Homeಮುಖಪುಟಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, “ಯಾವುದೇ ಸಂದರ್ಭದಲ್ಲೂ ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಜಾರಿಗೆ ತರಲಾಗುವುದಿಲ್ಲ ಎಂದು ಎಲ್‌ಡಿಎಫ್‌ ಸರ್ಕಾರ ಪುನರುಚ್ಚರಿಸುತ್ತದೆ. 2027ರ ರಾಷ್ಟ್ರವ್ಯಾಪಿ ಜನಗಣತಿ ಸಮೀಪಿಸುತ್ತಿದ್ದಂತೆ, ‘ಎನ್‌ಪಿಆರ್‌’ಗಾಗಿ ಯಾವುದೇ ಡೇಟಾ ಸಂಗ್ರಹಿಸದಂತೆ ನಾವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದೇವೆ. ಇದು 2019 ರಿಂದ ನಮ್ಮ ದೃಢವಾದ ನಿಲುವನ್ನು ಎತ್ತಿಹಿಡಿಯುತ್ತದೆ. ಸುಪ್ರೀಂ ಕೋರ್ಟ್‌ನಲ್ಲಿ ಅಸಂವಿಧಾನಿಕ ಸಿಎಎ ಪ್ರಶ್ನಿಸಿದ ಮತ್ತು ಅದರ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ ಮೊದಲ ರಾಜ್ಯ ಕೇರಳ. ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಮತ್ತು ಎನ್‌ಪಿಆರ್/ಎನ್‌ಆರ್‌ಸಿಯಂತಹ ತಾರತಮ್ಯದ ಪ್ರಕ್ರಿಯೆಗಳು ನಮ್ಮ ಜನರಿಗೆ ಬೆದರಿಕೆ ಹಾಕಲು ನಾವು ಅನುಮತಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಎಂಬುವುದು ಭಾರತದಲ್ಲಿ ಸಾಮಾನ್ಯವಾಗಿ ವಾಸಿಸುವ ಎಲ್ಲಾ ನಿವಾಸಿಗಳ ಪಟ್ಟಿಯಾಗಿದೆ. ಇದನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ನಂತರ 2015ರಲ್ಲಿ ಹೆಸರು, ಲಿಂಗ, ಹುಟ್ಟಿದ ದಿನಾಂಕ ಮತ್ತು ಹುಟ್ಟಿದ ಸ್ಥಳದಂತಹ ಕೆಲವು ಪ್ರಮುಖ ವಿವರಗಳನ್ನು ನವೀಕರಿಸಲಾಯಿತು. ದೇಶದ ಪ್ರತಿಯೊಬ್ಬ ನಿವಾಸಿಯ ಸಮಗ್ರ ಗುರುತಿನ ಡೇಟಾಬೇಸ್ ಅನ್ನು ರಚಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರ ಹೇಳಿಕೊಂಡಿದೆ.

ಈ ಬಾರಿ ಎನ್‌ಪಿಆರ್ ಪ್ರಕ್ರಿಯೆಯಲ್ಲಿ ಕೆಲವು ಹೆಚ್ಚುವರಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ, ಇದು ಮುಂದೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರಲು ದಾರಿಯಾಗಬಹುದು ಎಂಬುವುದು ಕೇರಳ ಸರ್ಕಾರದ ಆತಂಕ. ಆದ್ದರಿಂದಲೇ ಕೇರಳ ಸರ್ಕಾರ ಜನಗಣತಿಯನ್ನು ಮಾತ್ರ ಬೆಂಬಲಿಸಿ, ಎನ್‌ಪಿಆರ್ ದತ್ತಾಂಶ ಸಂಗ್ರಹಣೆಯನ್ನು ವಿರೋಧಿಸಿದೆ.

ಫೆಬ್ರವರಿ 4, 2026 ರಂದು ಕೇರಳ ಸರ್ಕಾರವು ಹೊಸ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಎನ್‌ಪಿಆರ್‌ ನವೀಕರಣಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದನ್ನು ಪುನರುಚ್ಚರಿಸಿದೆ. ಈ ಸ್ಥಗಿತ ಆದೇಶವು ಡಿಸೆಂಬರ್ 20, 2019 ರಿಂದಲೇ ಜಾರಿಯಲ್ಲಿದ್ದು, ಈಗ ಅದನ್ನು ಮತ್ತೊಮ್ಮೆ ದೃಢೀಕರಿಸಲಾಗಿದೆ.

ಕೇಂದ್ರ ಸರ್ಕಾರ ಫೆಬ್ರವರಿ 1 ರಂದು ಮಂಡಿಸಿದ ಬಜೆಟ್‌ನಲ್ಲಿ “ಜನಗಣತಿ, ಸಮೀಕ್ಷೆ ಮತ್ತು ಅಂಕಿಅಂಶಗಳು/ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ” ಚಟುವಟಿಕೆಗಳಿಗಾಗಿ 6,000 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದೆ. ಈ ಘೋಷಣೆ ಹೊರಬಿದ್ದ ಕೇವಲ ಮೂರೇ ದಿನಗಳಲ್ಲಿ ಕೇರಳ ಸರ್ಕಾರ ತನ್ನ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರ ಹಣಕಾಸು ಸಚಿವರು ಮಂಡಿಸಿದ ಬಜೆಟ್ ದಾಖಲೆಗಳಲ್ಲಿ, ಮೀಸಲಿಟ್ಟ 6,000 ಕೋಟಿ ರೂಪಾಯಿ ಹಣ ಕೇವಲ ಜನಗಣತಿಗೆ ಮಾತ್ರವಲ್ಲದೆ, ರಾಷ್ಟ್ರೀಯ ಯೋಜನೆಗೂ ಸೇರಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ಹಣವನ್ನು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ, 2027ರ ಜನಗಣತಿ ವೆಚ್ಚಗಳು ಮತ್ತು ಎನ್‌ಪಿಆರ್ ಸೇರಿದಂತೆ ಆರ್‌ಜಿಐನ ವಿವಿಧ ಯೋಜನೆಗಳಿಗಾಗಿ ಬಳಸಲಾಗುವುದು ಎಂದು ತಿಳಿಸಲಾಗಿದೆ.

ಬಜೆಟ್‌ನಲ್ಲಿ ಎನ್‌ಪಿಆರ್ ಹೆಸರನ್ನು ಸೇರಿಸಿರುವುದು ಕೇರಳ ಸರ್ಕಾರದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಜನಗಣತಿಯ ನೆಪದಲ್ಲಿ ಎನ್‌ಪಿಆರ್ ಅಂಕಿಅಂಶಗಳನ್ನು ಸಂಗ್ರಹಿಸಲು ಕೇಂದ್ರವು ಸಿದ್ಧತೆ ನಡೆಸುತ್ತಿದೆ ಎಂದು ಕೇರಳವು ತನ್ನ ಹೊಸ ಅಧಿಸೂಚನೆಯನ್ನು ಹೊರಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...