Homeಮುಖಪುಟಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

- Advertisement -
- Advertisement -

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಫೈಝಾನ್‌ಗೆ ಪೊಲೀಸರು ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ರಕ್ಷಕರಾದ ಪೊಲೀಸರೇ ಅಮಾನವೀಯವಾಗಿ ವರ್ತಿಸಿದ್ದರ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರ ನಿಷ್ಪಕ್ಷಪಾತ ಕಾರ್ಯನಿರ್ಹಣೆಯ ಬಗ್ಗೆ ಪ್ರಶ್ನೆ ಮೂಡಿತ್ತು.

ಪೊಲೀಸರು ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ 23 ವರ್ಷದ ಯುವಕ ಫೈಝಾನ್ ಸಾವಿಗೀಡಾಗಿದ್ದ. ಆತನ ಕುಟುಂಬ ಪೊಲೀಸರ ವಿರುದ್ದ ಅಕ್ರಮ ಬಂಧನ ಮತ್ತು ವೈದ್ಯಕೀಯ ಚಿಕಿತ್ಸೆಯ ನಿರಾಕರಣೆಯ ಆರೋಪ ಮಾಡಿದೆ.

ಫೆಬ್ರವರಿ 4, 2026ರಂದು, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮಾಯಾಂಕ್ ಗೋಯೆಲ್ ಅವರು ಕೇಂದ್ರ ತನಿಖಾ ದಳ (ಸಿಬಿಐ) ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸಿದ್ದಾರೆ ಅಥವಾ ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ಅವರಿಗೆ ಫೆಬ್ರವರಿ 24,2026 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಲಾಗಿದೆ.

ಈ ಹಿಂದೆ ದೆಹಲಿ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಕಲಂ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಸಿಬಿಐ ತನ್ನ ತನಿಖೆಯಲ್ಲಿ ಕೊಲೆ ಮಾಡುವ ಸ್ಪಷ್ಟ ಉದ್ದೇಶ ಕಂಡುಬಂದಿಲ್ಲ ಎಂದು ತಿಳಿಸಿ, ಅದನ್ನು ಕಲಂ 304(II) ಅಡಿಯಲ್ಲಿ ‘ಕೊಲೆಯಲ್ಲದ ಅಪರಾಧಯುತ ನರಹತ್ಯೆ’ ಎಂದು ಮಾರ್ಪಡಿಸಿದೆ. ಅಲ್ಲದೆ, ಕಲಂ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 325 (ತೀವ್ರವಾದ ನೋವುಂಟುಮಾಡುವುದು) ಅಡಿ ಆರೋಪ ಹೊರಿಸಿದೆ.

ಜುಲೈ 23, 2024ರಂದು ದೆಹಲಿ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ, ಸಿಬಿಐ ಆಗಸ್ಟ್ 6, 2024ರಂದು ಐಪಿಸಿ ಕಲಂ 147, 148, 149 ಮತ್ತು 302 ರ ಅಡಿಯಲ್ಲಿ ಎಫ್‌ಐಆರ್ (RC-09S/2024/SC-II/2024) ದಾಖಲಿಸಿತ್ತು. ಫೈಝಾನ್ ಅವರ ತಾಯಿ ಕಿಸ್ಮತುನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ತನಿಖೆಯನ್ನು ದೆಹಲಿ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿತ್ತು.

2019ರ ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಕರ್ದಂಪುರಿಯಲ್ಲಿ ಪೊಲೀಸರು ತನ್ನ ಮಗನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ, ನಂತರ ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಅಲ್ಲಿ ಆತನಿಗೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸಲಾಗಿದೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ ಎಂದು ಕಿಸ್ಮತುನ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.

ಜುಲೈ 2024ರಲ್ಲಿ, ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರು ದೆಹಲಿ ಪೊಲೀಸರ ತನಿಖೆಯನ್ನು ತೀವ್ರವಾಗಿ ಟೀಕಿಸಿದ್ದರು. ಇದನ್ನು “ಆಲಸ್ಯ ಮತ್ತು ಅಸ್ಪಷ್ಟ” ಎಂದಿದ್ದರು. ಪ್ರಕರಣವು ದ್ವೇಷಾಪರಾಧದ ವರ್ಗಕ್ಕೆ ಸೇರುವಂತೆ ತೋರುತ್ತಿದೆ ಎಂದು ಹೇಳಿದ್ದರು.

ಆರೋಪಿಗಳು ಮತ್ತು ತನಿಖಾಧಿಕಾರಿಗಳು ಒಂದೇ ಇಲಾಖೆಗೆ ಸೇರಿದವರಾದಾಗ ತನಿಖೆ ನ್ಯಾಯಯುತವಾಗಿ ನಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿತ್ತು. ಇದೇ ಕಾರಣಕ್ಕೆ ಈ ಹಿಂದೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

“ಕಾನೂನಿನ ರಕ್ಷಕರೇ ಕಾನೂನನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವಾಗ ಮತ್ತು ಅವರೇ ಆ ಪ್ರಕರಣದ ತನಿಖೆ ನಡೆಸುವ ಸಂಸ್ಥೆಯ ಭಾಗವಾಗಿದ್ದಾಗ, ಅಂತಹ ತನಿಖೆಯು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಸಾಧ್ಯವಿಲ್ಲ,” ಎಂದು ಹೈಕೋರ್ಟ್ ಮಾರ್ಮಿಕವಾಗಿ ನುಡಿದಿತ್ತು.

ತನಿಖಾ ಪ್ರಕ್ರಿಯೆಯ ಘನತೆ ಮತ್ತು ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಲು, ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ವರ್ಗಾಯಿಸುವುದು ಅನಿವಾರ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಕ್ಷ್ಯಗಳಿದ್ದರೂ ಸಹ, ನಾಲ್ಕು ವರ್ಷಗಳ ಕಾಲ ಸ್ಥಳೀಯ ಪೊಲೀಸರು ನಡೆಸಿದ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 323ರ ಅಡಿಯಲ್ಲಿ ಇತರ ದಂಡ ವಿಧಿಸಬಹುದಾದ ಆರೋಪಪಟ್ಟಿಯನ್ನು ಸಿಬಿಐ ಸಲ್ಲಿಸಿದೆ.

ಬುಧವಾರ, ಸಿಬಿಐ ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಿದ ವಿಶೇಷ ಸಿಬಿಐ ನ್ಯಾಯಾಲಯವು, “ತನಿಖೆಯ ಸಮಯದಲ್ಲಿ, ಐಒ (ತನಿಖಾ ಅಧಿಕಾರಿ) ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಮತ್ತು ನಡೆಸಿದ ತನಿಖೆಯ ಆಧಾರದ ಮೇಲೆ, ಆರೋಪಿ ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಪ್ರಸ್ತುತ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಐಪಿಸಿ ಸೆಕ್ಷನ್ 323, 325, 304(II) r/w ಸೆಕ್ಷನ್ 34 ಮತ್ತು ಅದರ ಪ್ರಮುಖ ಅಪರಾಧಗಳ ಅಡಿಯಲ್ಲಿ ಅಪರಾಧವನ್ನು ಗುರುತಿಸಲು ಸಾಕಷ್ಟು ದಾಖಲೆಗಳಿವೆ” ಎಂದು ಹೇಳಿದೆ.

ಫೆಬ್ರವರಿ 2025ರಲ್ಲಿ, ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯವು ಜ್ಯೋತಿ ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವಿರುದ್ಧವೂ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...