭಾರತದ ವಿದೇಶಾಂಗ ಸಚಿವಾಲಯವು ದೇಶದ ಇಂಧನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.

ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಭಾರತವು ತನ್ನ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳ ಹಿತಾಸಕ್ತಿಯನ್ನು ಕಾಪಾಡಿಕೊಂಡಿದೆ. ಅಕ್ಕಿ, ಗೋಧಿ, ಹಾಲು ಮತ್ತು ಮಾಂಸದಂತಹ ಸೂಕ್ಷ್ಮ ಉತ್ಪನ್ನಗಳಿಗೆ ಸುಂಕ ವಿನಾಯಿತಿಯಿಂದ ರಕ್ಷಣೆ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.

ಭಾರತೀಯ ರೈತರ ಜೀವನೋಪಾಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಅಮೆರಿಕದ ಉತ್ಪನ್ನಗಳು ಭಾರತದ ಮಾರುಕಟ್ಟೆಗೆ ಬರುವಾಗ ವಿಧಿಸುವ ಆಮದು ಸುಂಕವನ್ನು ಕಡಿಮೆ ಮಾಡುವುದಿಲ್ಲ. ಇದರಿಂದ ಅಮೆರಿಕದ ಅಗ್ಗದ ಕೃಷಿ ಉತ್ಪನ್ನಗಳು ಭಾರತೀಯ ಮಾರುಕಟ್ಟೆಯನ್ನು ಆಕ್ರಮಿಸದಂತೆ ತಡೆಯಲಾಗುತ್ತದೆ. ಗೋಧಿ, ಅಕ್ಕಿ, ಜೋಳ, ಸೋಯಾಬೀನ್ ಮತ್ತು ಸಕ್ಕರೆಯಂತಹ ಪ್ರಮುಖ ಬೆಳೆಗಳನ್ನು ‘ಸೂಕ್ಷ್ಮ ಉತ್ಪನ್ನ’ಗಳ ಪಟ್ಟಿಯಲ್ಲಿ ಇರಿಸಲಾಗಿದ್ದು, ಇವುಗಳಿಗೆ ಯಾವುದೇ ರಿಯಾಯಿತಿ ನೀಡಿಲ್ಲ. ಅಮೆರಿಕದ ಹಾಲು, ಬೆಣ್ಣೆ, ಗಿಣ್ಣು ಮತ್ತು ಪನೀರ್‌ನಂತಹ ಉತ್ಪನ್ನಗಳ ಆಮದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಭಾರತದ ಕೋಟ್ಯಂತರ ಸಣ್ಣ ಹೈನುಗಾರರ ಹಿತಾಸಕ್ತಿ ಕಾಪಾಡುವುದು ಇದರ ಉದ್ದೇಶ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಈ ಒಪ್ಪಂದದ ಮೊದಲ ಹಂತಕ್ಕೆ ಮಾರ್ಚ್ 2026ರ ಮಧ್ಯಭಾಗದಲ್ಲಿ ಅಧಿಕೃತವಾಗಿ ಸಹಿ ಹಾಕುವ ನಿರೀಕ್ಷೆಯಿದೆ. ಒಪ್ಪಂದವು ಭಾರತೀಯ ರಫ್ತುದಾರರಿಗೆ, ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ (MSMEs) 30 ಟ್ರಿಲಿಯನ್ ಡಾಲರ್ ಮಾರುಕಟ್ಟೆಯನ್ನು ಮುಕ್ತಗೊಳಿಸಲಿದೆ ಪಿಯೂಷ್ ಗೋಯಲ್ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....