Homeಮುಖಪುಟಸಮನ್ಸ್ ಚರ್ಚೆ ನಡುವೆ 'ಸಹಯೋಗ್' ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ ಸಮನ್ಸ್ ಜಾರಿ ಮಾಡಿರುವುದು ಪ್ರಸ್ತುತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿದೆ.

ಫೆಬ್ರವರಿ 5, 2026ರಂದು ವಿಚಾರಣೆಗೆ ಹಾಜರಾಗುವಂತೆ ಕುನಾಲ್ ಕಾಮ್ರಾ ಅವರಿಗೆ ಸೂಚಿಸಲಾಗಿತ್ತು. ಹಾಗಾಗಿ, ಕಾಮ್ರಾ ಅವರು ವಿಚಾರಣೆಗೆ ಹಾಜರಾಗಲು ಮುಂಬೈಗೆ ಬಂದಿದ್ದರು. ಆದರೆ, ಸಮಿತಿಯೇ ವಿಚಾರಣೆಯನ್ನು ಮುಂದೂಡಿದೆ ಎನ್ನಲಾಗಿದೆ.

ಮಾಧ್ಯಮಗಳಲ್ಲಿ ಕಾಮ್ರಾ ಅವರೇ ಸಮಯ ಕೇಳಿದ್ದಾರೆ ಎಂದು ಸಮಿತಿಯವರು ಹೇಳಿರುವುದಾಗಿ ವರದಿಯಾಗಿದೆ. ಇದನ್ನು ಕಾಮ್ರಾ ತಳ್ಳಿ ಹಾಕಿದ್ದು, ಸಮಿತಿಯೇ ವಿಚಾರಣೆಯನ್ನು ಫೆಬ್ರವರಿ 17, 2026ಕ್ಕೆ ಮುಂದೂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣವು 2025ರ ಆರಂಭದಲ್ಲಿ ಕಾಮ್ರಾ ಅವರು ಮಾಡಿದ ‘ನಯಾ ಭಾರತ್’ ಎಂಬ ಸ್ಟ್ಯಾಂಡ್-ಅಪ್ ಕಾಮಿಡಿ ಶೋಗೆ ಸಂಬಂಧಿಸಿದೆ. ಈ ಶೋನಲ್ಲಿ ಏಕನಾಥ್ ಶಿಂದೆ ಅವರನ್ನು ಕಾಮ್ರಾ “ದ್ರೋಹಿ” (Traitor) ಎಂದು ಕರೆದಿದ್ದರು ಮತ್ತು ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಿದ್ದನ್ನು ಟೀಕಿಸುವ ಭರದಲ್ಲಿ ಕಾಮ್ರಾ ಈ ಪದ ಬಳಸಿದ್ದರು. ಇದು ಮುಖ್ಯಮಂತ್ರಿಗಳ ಘನತೆಗೆ ಧಕ್ಕೆ ತಂದಿದೆ ಎಂದು ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರು ದೂರು ನೀಡಿದ್ದರು.

ದೂರು ಆಧರಿಸಿ ಮುಂಬೈನ ಖಾರ್ ಠಾಣೆ ಪೊಲೀಸರು ಕಾಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದೇ ಕಾರಣಕ್ಕೆ ಮಹಾರಾಷ್ಟ್ರ ವಿಧಾನಸಭೆಯ ಹಕ್ಕುಚ್ಯುತಿ ಸಮಿತಿ ಕೂಡ ಕಾಮ್ರಾ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಪೊಲೀಸರು ಈ ಹಿಂದೆ ಮೂರು ಬಾರಿ ಕಾಮ್ರಾಗೆ ಸಮನ್ಸ್ ನೀಡಿದ್ದರು.

ತಾನೊಬ್ಬ ಹಾಸ್ಯ ಕಲಾವಿದನಾಗಿ ವಿಡಂಬನೆ ಮಾಡಿದ್ದೇನೆ ಹೊರತು, ಅದು ಹಕ್ಕುಚ್ಯುತಿಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಕಾಮ್ರಾ ವಾದಿಸಿದ್ದಾರೆ. ಎಫ್‌ಐಆರ್ ವಿಚಾರವಾಗಿ ಬಾಂಬೆ ಹೈಕೋರ್ಟ್ ಈಗಾಗಲೇ ಕಾಮ್ರಾಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ಸಹಯೋಗ್ ವಿರುದ್ದ ಮತ್ತೆ ಕೋರ್ಟ್ ಮೆಟ್ಟಿಲೇರಿದ ಕಾಮ್ರಾ

ಇದೀಗ, ಕೇಂದ್ರ ಸರ್ಕಾರದ ‘ಸಹಯೋಗ್’ ಪೋರ್ಟಲ್ ಮತ್ತು 2025ರ ಐಟಿ (ಮಾಹಿತಿ ತಂತ್ರಜ್ಞಾನ) ನಿಯಮಗಳ ತಿದ್ದುಪಡಿಯನ್ನು ಪ್ರಶ್ನಿಸಿ ಕಾಮ್ರಾ ಬಾಂಬೆ ಹೈಕೋರ್ಟ್‌ಗೆ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.

ಪೋರ್ಟಲ್ ಯಾವುದೇ ಮುನ್ಸೂಚನೆ ಇಲ್ಲದೆ ಸಾಮಾಜಿಕ ಜಾಲತಾಣಗಳ ವಿಷಯಗಳನ್ನು (Content) ತೆಗೆದುಹಾಕಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ, ಇದು ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದು ಅವರು ವಾದಿಸಿದ್ದಾರೆ.

ಈ ಹಿಂದೆ ಸರ್ಕಾರವು ತರಲು ಉದ್ದೇಶಿಸಿದ್ದ ‘ಫ್ಯಾಕ್ಟ್ ಚೆಕ್ ಯುನಿಟ್’ ವಿರುದ್ಧ ಕಾಮ್ರಾ ಹೂಡಿದ್ದ ದಾವೆಯಲ್ಲಿ ಹೈಕೋರ್ಟ್ ಆ ನಿಯಮವನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಈಗಿನ ಪೋರ್ಟಲ್ ವಿರುದ್ಧವೂ ಅವರು ಹೋರಾಟ ನಡೆಸುತ್ತಿದ್ದಾರೆ.

ಓಲಾ ಎಲೆಕ್ಟ್ರಿಕ್ ಜೊತೆಗಿನ ವಿವಾದ

ಕಳೆದ ವರ್ಷದಿಂದ ಓಲಾ ಕಂಪನಿಯ ಸಿಇಒ ಭವಿಶ್ ಅಗರ್ವಾಲ್ ಮತ್ತು ಕುನಾಲ್ ಕಾಮ್ರಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಸಂಘರ್ಷ ನಡೆಯುತ್ತಿದೆ.

ಓಲಾ ಸ್ಕೂಟರ್‌ಗಳ ಸರ್ವಿಸ್ ಸಮಸ್ಯೆಗಳ ಬಗ್ಗೆ ಕಾಮ್ರಾ ಸರಣಿ ಪೋಸ್ಟ್‌ಗಳನ್ನು ಹಾಕಿದ್ದರು. ಇದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು (ಸಿಸಿಪಿಎ) ಓಲಾ ಕಂಪನಿಗೆ ನೋಟಿಸ್ ನೀಡಲು ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...