ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ.
20 ರ ಹರೆಯದ ದಲಿತ ಸುಮದಾಯದ ರಾಹುಲ್ ಎಂಬ ಯುವಕನನ್ನು ಭಾನುವಾರ ಜಿಲ್ಲಾ ಆಸ್ಪತ್ರೆಯಿಂದ ವಾರಣಾಸಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಪ್ರಬಲ ಜಾತಿಗೆ ಸೇರಿದ ಗುಂಪು ರಾಹುಲ್ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಆತ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶುಕ್ರವಾರ ಮಧ್ಯಾಹ್ನ ರಾಹುಲ್ ಮಲವಿಸರ್ಜನೆ ಮಾಡಲು ಔರೈ ಪ್ರದೇಶದ ಕಾಲುವೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ.
ರಾಹುಲ್ ಕಾಲುವೆ ಬಳಿ ಮಲವಿಸರ್ಜನೆ ಮಾಡುವುದನ್ನು ಆಕ್ಷೇಪಿಸಿದ ಕಾರಣ, ಬಲಿಪಶು ಮತ್ತು ಆರೋಪಿ ಶಂಕರ್ ಬಿಂದ್ ನಡುವೆ ವಾಗ್ವಾದ ನಡೆಯಿತು. ದಾಳಿಕೋರ ರಾಹುಲ್ ಅವರನ್ನು ಜಾತಿ ನಿಂದನೆ ಮಾಡಿ, ಕೆಟ್ಟದಾಗಿ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ರಾಹುಲ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಆರೋಪಿ ತನ್ನ ಎಡಗಣ್ಣಿಗೆ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ಹೇಳಿದ್ದಾರೆ. ದಾಳಿ ಬಳಿಕ ಬಲಿಪಶು ತೀವ್ರ ನೋವಿನಿಂದ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಸ್ಥಳೀಯರು ಯುವಕನ ರಕ್ಷಣೆಗೆ ಆಗಮಿಸಿದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ದಾಳಿ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಗೊಂಡ ಯುವಕನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಿ, ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಎಸ್ಪಿ ಹೇಳಿದರು.
“ಅವನ ಎಡಗಣ್ಣಿಗೆ ಗಂಭೀರ ಗಾಯವಾಗಿದ್ದರಿಂದ ದೃಷ್ಠಿ ನಷ್ಟವಾಗಿದೆ ಎಂದು ದೂರು ನೀಡಿದ್ದರಿಂದ, ವೈದ್ಯರು ಭಾನುವಾರ ಅವರನ್ನು ವಾರಣಾಸಿಯ ಬಿಎಚ್ಯು ಟ್ರಾಮಾ ಸೆಂಟರ್ಗೆ ವರ್ಗಾಯಿಸಿದ್ದಾರೆ” ಎಂದು ಮಾಂಗ್ಲಿಕ್ ಹೇಳಿದರು.
ಬಲಿಪಶುವಿನ ತಂದೆ ರಾಮ್ ಧನಿ ಅವರ ದೂರಿನ ಮೇರೆಗೆ ಆರೋಪಿ ಶಂಕರ್ ಬಿಂದ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಆರೋಪಿಯ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಹೇಳಿದರು.


