Homeಮುಖಪುಟಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

- Advertisement -
- Advertisement -

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಫೈಝಾನ್‌ಗೆ ಪೊಲೀಸರು ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ರಕ್ಷಕರಾದ ಪೊಲೀಸರೇ ಅಮಾನವೀಯವಾಗಿ ವರ್ತಿಸಿದ್ದರ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರ ನಿಷ್ಪಕ್ಷಪಾತ ಕಾರ್ಯನಿರ್ಹಣೆಯ ಬಗ್ಗೆ ಪ್ರಶ್ನೆ ಮೂಡಿತ್ತು.

ಪೊಲೀಸರು ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ 23 ವರ್ಷದ ಯುವಕ ಫೈಝಾನ್ ಸಾವಿಗೀಡಾಗಿದ್ದ. ಆತನ ಕುಟುಂಬ ಪೊಲೀಸರ ವಿರುದ್ದ ಅಕ್ರಮ ಬಂಧನ ಮತ್ತು ವೈದ್ಯಕೀಯ ಚಿಕಿತ್ಸೆಯ ನಿರಾಕರಣೆಯ ಆರೋಪ ಮಾಡಿದೆ.

ಫೆಬ್ರವರಿ 4, 2026ರಂದು, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮಾಯಾಂಕ್ ಗೋಯೆಲ್ ಅವರು ಕೇಂದ್ರ ತನಿಖಾ ದಳ (ಸಿಬಿಐ) ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸಿದ್ದಾರೆ ಅಥವಾ ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ಅವರಿಗೆ ಫೆಬ್ರವರಿ 24,2026 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಲಾಗಿದೆ.

ಈ ಹಿಂದೆ ದೆಹಲಿ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಕಲಂ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಸಿಬಿಐ ತನ್ನ ತನಿಖೆಯಲ್ಲಿ ಕೊಲೆ ಮಾಡುವ ಸ್ಪಷ್ಟ ಉದ್ದೇಶ ಕಂಡುಬಂದಿಲ್ಲ ಎಂದು ತಿಳಿಸಿ, ಅದನ್ನು ಕಲಂ 304(II) ಅಡಿಯಲ್ಲಿ ‘ಕೊಲೆಯಲ್ಲದ ಅಪರಾಧಯುತ ನರಹತ್ಯೆ’ ಎಂದು ಮಾರ್ಪಡಿಸಿದೆ. ಅಲ್ಲದೆ, ಕಲಂ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 325 (ತೀವ್ರವಾದ ನೋವುಂಟುಮಾಡುವುದು) ಅಡಿ ಆರೋಪ ಹೊರಿಸಿದೆ.

ಜುಲೈ 23, 2024ರಂದು ದೆಹಲಿ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ, ಸಿಬಿಐ ಆಗಸ್ಟ್ 6, 2024ರಂದು ಐಪಿಸಿ ಕಲಂ 147, 148, 149 ಮತ್ತು 302 ರ ಅಡಿಯಲ್ಲಿ ಎಫ್‌ಐಆರ್ (RC-09S/2024/SC-II/2024) ದಾಖಲಿಸಿತ್ತು. ಫೈಝಾನ್ ಅವರ ತಾಯಿ ಕಿಸ್ಮತುನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ತನಿಖೆಯನ್ನು ದೆಹಲಿ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿತ್ತು.

2019ರ ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಕರ್ದಂಪುರಿಯಲ್ಲಿ ಪೊಲೀಸರು ತನ್ನ ಮಗನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ, ನಂತರ ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಅಲ್ಲಿ ಆತನಿಗೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸಲಾಗಿದೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ ಎಂದು ಕಿಸ್ಮತುನ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.

ಜುಲೈ 2024ರಲ್ಲಿ, ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರು ದೆಹಲಿ ಪೊಲೀಸರ ತನಿಖೆಯನ್ನು ತೀವ್ರವಾಗಿ ಟೀಕಿಸಿದ್ದರು. ಇದನ್ನು “ಆಲಸ್ಯ ಮತ್ತು ಅಸ್ಪಷ್ಟ” ಎಂದಿದ್ದರು. ಪ್ರಕರಣವು ದ್ವೇಷಾಪರಾಧದ ವರ್ಗಕ್ಕೆ ಸೇರುವಂತೆ ತೋರುತ್ತಿದೆ ಎಂದು ಹೇಳಿದ್ದರು.

ಆರೋಪಿಗಳು ಮತ್ತು ತನಿಖಾಧಿಕಾರಿಗಳು ಒಂದೇ ಇಲಾಖೆಗೆ ಸೇರಿದವರಾದಾಗ ತನಿಖೆ ನ್ಯಾಯಯುತವಾಗಿ ನಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿತ್ತು. ಇದೇ ಕಾರಣಕ್ಕೆ ಈ ಹಿಂದೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

“ಕಾನೂನಿನ ರಕ್ಷಕರೇ ಕಾನೂನನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವಾಗ ಮತ್ತು ಅವರೇ ಆ ಪ್ರಕರಣದ ತನಿಖೆ ನಡೆಸುವ ಸಂಸ್ಥೆಯ ಭಾಗವಾಗಿದ್ದಾಗ, ಅಂತಹ ತನಿಖೆಯು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಸಾಧ್ಯವಿಲ್ಲ,” ಎಂದು ಹೈಕೋರ್ಟ್ ಮಾರ್ಮಿಕವಾಗಿ ನುಡಿದಿತ್ತು.

ತನಿಖಾ ಪ್ರಕ್ರಿಯೆಯ ಘನತೆ ಮತ್ತು ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಲು, ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ವರ್ಗಾಯಿಸುವುದು ಅನಿವಾರ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಕ್ಷ್ಯಗಳಿದ್ದರೂ ಸಹ, ನಾಲ್ಕು ವರ್ಷಗಳ ಕಾಲ ಸ್ಥಳೀಯ ಪೊಲೀಸರು ನಡೆಸಿದ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 323ರ ಅಡಿಯಲ್ಲಿ ಇತರ ದಂಡ ವಿಧಿಸಬಹುದಾದ ಆರೋಪಪಟ್ಟಿಯನ್ನು ಸಿಬಿಐ ಸಲ್ಲಿಸಿದೆ.

ಬುಧವಾರ, ಸಿಬಿಐ ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಿದ ವಿಶೇಷ ಸಿಬಿಐ ನ್ಯಾಯಾಲಯವು, “ತನಿಖೆಯ ಸಮಯದಲ್ಲಿ, ಐಒ (ತನಿಖಾ ಅಧಿಕಾರಿ) ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಮತ್ತು ನಡೆಸಿದ ತನಿಖೆಯ ಆಧಾರದ ಮೇಲೆ, ಆರೋಪಿ ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಪ್ರಸ್ತುತ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಐಪಿಸಿ ಸೆಕ್ಷನ್ 323, 325, 304(II) r/w ಸೆಕ್ಷನ್ 34 ಮತ್ತು ಅದರ ಪ್ರಮುಖ ಅಪರಾಧಗಳ ಅಡಿಯಲ್ಲಿ ಅಪರಾಧವನ್ನು ಗುರುತಿಸಲು ಸಾಕಷ್ಟು ದಾಖಲೆಗಳಿವೆ” ಎಂದು ಹೇಳಿದೆ.

ಫೆಬ್ರವರಿ 2025ರಲ್ಲಿ, ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯವು ಜ್ಯೋತಿ ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವಿರುದ್ಧವೂ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...