Homeಗೌರಿ ಕಣ್ಣೋಟರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ...

ರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ…

ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

- Advertisement -
- Advertisement -

ಭಾರತ-ಪಾಕಿಸ್ತಾನ ಗಡಿಯಲ್ಲಿರುವ ವಾಘಾದಲ್ಲಿ ಪ್ರತಿ ಸಂಜೆ ವಿಚಿತ್ರವಾದ ಒಂದು ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ಸುಮಾರು ಐದಡಿ ಅಂತರದಲ್ಲಿ ಎರಡೂ ದೇಶಗಳ ಪ್ರವೇಶದ್ವಾರ (ಗೇಟ್)ಗಳಿವೆ. ಅದರ ಬಳಿಯೇ ಎರಡೂ ದೇಶಗಳ ಧ್ವಜಗಳು ಹಾರಾಡುತ್ತಿರುತ್ತವೆ. ಎರಡೂ ಕಡೆಯ ಸೈನಿಕರು “ಗುಡ್ ಡೇ, ಹೇಗಿದ್ದೀರಿ?” ಎಂದು ಕೆಲವೊಮ್ಮೆ ಒಬ್ಬರನ್ನೊಬ್ಬರು ವಿಚಾರಿಸಿಕೊಳ್ಳುತ್ತಾರೆ. ನಾನಲ್ಲಿಗೆ ಹೋಗಿದ್ದಾಗ ಭಾರತದ ಹಿರಿಯ ಸೈನ್ಯಾಧಿಕಾರಿಯೊಬ್ಬರು ನನ್ನನ್ನು ಪಾಕಿಸ್ತಾನದ ಸೈನ್ಯಾಧಿಕಾರಿಗೆ ಪರಿಚಯ ಮಾಡಿಕೊಟ್ಟಿದ್ದರು ಎರಡೂ ದೇಶಗಳ ನಡುವಿನ ನೋ ಮ್ಯಾನ್ಸ್ ಲ್ಯಾಂಡ್‍ನಲ್ಲಿ ನಾನೊಂದು ಹೆಜ್ಜೆಯಿಟ್ಟೆ. ಪಾಕಿಸ್ತಾನ ಸೈನ್ಯಾಧಿಕಾರಿಯೂ ಮುಂದೆ ಬಂದರು. ಇಬ್ಬರೂ ಕೈಕುಲುಕಿದೆವು. ಅದೂ ಕಾರ್ಗಿಲ್‍ನಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದ್ದಾಗ.

ಹೀಗೆ ಸೌಹಾರ್ದತೆಯಿಂದಲೇ ವಾಘಾದಲ್ಲಿ ತಮ್ಮ ದಿನಗಳನ್ನು ಕಳೆಯುವ ಎರಡೂ ಕಡೆಯ ಸೈನಿಕರು ಸಂಜೆಯಾಗುತ್ತಿದ್ದಂತೆ ಒಂದು ರೀತಿಯ ಪೈಪೋಟಿಗೆ ಇಳಿಯುತ್ತಾರೆ. ಎರಡೂ ಗೇಟ್‍ಗಳ ಹತ್ತಿರ ಸಾರ್ವಜನಿಕರು ಸೇರುತ್ತಿದ್ದಂತೆ, ಧ್ವಜ ಕೆಳಗಿಳಿಸುವ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಯಾವ ಕಡೆಯ ಸೈನಿಕರು ಹೆಚ್ಚು ಆಕ್ರಮಣಿಶೀಲತೆಯನ್ನು ಪ್ರದರ್ಶಿಸುತ್ತಾರೆ, ಯಾರು ಹೆಚ್ಚು ರಭಸದಿಂದ ಕಿವಿಗಪ್ಪಳಿಸುವಂತೆ ತಮ್ಮ ಬೂಟುಗಳನ್ನು ನೆಲಕ್ಕೆ ಅಪ್ಪಳಿಸುತ್ತಾರೆ ಎಂದೆಲ್ಲಾ ಗಮನಿಸುವ ಸಾರ್ವಜನಿಕರು ತಮ್ಮ ಕಡೆಯವರನ್ನು ಚಪ್ಪಾಳೆ ತಟ್ಟುತ್ತಾ, ಘೋಷಣೆಗಳನ್ನು ಕೂಗುತ್ತಾ ಹುರಿದುಂಬಿಸುತ್ತಾರೆ. ಎರಡೂ ಕಡೆಯ ಸೈನಿಕರ ನಡುವೆ ಒಂದು ಸಣ್ಣ ಯುದ್ಧ ನಡೆಯುತ್ತಿದೆಯೇನೋ ಎಂಬ ವಾತಾವರಣ ನಿರ್ಮಾಣವಾಗುತ್ತದೆ.

ಆದರೆ ವಿಚಿತ್ರ ಸಂಗತಿಯೇನೆಂದರೆ, ಈ ಧ್ವಜ ಕೆಳಗಿಳಿಸುವ ಆಚರಣೆ ಮುಗಿದ ಮರುಕ್ಷಣವೇ ಎರಡೂ ಕಡೆಯ ಸಾರ್ವಜನಿಕರು ಗೇಟ್‍ಗಳ ಹತ್ತಿರ ಧಾವಿಸುತ್ತಾರೆ. ಒಬ್ಬರನ್ನೊಬ್ಬರು ಕುತೂಹಲದಿಂದ ನೋಡುತ್ತಿರುತ್ತಾರೆ. ಅಲ್ಲಿ ಯಾವುದೇ ರೀತಿಯ ಪೈಪೋಟಿ ಇರುವುದಿಲ್ಲ. ಬದಲಾಗಿ ‘ನಮ್ಮಂತೆಯೇ ಇದ್ದೀರಲ್ಲಾ ನೀವು’ ಎಂಬ ಭಾವನೆ ಮೂಡಿರುತ್ತದೆ. ದೇಶ ವಿಭಜನೆಯ ಸಮಯದಲ್ಲಿ ಬೇರೆಯಾದ ತಮ್ಮ ಬಂಧುಗಳನ್ನು ಮತ್ತೆ ಕಾಣಬಹುದೇನೋ ಎಂಬ ತವಕದಿಂದ ಕೆಲವರು ವಾಘಾ ಗಡಿಗೆ ಪದೇಪದೇ ಬರುತ್ತಿರುತ್ತಾರೆ. ಈ ಕಡೆಯಿಂದ ಇವರು, ಆ ಕಡೆಯಿಂದ ಅವರು ಹೀಗೆ ಮೌನವಾಗಿ ನೋಡುತ್ತಲೇ ನಿಲ್ಲುವ ಜನ ಮತ್ತೆ ತಮ್ಮ ಮನೆಯತ್ತ ಮರುಳುವುದು ಎರಡೂ ಕಡೆಯ ಸೈನಿಕರು ಅವರನ್ನು ಅಲ್ಲಿಂದ ಓಡಿಸಿದಾಗಲೇ!

ಇದೆಲ್ಲವನ್ನು ನೆನಪು ಮಾಡಿಕೊಟ್ಟಿದ್ದು ನೂರ್ ಫಾತಿಮಾ ಎಂಬ ಮುದ್ದು ಮಗು. ಈ ಕೂಸಿನ ಶಸ್ತ್ರಚಿಕಿತ್ಸೆ ಬಗ್ಗೆ ಈಗಾಗಲೇ ಸಾಕಷ್ಟು ಸುದ್ದಿಗಳು ಎಲ್ಲ ಕಡೆಯೂ ಪ್ರಕಟವಾಗಿದೆ. ಆದರೆ ನನಗೆ ಇಷ್ಟವಾದದ್ದು ಆಕೆಗೆ ಭಾರತೀಯರು ನೀಡಿದ ಭಾವನಾತ್ಮಕ ಹಾಗೂ ಆರ್ಥಿಕ ಬೆಂಬಲ. ರಾಜಕಾರಣಿಗಳಿಗೆ ಸಾಧ್ಯವಾಗದಂತಹ ಸಹಾಯವನ್ನು ಜನ ನೀಡಿದ್ದಾರೆ. ನೂರ್‍ಳ ತಂದೆತಾಯಿ ಅದನ್ನು ಅಷ್ಟೇ ಸೌಜನ್ಯದಿಂದ ಸ್ವೀಕರಿಸಿದ್ದಾರೆ.

ನೂರ್‍ಳ ತಂದೆ ಬಡ ಮಕ್ಕಳಿಗೆಂದೇ ಶುರು ಮಾಡಿರುವ ‘ದೋಸ್ತಿ ಫಂಡ್’ (ಸ್ನೇಹನಿಧಿ)ಗೆ ಎಷ್ಟೋ ಭಾರತೀಯರು ಹಣ ನೀಡಿದ್ದಾರೆ. ಹಿಂದೆ ಲಾಹೋರ್‌ನಲ್ಲಿ ವಾಸಿಸುತ್ತಿದ್ದ, ಆದರೆ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಕೈಗಾರಿಕೋದ್ಯಮಿಯೊಬ್ಬರು ಅನಾಮಧೇಯವಾಗಿ ಈ ನಿಧಿಗೆ 12 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಪಾಕಿಸ್ತಾನದ ಮುಸ್ಲಿಂ ಒಬ್ಬರು ಶುರುಮಾಡಿರುವ ಈ ನಿಧಿಗೆ ಭಾರತದ ಹಿಂದೂ ಒಬ್ಬರು ಇಂತಹ ದೊಡ್ಡ ಮೊತ್ತದ ದಾನ ನೀಡಿರುವುದು ಎರಡೂ ದೇಶಗಳ ಜನರಿಗೆ ಬೇಕಿರುವುದು ಸ್ನೇಹ ಮತ್ತು ಸೌಹಾರ್ದತೆಯ ಬಾಳು ಎಂಬುದನ್ನು ತೋರಿಸುತ್ತದೆ.

ದೇಶದಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಜನಸಾಮಾನ್ಯರು ತಮಗೆ ಧಾರ್ಮಿಕ ಭಿನ್ನತೆ ಮುಖ್ಯ ಅಲ್ಲವೇ ಅಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತದ ವೈರತ್ವವಿರುವುದು ನಮ್ಮ ದೇಶದ ಸುಭದ್ರತೆಯ ರಕ್ಷಣೆಗಾಗಿಯೇ ಹೊರತು, ಆ ದೇಶದ ಜನರ ವಿರುದ್ಧವಲ್ಲ, ಅವರ ಧರ್ಮದ ವಿರುದ್ಧವೂ ಅಲ್ಲ ಎಂದು ನೂರ್ ಪ್ರಕರಣ ತೋರಿಸುತ್ತದೆ.

ನೂರ್ ಎಂಬ ಬಾಲಕಿ ಬೇರೆ ದೇಶದವಳು, ಬೇರೆ ಧರ್ಮದವಳು ಎಂಬ ಭೇದಭಾವವನ್ನು ಅಲಕ್ಷಿಸಿದ್ದಾರೆ ಭಾರತೀಯರು. ಗುಜರಾತಿನಲ್ಲಿ ನಡೆದ ಕೋಮುದಳ್ಳುರಿಗೆ ತುತ್ತಾದ ಮುಸ್ಲಿಮರ ನೆರವಿಗೆ ಬಹಿರಂಗವಾಗಿ ಬರಲು ಹಿಂಜರಿದಿದ್ದ ಭಾರತೀಯರು ಪಾಕಿಸ್ತಾನದ ಮುಸ್ಲಿಂ ಬಾಲಕಿಗೆ ನೆರವಾಗಿದ್ದಾರೆ.

ತಮ್ಮ ಎದೆಯಲ್ಲಿ ಬರೀ ದ್ವೇಷವನ್ನೇ ತುಂಬಿಕೊಂಡಿರುವವರಿಲ್ಲದಿದ್ದಾಗ, ಮಾನವನ ಮುಖ್ಯಲಕ್ಷಣವೇ ಮಾನವೀಯತೆ… ಇದು ನೂರ್‌ ನಿಂದಾಗಿ ನಮ್ಮ ಜನರೇ ಅರಿತುಕೊಂಡ ಸತ್ಯ.

– ಗೌರಿ ಲಂಕೇಶ್
ಕಂಡಹಾಗೆ (ಸಂಗ್ರಹ) 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...