Homeಮುಖಪುಟ'ರಾಜಕೀಯ ಪ್ರೇರಿತ': ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು ‘ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ ದುರುಪಯೋಗ’ ಎಂಬುವುದಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಎಫ್‌ಐಆರ್ ದಾಖಲಿಸುವಂತೆ ಕೋರಿ ವಿಕಾಸ್ ತ್ರಿಪಾಠಿ ಎಂಬವರು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ಸೋನಿಯಾ ಗಾಂಧಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಈ ಪ್ರಕರಣ ಶನಿವಾರ (ಫೆ.7) ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಸೋನಿಯಾ ಗಾಂಧಿ ಪ್ರತಿಕ್ರಿಯೆ ಸಲ್ಲಿಸಿದ್ದಾರೆ ಎಂದು ಗಮನಿಸಿದ ನ್ಯಾಯಾಧೀಶರು. ಫೆ. 21ರಂದು ವಾದ ಮಂಡನೆಗೆ ಪ್ರಕರಣವನ್ನು ಪಟ್ಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಆರಂಭದಲ್ಲಿ ಸೆಪ್ಟೆಂಬರ್ 11, 2025 ರಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ವೈಭವ್ ಚೌರಾಸಿಯಾ ಅವರು ವಜಾಗೊಳಿಸಿದ್ದರು. ಇದನ್ನು ಪ್ರಶ್ನಿಸಿ ತ್ರಿಪಾಠಿ ಸೆಷನ್ಸ್ ನ್ಯಾಯಾಲಯದಲ್ಲಿ ಮರು ಪರಿಶೀಲನೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ನ್ಯಾಯಾಲಯವು ಡಿಸೆಂಬರ್ 9, 2025 ರಂದು ಸೋನಿಯಾ ಗಾಂಧಿಯವರಿಗೆ ನೋಟಿಸ್ ಜಾರಿಗೊಳಿಸಿತ್ತು.

1983ರ ಏಪ್ರಿಲ್‌ನಲ್ಲಿ ಸೋನಿಯಾ ಗಾಂಧಿಯವರು ಭಾರತದ ಪೌರತ್ವ ಪಡೆದಿದ್ದಾರೆ. ಆದರೆ, ಅದಕ್ಕೂ ಮುನ್ನ 1980ರಲ್ಲಿ ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಲಾಗಿತ್ತು ಎಂಬುವುದು ತ್ರಿಪಾಠಿ ಅವರ ಆರೋಪವಾಗಿದೆ.

1980ರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು. ನಂತರ 1982ರಲ್ಲಿ ಅದನ್ನು ಅಳಿಸಲಾಯಿತು. ಆ ಬಳಿಕ 1983ರಲ್ಲಿ ಮತ್ತೆ ಸೇರಿಸಲಾಯಿತು ಎಂದು ತ್ರಿಪಾಠಿ ಹೇಳಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಸಿರುವ ಸಂಕ್ಷಿಪ್ತ ಪ್ರತಿಕ್ರಿಯೆಯಲ್ಲಿ ಸೋನಿಯಾ ಗಾಂಧಿ ತಮ್ಮ ವಿರುದ್ಧದ ಆರೋಪವನ್ನು ಬಲವಾಗಿ ವಿರೋಧಿಸಿದ್ದಾರೆ. ಈ ದೂರು ಕೇವಲ ಊಹೆಗಳು, ಮಾಧ್ಯಮ ವರದಿಗಳು ಮತ್ತು ಕಾಲ್ಪನಿಕ ವಿಷಯಗಳನ್ನು ಆಧರಿಸಿದೆಯೇ ಹೊರತು, ಯಾವುದೇ ಮೂಲಭೂತ ದಾಖಲೆಗಳನ್ನು ಪುರಾವೆಯಾಗಿ ಒದಗಿಸಿಲ್ಲ ಎಂದು ಅವರು ವಾದಿಸಿದ್ದಾರೆ. ಅಂದರೆ, ತನ್ನ ಮೇಲಿನ ಆರೋಪಗಳಿಗೆ ಯಾವುದೇ ಭದ್ರವಾದ ಅಡಿಪಾಯ ಅಥವಾ ಅಧಿಕೃತ ದಾಖಲೆಗಳಿಲ್ಲ ಎಂದು ಸೋನಿಯಾ ಗಾಂಧಿ ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

“ದೂರುದಾರರು ಯಾವುದೇ ಆಧಾರವಿಲ್ಲದೆ ಅತ್ಯಂತ ಗಂಭೀರವಾದ ಆರೋಪಗಳನ್ನು ಬೇಜವಾಬ್ದಾರಿಯಿಂದ ಮಾಡಿದ್ದಾರೆ. ಈ ಆರೋಪಗಳು ಕೇವಲ ಅವರ ಸ್ವಂತ ಕಲ್ಪನೆ, ವೈಯಕ್ತಿಕ ಅಭಿಪ್ರಾಯ ಅಥವಾ ಅನಗತ್ಯ ಊಹೆಗಳನ್ನು ಆಧರಿಸಿವೆ ಹೊರತು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ” ಎಂದಿದ್ದಾರೆ.

“ದೂರುದಾರರು ಮತದಾರರ ನೋಂದಣಿಗೆ ಸಲ್ಲಿಸಿದ ಎನ್ನಲಾದ ಅರ್ಜಿಗಳ ಪ್ರತಿಗಳು, ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳು ಅಥವಾ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ. ಅಷ್ಟೇ ಅಲ್ಲದೆ, ಅಂತಹ ದಾಖಲೆಗಳನ್ನು ಕಾನೂನುಬದ್ಧವಾಗಿ ಪಡೆದುಕೊಳ್ಳಲು ಯಾವುದೇ ಪ್ರಯತ್ನವನ್ನೂ ಮಾಡಿಲ್ಲ. ಅವರು ಕೇವಲ ಗಾಳಿಯಲ್ಲಿ ಗುಂಡು ಹೊಡೆಯುವಂತೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಿದ್ದಾರೆಯೇ ಹೊರತು, ಅದನ್ನು ಸಾಬೀತುಪಡಿಸುವ ಒಂದು ಅಧಿಕೃತ ದಾಖಲೆಯೂ ಅವರ ಬಳಿ ಇಲ್ಲ” ಎಂದು ಹೇಳಿದ್ದಾರೆ.

ದೂರುದಾರರಾದ ವಿಕಾಸ್ ತ್ರಿಪಾಠಿ ಅವರು ತಮ್ಮ ದೂರಿನ 8ನೇ ಪ್ಯಾರಾದಲ್ಲಿ, “1982ರಲ್ಲಿ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು” ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ, “ಸಾರ್ವಜನಿಕರು ಅಥವಾ ಮಾಧ್ಯಮಗಳು ನಡೆಸಿದ್ದವು ಎನ್ನಲಾದ ಈ ಪ್ರತಿಭಟನೆಗಳು ನಡೆದು 43 ವರ್ಷಗಳ ನಂತರ, ದೂರುದಾರರು ಇದನ್ನು ‘ತಮ್ಮ ನೇರ ಜ್ಞಾನಕ್ಕೆ ಬಂದ ವಿಷಯ’ ಎಂದು ಕ್ರಿಮಿನಲ್ ದೂರಿನಲ್ಲಿ ದಾಖಲಿಸಿರುವುದು ಕುತೂಹಲಕಾರಿಯಾಗಿದೆ” ಎಂದಿದ್ದಾರೆ.

“ಈ ಆರೋಪಗಳು 1980 ರಿಂದ 1983 ರ ಅವಧಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿವೆ ಮತ್ತು ದಶಕಗಳ ಹಿಂದೆಯೇ ಚರ್ಚೆಗೆ ಬಂದು ತಣ್ಣಗಾಗಿದ್ದ ವಿವಾದಗಳನ್ನು ಆಧರಿಸಿವೆ. ಇಷ್ಟು ದೀರ್ಘಕಾಲದ ನಂತರ, ಅಂದರೆ 40 ವರ್ಷಗಳ ಬಳಿಕ ಇಂತಹ ಹಳೆಯ ವಿಷಯಗಳನ್ನು ಮತ್ತೆ ಕೆದಕುವುದರಿಂದ, ಅವುಗಳಿಗೆ ಸಂಬಂಧಿಸಿದ ನಂಬಲರ್ಹ ಪುರಾವೆಗಳನ್ನು ಒದಗಿಸುವುದು ಅಸಾಧ್ಯ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಈ ವಿಳಂಬಿತ ದೂರು “ದುರುದ್ದೇಶಪೂರಿತ ಕಾನೂನು ಕ್ರಮ”. ಅಲ್ಲದೆ, ಇಷ್ಟು ದಶಕಗಳ ನಂತರ ವಿಚಾರಣೆ ನಡೆಸುವುದು ವ್ಯಕ್ತಿಯ ಘನತೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಇದು ಸಂವಿಧಾನದ 21ನೇ ವಿಧಿಯ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆಯಾಗಿದೆ” ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

“ಪೌರತ್ವಕ್ಕೆ ಸಂಬಂಧಿಸಿದ ಪ್ರಶ್ನೆಗಳು ಮತ್ತು ನಿರ್ಧಾರಗಳು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಅದೇ ರೀತಿ, ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ವಿವಾದಗಳು ಅಥವಾ ಆಕ್ಷೇಪಣೆಗಳನ್ನು ನಿರ್ವಹಿಸುವ ಸಂಪೂರ್ಣ ಅಧಿಕಾರ ಭಾರತೀಯ ಚುನಾವಣಾ ಆಯೋಗಕ್ಕೆ ಮಾತ್ರ ಇರುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಭಾರತೀಯ ದಂಡ ಸಂಹಿತೆ (ಐಪಿಸಿ) ಅಥವಾ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಅಡಿಯಲ್ಲಿ ಅಪರಾಧಗಳೆಂದು ಬಿಂಬಿಸಿ, ಪೌರತ್ವ ಅಥವಾ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಖಾಸಗಿ ದೂರುಗಳನ್ನು ವಿಚಾರಣೆಗೆ ತೆಗೆದುಕೊಳ್ಳಲು ಕ್ರಿಮಿನಲ್ ನ್ಯಾಯಾಲಯಗಳಿಗೆ ಅಧಿಕಾರವಿಲ್ಲ” ಎಂದು ಸೋನಿಯಾ ಗಾಂಧಿ ವಾದಿಸಿದ್ದಾರೆ.

“ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರ ವ್ಯಾಪ್ತಿಯನ್ನು ಇದು ಮೀರುತ್ತದೆ. ಪೌರತ್ವ ಮತ್ತು ಚುನಾವಣೆ ನಿರ್ವಹಣೆ ಆಯಾ ಸ್ವತಂತ್ರ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಸಂವಿಧಾನದ 329ನೇ ವಿಧಿಯು ಚುನಾವಣಾ ಪ್ರಕ್ರಿಯೆಗಳಲ್ಲಿ ನ್ಯಾಯಾಂಗದ ಹಸ್ತಕ್ಷೇಪವನ್ನು ಸ್ಪಷ್ಟವಾಗಿ ನಿರ್ಬಂಧಿಸುತ್ತದೆ. ಮತದಾರರ ಪಟ್ಟಿ ತಯಾರಿಸುವುದು ಚುನಾವಣಾ ಪ್ರಕ್ರಿಯೆಯ ಭಾಗವಾಗಿರುವುದರಿಂದ, ಅದನ್ನು ಕ್ರಿಮಿನಲ್ ನ್ಯಾಯಾಲಯದಲ್ಲಿ ಪ್ರಶ್ನಿಸುವುದು ಅಸಂವಿಧಾನಿಕ ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್...