Homeಮುಖಪುಟಸಮನ್ಸ್ ಚರ್ಚೆ ನಡುವೆ 'ಸಹಯೋಗ್' ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ ಸಮನ್ಸ್ ಜಾರಿ ಮಾಡಿರುವುದು ಪ್ರಸ್ತುತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿದೆ.

ಫೆಬ್ರವರಿ 5, 2026ರಂದು ವಿಚಾರಣೆಗೆ ಹಾಜರಾಗುವಂತೆ ಕುನಾಲ್ ಕಾಮ್ರಾ ಅವರಿಗೆ ಸೂಚಿಸಲಾಗಿತ್ತು. ಹಾಗಾಗಿ, ಕಾಮ್ರಾ ಅವರು ವಿಚಾರಣೆಗೆ ಹಾಜರಾಗಲು ಮುಂಬೈಗೆ ಬಂದಿದ್ದರು. ಆದರೆ, ಸಮಿತಿಯೇ ವಿಚಾರಣೆಯನ್ನು ಮುಂದೂಡಿದೆ ಎನ್ನಲಾಗಿದೆ.

ಮಾಧ್ಯಮಗಳಲ್ಲಿ ಕಾಮ್ರಾ ಅವರೇ ಸಮಯ ಕೇಳಿದ್ದಾರೆ ಎಂದು ಸಮಿತಿಯವರು ಹೇಳಿರುವುದಾಗಿ ವರದಿಯಾಗಿದೆ. ಇದನ್ನು ಕಾಮ್ರಾ ತಳ್ಳಿ ಹಾಕಿದ್ದು, ಸಮಿತಿಯೇ ವಿಚಾರಣೆಯನ್ನು ಫೆಬ್ರವರಿ 17, 2026ಕ್ಕೆ ಮುಂದೂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣವು 2025ರ ಆರಂಭದಲ್ಲಿ ಕಾಮ್ರಾ ಅವರು ಮಾಡಿದ ‘ನಯಾ ಭಾರತ್’ ಎಂಬ ಸ್ಟ್ಯಾಂಡ್-ಅಪ್ ಕಾಮಿಡಿ ಶೋಗೆ ಸಂಬಂಧಿಸಿದೆ. ಈ ಶೋನಲ್ಲಿ ಏಕನಾಥ್ ಶಿಂದೆ ಅವರನ್ನು ಕಾಮ್ರಾ “ದ್ರೋಹಿ” (Traitor) ಎಂದು ಕರೆದಿದ್ದರು ಮತ್ತು ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಿದ್ದನ್ನು ಟೀಕಿಸುವ ಭರದಲ್ಲಿ ಕಾಮ್ರಾ ಈ ಪದ ಬಳಸಿದ್ದರು. ಇದು ಮುಖ್ಯಮಂತ್ರಿಗಳ ಘನತೆಗೆ ಧಕ್ಕೆ ತಂದಿದೆ ಎಂದು ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರು ದೂರು ನೀಡಿದ್ದರು.

ದೂರು ಆಧರಿಸಿ ಮುಂಬೈನ ಖಾರ್ ಠಾಣೆ ಪೊಲೀಸರು ಕಾಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದೇ ಕಾರಣಕ್ಕೆ ಮಹಾರಾಷ್ಟ್ರ ವಿಧಾನಸಭೆಯ ಹಕ್ಕುಚ್ಯುತಿ ಸಮಿತಿ ಕೂಡ ಕಾಮ್ರಾ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಪೊಲೀಸರು ಈ ಹಿಂದೆ ಮೂರು ಬಾರಿ ಕಾಮ್ರಾಗೆ ಸಮನ್ಸ್ ನೀಡಿದ್ದರು.

ತಾನೊಬ್ಬ ಹಾಸ್ಯ ಕಲಾವಿದನಾಗಿ ವಿಡಂಬನೆ ಮಾಡಿದ್ದೇನೆ ಹೊರತು, ಅದು ಹಕ್ಕುಚ್ಯುತಿಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಕಾಮ್ರಾ ವಾದಿಸಿದ್ದಾರೆ. ಎಫ್‌ಐಆರ್ ವಿಚಾರವಾಗಿ ಬಾಂಬೆ ಹೈಕೋರ್ಟ್ ಈಗಾಗಲೇ ಕಾಮ್ರಾಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ಸಹಯೋಗ್ ವಿರುದ್ದ ಮತ್ತೆ ಕೋರ್ಟ್ ಮೆಟ್ಟಿಲೇರಿದ ಕಾಮ್ರಾ

ಇದೀಗ, ಕೇಂದ್ರ ಸರ್ಕಾರದ ‘ಸಹಯೋಗ್’ ಪೋರ್ಟಲ್ ಮತ್ತು 2025ರ ಐಟಿ (ಮಾಹಿತಿ ತಂತ್ರಜ್ಞಾನ) ನಿಯಮಗಳ ತಿದ್ದುಪಡಿಯನ್ನು ಪ್ರಶ್ನಿಸಿ ಕಾಮ್ರಾ ಬಾಂಬೆ ಹೈಕೋರ್ಟ್‌ಗೆ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.

ಪೋರ್ಟಲ್ ಯಾವುದೇ ಮುನ್ಸೂಚನೆ ಇಲ್ಲದೆ ಸಾಮಾಜಿಕ ಜಾಲತಾಣಗಳ ವಿಷಯಗಳನ್ನು (Content) ತೆಗೆದುಹಾಕಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ, ಇದು ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದು ಅವರು ವಾದಿಸಿದ್ದಾರೆ.

ಈ ಹಿಂದೆ ಸರ್ಕಾರವು ತರಲು ಉದ್ದೇಶಿಸಿದ್ದ ‘ಫ್ಯಾಕ್ಟ್ ಚೆಕ್ ಯುನಿಟ್’ ವಿರುದ್ಧ ಕಾಮ್ರಾ ಹೂಡಿದ್ದ ದಾವೆಯಲ್ಲಿ ಹೈಕೋರ್ಟ್ ಆ ನಿಯಮವನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಈಗಿನ ಪೋರ್ಟಲ್ ವಿರುದ್ಧವೂ ಅವರು ಹೋರಾಟ ನಡೆಸುತ್ತಿದ್ದಾರೆ.

ಓಲಾ ಎಲೆಕ್ಟ್ರಿಕ್ ಜೊತೆಗಿನ ವಿವಾದ

ಕಳೆದ ವರ್ಷದಿಂದ ಓಲಾ ಕಂಪನಿಯ ಸಿಇಒ ಭವಿಶ್ ಅಗರ್ವಾಲ್ ಮತ್ತು ಕುನಾಲ್ ಕಾಮ್ರಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಸಂಘರ್ಷ ನಡೆಯುತ್ತಿದೆ.

ಓಲಾ ಸ್ಕೂಟರ್‌ಗಳ ಸರ್ವಿಸ್ ಸಮಸ್ಯೆಗಳ ಬಗ್ಗೆ ಕಾಮ್ರಾ ಸರಣಿ ಪೋಸ್ಟ್‌ಗಳನ್ನು ಹಾಕಿದ್ದರು. ಇದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು (ಸಿಸಿಪಿಎ) ಓಲಾ ಕಂಪನಿಗೆ ನೋಟಿಸ್ ನೀಡಲು ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...